28.1 C
ಪುತ್ತೂರು, ಬೆಳ್ತಂಗಡಿ
September 10, 2026
ರಾಜಕೀಯ

ಉಜಿರೆ ಶಕ್ತಿಕೇಂದ್ರದ ಕಾರ್ಯಕರ್ತರ ಅಭ್ಯಾಸ ವರ್ಗ ಕಾರ್ಯಕ್ರಮ

ಉಜಿರೆ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷದ ಸಂಘಟನಾ ದೃಷ್ಟಿಯಿಂದ ಸೆ 08 ರಂದು ಉಜಿರೆ ಶಕ್ತಿಕೇಂದ್ರದ ಕಾರ್ಯಕರ್ತರ ಅಭ್ಯಾಸ ವರ್ಗ ಕಾರ್ಯಕ್ರಮ ಶಾರದಾ ಮಂಟಪ ಸಭಾಭವನದಲ್ಲಿ ನಡೆಯಿತು.ಪಕ್ಷದ ಹಿರಿಯ ಕಾರ್ಯಕರ್ತರಾದ ರಘುನಾಥ್ ಶೆಣೈ ಯವರು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು.

ವಿಧಾನಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ರವರು ಉದ್ಘಾಟನಾ ಭಾಷಣ ಜೊತೆಗೆ ಪಕ್ಷ ಸಂಘಟನೆ ಮತ್ತು ಕಾರ್ಯಾಚಟುವಟಿಕೆಯ ಕುರಿತು ವಿಸ್ಕೃತವಾಗಿ ಸಮಾಲೋಚನೆ ನಡೆಸಿದರು. ಪಕ್ಷದ ಪ್ರಮುಖರಾದ ನಂದಕುಮಾರ್, ಕೃಷ್ಣಮೂರ್ತಿ, ವೃಷಾoಖ್ ಖಾಡಿಲ್ಕರ್ ಬೈಠಕ್ ತೆಗೆದುಕೊಂಡರು. ದಿನಕರ್ ಕುಲಾಲ್ ರವರು ಸಮಾರೋಪ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಂಡಲ ಅಭ್ಯಾಸವರ್ಗ ಸಂಚಾಲಕರಾದ ಕೊರಗಪ್ಪ ಗೌಡ ಅರಣೆಪಾದೆ, ಉಜಿರೆ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಯಶವoತ್ ಗೌಡ ಪುದುವೆಟ್ಟು, ಪ್ರಧಾನ ಕಾರ್ಯದರ್ಶಿ ನಿರಂಜನ್ , ಕೇಶವ ಭಟ್ ಅತ್ತಾಜೆ, ಶ್ರೀಮತಿ ಪುಷ್ಪಾವತಿ ಆರ್ ಶೆಟ್ಟಿ, ಭಾಸ್ಕರ ಆಚಾರ್ಯ, ಶಕ್ತಿ ಕೇಂದ್ರ ಪ್ರಮುಖರಾದ ಶ್ರೀಮತಿ ಶಶಿಕಲಾ ಪಂಚಾಯತ್ ಸದಸ್ಯರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರು, ಮಿಲ್ಕ್ ಸೊಸೈಟಿ ನಿರ್ದೇಶಕರುಗಳು, ಪಂಚಾಯತ್ ಸದಸ್ಯರು ಗಳು, ಬೂತ್ ಪದಾಧಿಕಾರಿಗಳು, ಪಕ್ಷದ ಅನ್ಯನ್ಯ ಜವಾಬ್ದಾರಿ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಉಜಿರೆ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಉಷಾ ಕಿರಣ್ ಕಾರಂತ್ ಸ್ವಾಗತಿಸಿ, ಬಿಜೆಪಿ ಗೀತೆ ಸಂಧ್ಯಾ ಹಾಗೂ ಸಂಘದ ಗೀತೆ ಜಯಲಕ್ಷ್ಮೀ ಯವರು ಹಾಡಿದರು,ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪೂರ್ಣಿಮಾ ಜಯಂತ್ ಕಾರ್ಯಕ್ರಮ ನಿರೂಪಿಸಿ, ಉಜಿರೆ ಪಂಚಾಯತ್ ಉಪಾಧ್ಯಕ್ಷರಾದ ರವಿ ಕುಮಾರ್ ಬರಮೇಲುರವರು ಧನ್ಯವಾದವಿತ್ತರು.

Related posts

ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯಿಂದ ಪುದುವೆಟ್ಟು ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಅಳದಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನೆ

Suddi Udaya

ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಸ್ಪರ್ಧಿಸುವ ಅಪೇಕ್ಷೆ: ಪತ್ರಿಕಾಗೋಷ್ಠಿ

Suddi Udaya

ಪಕ್ಷೇತರ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಭಟ್ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ ತಾಲೂಕಿನ ಪಂಚ ಗ್ಯಾರಂಟಿ ಸಮಾವೇಶ

Suddi Udaya
error: Content is protected !!