24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯಿಂದ (NDRF) ಮಾಹಿತಿ ಕಾರ್ಯಾಗಾರ

ಉಜಿರೆ: ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆ ಉಜಿರೆಯಲ್ಲಿ ಸೆ. 1 ರಂದು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯಿಂದ ಮಾಹಿತಿ ಕಾರ್ಯಗಾರ ಪರಿಸರ ಸಂಘದ ವತಿಯಿಂದ ನಡೆಯಿತು.


ಇನೆಸ್ಪಕ್ಟರ್ ಶಾಂತಿಲಾಲ್ ಜಟ್ಟಿ NDRF ಬೆಂಗಳೂರು ಇವರು ವಿದ್ಯಾರ್ಥಿಗಳಿಗೆ ಯಾವ ರೀತಿಯಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ಕೆಲಸ ನಿರ್ವಹಣೆ ಮಾಡುತ್ತದೆ ಎಂದು ತಿಳಿಸಿದರು. ಹೆಡ್ ಕಾನ್ಸ್ಟೇಬಲ್ ಶಂಕರಪ್ಪ ಇದರ ಮುಖ್ಯ ಕರ್ತವ್ಯಗಳು ,ಭೂಕಂಪ, ನೆರೆ ಸುನಾಮಿ ಚಂಡಮಾರುತ ಅಗ್ನಿ ಅವಘಡ, ಅಣು ದುರಂತ, ತುರ್ತು ವೈದ್ಯಕೀಯ ನೆರವು, ವಿಪತ್ತು ಸಂಭವಿಸಿದ ಪ್ರದೇಶದಲ್ಲಿ ಹುಡುಕಾಟ ಮತ್ತು ರಕ್ಷಣಾ ಕಾರ್ಯಚರಣೆ, ಇವುಗಳ ಬಗ್ಗೆ ಮಾಹಿತಿ ನೀಡಿದರು.ಹೆಡ್ ಕಾನ್ಸ್ಟೇಬಲ್ ಗಳಾದ ಸಿಟಿ ದಿವಕರ್ ರೆಡ್ಡಿ, ಸಿ.ಟಿ ಅಲ್ಬಿನ್ , ಸಿ.ಟಿ ಸತೀಶ್ ನಾಯ್ಕ್, ಸಿ.ಟಿ ಸಿರಿಲಾಲ್ ಇವರುಗಳು ಯಾವ ರೀತಿ ಅಪಘಾತಗಳು ಸಂಭವಿಸಿದಾಗ ಮುನ್ನೇ಼ಚರಿಕೆ ಕ್ರಮವನ್ನು ಡೆಮೋ ಮಾಡಿ ತೋರಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರುವ ಮುಖ್ಯೋಪಾಧ್ಯಾಯರಾದ ಸುರೇಶ್ .ಕೆ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮದ ಪ್ರಯೋಜನೆಗಳನ್ನು ವಿವರಿಸಿದರು.


ಒಂಭತ್ತನೇ ತರಗತಿಯ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡಿದರು, ವಿದ್ಯಾರ್ಥಿಗಳಾದ ಮಾನ್ಯ ಸ್ವಾಗತಿಸಿದರು, ರಕ್ಷಿತಾ ವಂದಿಸಿದರು, ಶ್ರುತಾ ಆಳ್ವ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಲ್ಯಾಂಪ್ಸ್ ವಿವಿದೋದ್ದೇಶ ಸಹಕಾರ ಸಂಘದ ಗೋದಾಮು ಮತ್ತು ಮಾರಾಟ ಮಳಿಗೆಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಅಂಕಣಕಾರ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ಭವ್ಯ ಸ್ವಾಗತ

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 17 ನೇ ಪಾಯಿಂಟ್ ನಲ್ಲಿ ಕಾರ್ಯಾಚರಣೆ ಆರಂಭ

Suddi Udaya

ಸಮಾಜ ಸೇವಕ ಡಾ.ರವಿ ಪೂಜಾರಿ ಕಕ್ಕೆಪದವುರವರಿಗೆ ಒಳಿದು ಬಂದ ಸಮಾಜ ರತ್ನ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಬುರುಡೆ ಪ್ರಕರಣ ವಿಚಾರಣೆ ಫೆ.13ಕ್ಕೆ ಮುಂದೂಡಿಕೆ

Suddi Udaya
error: Content is protected !!