September 6, 2026
Uncategorized

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರ

ಉಜಿರೆ: ಫಿಸಿಯೋಥೆರಪಿ ದಿನದ ಪ್ರಯುಕ್ತ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರವನ್ನು ನಡೆಸಲಾಯಿತು.

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ ಜನಾರ್ದನ್ ಶಿಬಿರ ಉದ್ಘಾಟಿಸಿ ಮಾತನಾಡುತ್ತಾ, ಫಿಸಿಯೋಥೆರಪಿಯಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳಿಗೆ ಅದರದ್ದೇ ಆದ ಚಿಕಿತ್ಸಾ ವಿಧಾನಗಳಿವೆ. ನಮ್ಮ ಆಸ್ಪತ್ರೆಯಲ್ಲಿ ರೋಗಿಗಳ ಆರೋಗ್ಯ ಸಮಸ್ಯೆಗಳಿಗೆ ತಕ್ಕಂತೆ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗಿದೆ. ಇಬ್ಬರು ಫಿಸಿಯೋಥೆರಪಿ ತಜ್ಞರು ಫಿಸಿಯೋಥೆರಪಿ ಸೇವೆ ನೀಡುತ್ತಿದ್ದು, ವಿಶ್ವ ಫಿಸಿಯೋಥೆರಪಿ ದಿನದ ಪ್ರಯುಕ್ತ ಈ ದಿನ ರಿಯಾಯಿತಿ ದರದಲ್ಲಿ ಚಿಕಿತ್ಸಾ ಸೌಲಭ್ಯ ನೀಡಲಾಗುತ್ತಿದೆ ಎಂದರು.


ಶಿಬಿರದಲ್ಲಿ ನರ ಮತ್ತು ಮೂಳೆಗಳಿಗೆ ಸಂಬAಧಿಸಿದ ಕಾಯಿಲೆಗಳಿಗೆ, ಮಕ್ಕಳಲ್ಲಿ ಕಂಡುಬರುವ ದೈಹಿಕ ತೊಂದರೆಗಳಿಗೆ, ಶಸ್ತçಚಿಕಿತ್ಸೆಯ ಬಳಿಕದ ಫಿಸಿಯೋಥೆರಪಿ ಮತ್ತು ನೋವು ನಿವಾರಣೆಗಳಿಗೆ ಮಾಡಬೇಕಾದ ಫಿಸಿಯೋಥೆರಪಿಗಳನ್ನು ಉಚಿತವಾಗಿ ಮಾಡಲಾಯಿತು.


ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಫಿಸಿಯೋಥೆರಪಿಸ್ಟ್ ತಜ್ಞರಾದ ಸನ್ನಿಧಿ ಜೈನ್ ಮತ್ತು ಪ್ರೀಥಮ್ ಈ ಶಿಬಿರವನ್ನು ನಡೆಸಿಕೊಟ್ಟರು. ಫಿಸಿಯೋಥೆರಪಿ ಸಮಾಲೋಚನೆಯನ್ನು ಉಚಿತವಾಗಿ ಮಾಡಲಾಯಿತು. ಫಿಸಿಯೋಥೆರಪಿ ವಿಧಾನಗಳಿಗೆ 20% ರಿಯಾಯತಿ ನೀಡಲಾಯಿತು.

Related posts

ಇಡೀ ರಾಜ್ಯದಲ್ಲಿ ಹಗರಣಗಳ ಸರಮಾಲೆ ಮುಂದುವರಿಯುತಿದ್ದು ಅದರೊಂದಿಗೆ ವಕ್ಫ್ ಭೂಸ್ವಾದೀನದ ಮೂಲಕ ಹಿಂದೂ ಸಮಾಜಕ್ಕೆ ಅನ್ಯಾಯ ವೆಸಗುತ್ತಿದೆ: ಕಿಶೋರ್ ಕುಮಾರ್

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya

ಆದಿವಾಸಿ ಸಮುದಾಯದ ಎದುರಿಸುತ್ತಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಸಭೆ ಕರೆದಿರುವ ರಾಜ್ಯ ಸರ್ಕಾರ

Suddi Udaya

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ ಇನ್ನೂ ಕೇವಲ 8 ದಿನ ಮಾತ್ರ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ ತಾಲೂಕು ಮಟ್ಟದ ಸಭೆ

Suddi Udaya
error: Content is protected !!