23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ಸಂಘವು ರೂ. 32.31 ಕೋಟಿ ವ್ಯವಹಾರ, ರೂ. 49.24 ಲಕ್ಷ ನಿವ್ವಳ ಲಾಭ

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆಯು ಸೆ. 7ರಂದು ಕೃಷಿ ಪತ್ತಿನ ಸಹಕಾರಿ ಸಂಘದ ಕನಸು ರೈತ ಸಭಾಭವನದಲ್ಲಿ ಜರುಗಿತು.

ಸಂಘದ ಅಧ್ಯಕ್ಷ ಪಿ ಜಯರಾಜ್ ಹೆಗ್ಡೆ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘವು 32,31,82,518.48 ವ್ಯವಹಾರ ನಡೆಸಿ, ವಾರ್ಷಿಕ ಹಾಲು ಖರೀದಿ 18,30,216.1 ಲೀಟರ್ , ಒಟ್ಟು ಮೊತ್ತ 6,60,57212, ರೂ. 49,24,391.64 ನಿವ್ವಳ ಲಾಭ, ರೂ. 27,47,646 ಉತ್ಪಾದಕರಿಗೆ ಬೋನಸ್ ನೀಡಿದೆ ಎಂದರು.

ಸುಮಾರು ರೂ. 88000 ವನ್ನು 22 ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ಮೂಲಕ ನೀಡಲಾಯಿತು. ಸದಸ್ಯರ ಕ್ಷೇಮನಿಧಿಯಿಂದ ಸುಮಾರು ರೂ. 95000 ಗಳನ್ನು ಆರ್ಥಿಕ ಸಹಾಯಧನ ನೀಡಲಾಯಿತು.

ಸಂಘದ ಮಾಜಿ ನಿರ್ದೇಶಕ ಸೇಸಪ್ಪ ಸಾಲಿಯಾನ್ ರವರು ಹಾಲಿಗೂ ಪಶು ಆಹಾರದ ದರಕ್ಕೂ ವಿಪರೀತ ಏರುಪೇರು ಇದ್ದು ಕನಿಷ್ಢ ರೂ. 50 ಪ್ರತಿ ಲೀಟರ್ ಗೆ ದೊರೆಯುವ ಬಗ್ಗೆ ಒಕ್ಕೂಟ, ಕರ್ನಾಟಕ ಹಾಲು ಮಹಾಮಂಡಳಿ ಪತ್ರ ಬರೆಯುವಂತೆ ಮಹಾಸಭೆಯಲ್ಲಿ ನಿರ್ಣಹಿಸಬೇಕೆಂದು ಒತ್ತಾಯಿಸಿದರು. ಮಹಾಸಭೆಗೆ ಆಗಮಿಸಿದ ವಾರ್ಷಿಕ ಅವಧಿಯಲ್ಲಿ ಹಾಲು ಪೂರೈಸಿದ ಎಲ್ಲಾ ಸದಸ್ಯರಿಗೆ ಕುಕ್ಕರ್ ನೀಡಲಾಯಿತು. ಹಾಗೂ ಅತೀ ಹೆಚ್ಚು ಹಾಲು ಪೂರೈಸಿದ 10 ಜನ ಸದಸ್ಯರು ಹಾಗೂ 10000 ಲೀಟರ್ ಗಿಂತ ಅಧಿಕ ಹಾಲು ಪೂರೈಸಿದ 25ಜನ ಸದಸ್ಯರನ್ನು ಗೌರವಿಸಲಾಯಿತು.

ಈ ವೇಳೆ ಮುಖ್ಯಮಂತ್ರಿ ಪದಕ ಪಡೆದ ಎಂ ಪ್ರವೀಣ್, ಏಕಾಂಗಿಯಾಗಿ 2-3 ದನಗಳನ್ನು ಸಾಕಿಕೊಂಡು ಹೈನುಗಾರಿಕೆ ನಡೆಸುತ್ತಿರುವ ಶ್ರೀಮತಿ ಸರಸ್ವತಿ ಹಾಗೂ ಹೇರಾಜೆ ಸರಕಾರಿ ಶಾಲೆಯನ್ನು ಆರಂಭಿಸಿದ ಅಬ್ದುಲ್ ರಹಿಮಾನ್ ಪಿ.ಕೆ ರವರನ್ನು ಸನ್ಮಾನಿಸಲಾಯಿತು.

ಶ್ರೀಮತಿ ಪ್ರಮೀಳಾ ಪ್ರಾರ್ಥಿಸಿದರು. ನಿರ್ದೇಶಕ ಜನಾರ್ದನ ಗೌಡ ಸ್ವಾಗತಿಸಿದರು. ಒಕ್ಕೂಟದ ಅನುದಾನಗಳ ಬಗ್ಗೆ ವಿಸ್ತರಣಾಧಿಕಾರಿ ರಾಜೇಶ್ ಕಾಮತ್ ವಿವರಿಸಿದರು. ಕಾರ್ಯದರ್ಶಿ ಜಯರಾಜ್ ನಿರೂಪಿಸಿ, ನಿರ್ದೇಶಕ ಪಿ ಕೃಷ್ಣಪ್ಪ ವಂದಿಸಿದರು,

Related posts

ಪಟ್ರಮೆ: ಅನಾರು ನಿವಾಸಿ ಶ್ರೀಮತಿ ದೇವಕಿ ನಿಧನ

Suddi Udaya

ಹತ್ಯಡ್ಕ: ನಿವೃತ್ತ ಶಿಕ್ಷಕ ಮಹಾದೇವ ಹೆಬ್ಬಾರ್ ನಿಧನ

Suddi Udaya

ಇಳಂತಿಲ : ಪ್ರಶಿಕ್ಷಣ ವರ್ಗ – ಹಿಂದೂ ಸಂಗಮದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಗುರುವಾಯನಕೆರೆ: ಸ್ಕೂಟಿ- ಬೈಕ್ ಮುಖಾಮುಖಿ ಡಿಕ್ಕಿ,ಸವಾರರಿಬ್ಬರಿಗೆ ಗಂಭೀರ ಗಾಯ,ಆಸ್ಪತ್ರೆಗೆ ದಾಖಲು

Suddi Udaya

ನಿರಾಶ್ರಿತರಲ್ಲಿ ಹೃದಯಗಳ ಬೆಸುಗೆ” — ತೊಡಂಬಿಲ ಸೇಕ್ರೆಡ್ ಹಾರ್ಟ್ ಚರ್ಚ್‌ನಿಂದ ಸಿಯೋನ್ ಆಶ್ರಮಕ್ಕೆ ನೆರವು

Suddi Udaya

ಕೃಷ್ಣಪ್ಪ ಪೂಜಾರಿಯವರಿಗೆ ಪಿತಾಂಬರ ಹೇರಾಜೆಯವರಿಂದ ಗೌರವ

Suddi Udaya
error: Content is protected !!