25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯಿಂದ (NDRF) ಮಾಹಿತಿ ಕಾರ್ಯಾಗಾರ

ಉಜಿರೆ: ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆ ಉಜಿರೆಯಲ್ಲಿ ಸೆ. 1 ರಂದು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯಿಂದ ಮಾಹಿತಿ ಕಾರ್ಯಗಾರ ಪರಿಸರ ಸಂಘದ ವತಿಯಿಂದ ನಡೆಯಿತು.


ಇನೆಸ್ಪಕ್ಟರ್ ಶಾಂತಿಲಾಲ್ ಜಟ್ಟಿ NDRF ಬೆಂಗಳೂರು ಇವರು ವಿದ್ಯಾರ್ಥಿಗಳಿಗೆ ಯಾವ ರೀತಿಯಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ಕೆಲಸ ನಿರ್ವಹಣೆ ಮಾಡುತ್ತದೆ ಎಂದು ತಿಳಿಸಿದರು. ಹೆಡ್ ಕಾನ್ಸ್ಟೇಬಲ್ ಶಂಕರಪ್ಪ ಇದರ ಮುಖ್ಯ ಕರ್ತವ್ಯಗಳು ,ಭೂಕಂಪ, ನೆರೆ ಸುನಾಮಿ ಚಂಡಮಾರುತ ಅಗ್ನಿ ಅವಘಡ, ಅಣು ದುರಂತ, ತುರ್ತು ವೈದ್ಯಕೀಯ ನೆರವು, ವಿಪತ್ತು ಸಂಭವಿಸಿದ ಪ್ರದೇಶದಲ್ಲಿ ಹುಡುಕಾಟ ಮತ್ತು ರಕ್ಷಣಾ ಕಾರ್ಯಚರಣೆ, ಇವುಗಳ ಬಗ್ಗೆ ಮಾಹಿತಿ ನೀಡಿದರು.ಹೆಡ್ ಕಾನ್ಸ್ಟೇಬಲ್ ಗಳಾದ ಸಿಟಿ ದಿವಕರ್ ರೆಡ್ಡಿ, ಸಿ.ಟಿ ಅಲ್ಬಿನ್ , ಸಿ.ಟಿ ಸತೀಶ್ ನಾಯ್ಕ್, ಸಿ.ಟಿ ಸಿರಿಲಾಲ್ ಇವರುಗಳು ಯಾವ ರೀತಿ ಅಪಘಾತಗಳು ಸಂಭವಿಸಿದಾಗ ಮುನ್ನೇ಼ಚರಿಕೆ ಕ್ರಮವನ್ನು ಡೆಮೋ ಮಾಡಿ ತೋರಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರುವ ಮುಖ್ಯೋಪಾಧ್ಯಾಯರಾದ ಸುರೇಶ್ .ಕೆ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮದ ಪ್ರಯೋಜನೆಗಳನ್ನು ವಿವರಿಸಿದರು.


ಒಂಭತ್ತನೇ ತರಗತಿಯ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡಿದರು, ವಿದ್ಯಾರ್ಥಿಗಳಾದ ಮಾನ್ಯ ಸ್ವಾಗತಿಸಿದರು, ರಕ್ಷಿತಾ ವಂದಿಸಿದರು, ಶ್ರುತಾ ಆಳ್ವ ಕಾರ್ಯಕ್ರಮ ನಿರೂಪಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭೇಟಿ: ವಿಶೇಷ ಪೂಜೆ

Suddi Udaya

ಮುಂಡಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಅಧಿಕಾರ ಹಸ್ತಾಂತರ

Suddi Udaya

ದಿಡುಪೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯಿಂದ ಗಣೇಶೋತ್ಸವ: ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಆಚಾರ್ಯ, ಕಾರ್ಯದರ್ಶಿಯಾಗಿ ಕೃಷ್ಣಕುಮಾರ್

Suddi Udaya

ಕುದುರೆಮುಖ, ನೇತ್ರಾವತಿ ಪೀಕ್ ಚಾರಣಕ್ಕೆ ಆನ್‌ಲೈನ್ ಮೂಲಕ ಬುಕಿಂಗ್

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!