22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಜ್ಞಾನ ವಿಚಾರ ಸಂಕಿರಣ ಮತ್ತು ವಿಜ್ಞಾನ ನಾಟಕ ಸ್ಪರ್ಧೆ


ಉಜಿರೆ : ಶ್ರೀಧ.ಮಂ ಅನುದಾನಿತ ಸೆಕೆಂಡರಿ ಶಾಲೆ ಉಜಿರೆ ಶಾಲೆಯಲ್ಲಿ ವಿಜ್ಞಾನ ವಿಚಾರ ಸಂಕಿರಣ ಮತ್ತು ವಿಜ್ಞಾನ ನಾಟಕ ಸ್ಪರ್ಧೆಗಳು ನಡೆಯಿತು. ನೋಡಲ್ ಅಧಿಕಾರಿ ಸಿದ್ದಲಿಂಗ ಸ್ವಾಮಿ ಅವರು ಪ್ರಾಸ್ತಾವಿಕವಾಗಿ ಮಾತಾಡಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಪರಿಸರದ ಬಗ್ಗೆ ಜಾಗೃತಿ ಮೂಡಬೇಕು ವಿಚಾರಗೋಷ್ಠಿ ವಿಷಯವಾದ ಕ್ವ್ವಾಂಟಮ್ ಯುಗದ ಬಗ್ಗೆ ಡಿಜಿಟಲ್ ಇಂಡಿಯಾ ತಂತ್ರಜ್ಞಾನದ ಬಗ್ಗೆ ಮಾಹಿತಿ ನೀಡಿದರು.

ಮೋಹನ್ ಕುಮಾರ್ ಸಿಯನ್ ಕ್ಷೇತ್ರ ಸಂಪನ್ಮೂಲ ವ್ಯಕ್ತಿಇವರು ಮಾತಡಿ ವಿದ್ಯಾರ್ಥಿಗಳು ದೃಶ್ಯಗಳನ್ನು ನೋಡಿ ಕಲಿಯಬೇಕು ವಿಜ್ಞಾನದ ಪರಿಕಲ್ಪನೆಯನ್ನು ಮೂಡಿಸುವುದು ಅಗತ್ಯ ಎಂದರು.


ವೇದಿಕೆಯಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಬಸವಲಿಂಗಪ್ಪ ಟಿ.ಬಿ, ಪ್ರೌಢ ಶಾಲಾ ಶಿಕ್ಷಣ ಸಂಯೋಜಕರಾದ ಶ್ರೀಮತಿ ಚೇತನಾಕ್ಷಿ ಮತ್ತು ಕ್ಷೇತ್ರ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಪ್ರತಿಮಾ ಮತ್ತು ತೀರ್ಪುಗಾರರಾಗಿ ಶರತ್ ಕುಮಾರ್ ನಿಡ್ಲೆ, ನಿರಂಜನ್ ಕೆಪಿಎಸ್ ಪುಂಜಾಲಕಟ್ಟೆ, ರಾಮಕೃಷ್ಣ ಭಟ್ ಸರಕಾರಿ ಪ್ರೌಢಶಾಲೆ ಬದನಾಜೆ, ಮಹೇಂದ್ರ ಪೂಜಾರಿ ಪುತ್ತಿಲ ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯರಾದ ಕೆ.ಸುರೇಶ್ ಸ್ವಾಗತಿಸಿದರು. ರವೀಶ ಕುಮಾರ್ ಧನ್ಯವಾದ ಸಮರ್ಪಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಹೊಸಪಟ್ಣ ದೊಡ್ಯಾರು ಮನೆಯ ಶ್ರೀಮತಿ ಸುಂದರಿ ನಿಧನ

Suddi Udaya

ಆತ್ಮಹತ್ಯೆಗೆ ಯತ್ನಿಸಿದ್ದ ಕೊಕ್ಕಡದ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya

ಕಳೆ0ಜ :ಆನೆ ದಾಳಿ ಅಡಿಕೆ ಗಿಡ ಮತ್ತು ಬಾಳೆ ಗಿಡ ಸಂಪೂರ್ಣ ನಾಶ

Suddi Udaya

ಸರಳಿಕಟ್ಟೆಯಿಂದ ಗೋವಿಂದಗುರಿ ವರೆಗೆ ಹದಗೆಟ್ಟ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರಕಾರ ಆದೇಶ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!