22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ಸಂಘವು ರೂ. 32.31 ಕೋಟಿ ವ್ಯವಹಾರ, ರೂ. 49.24 ಲಕ್ಷ ನಿವ್ವಳ ಲಾಭ

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆಯು ಸೆ. 7ರಂದು ಕೃಷಿ ಪತ್ತಿನ ಸಹಕಾರಿ ಸಂಘದ ಕನಸು ರೈತ ಸಭಾಭವನದಲ್ಲಿ ಜರುಗಿತು.

ಸಂಘದ ಅಧ್ಯಕ್ಷ ಪಿ ಜಯರಾಜ್ ಹೆಗ್ಡೆ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘವು 32,31,82,518.48 ವ್ಯವಹಾರ ನಡೆಸಿ, ವಾರ್ಷಿಕ ಹಾಲು ಖರೀದಿ 18,30,216.1 ಲೀಟರ್ , ಒಟ್ಟು ಮೊತ್ತ 6,60,57212, ರೂ. 49,24,391.64 ನಿವ್ವಳ ಲಾಭ, ರೂ. 27,47,646 ಉತ್ಪಾದಕರಿಗೆ ಬೋನಸ್ ನೀಡಿದೆ ಎಂದರು.

ಸುಮಾರು ರೂ. 88000 ವನ್ನು 22 ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ಮೂಲಕ ನೀಡಲಾಯಿತು. ಸದಸ್ಯರ ಕ್ಷೇಮನಿಧಿಯಿಂದ ಸುಮಾರು ರೂ. 95000 ಗಳನ್ನು ಆರ್ಥಿಕ ಸಹಾಯಧನ ನೀಡಲಾಯಿತು.

ಸಂಘದ ಮಾಜಿ ನಿರ್ದೇಶಕ ಸೇಸಪ್ಪ ಸಾಲಿಯಾನ್ ರವರು ಹಾಲಿಗೂ ಪಶು ಆಹಾರದ ದರಕ್ಕೂ ವಿಪರೀತ ಏರುಪೇರು ಇದ್ದು ಕನಿಷ್ಢ ರೂ. 50 ಪ್ರತಿ ಲೀಟರ್ ಗೆ ದೊರೆಯುವ ಬಗ್ಗೆ ಒಕ್ಕೂಟ, ಕರ್ನಾಟಕ ಹಾಲು ಮಹಾಮಂಡಳಿ ಪತ್ರ ಬರೆಯುವಂತೆ ಮಹಾಸಭೆಯಲ್ಲಿ ನಿರ್ಣಹಿಸಬೇಕೆಂದು ಒತ್ತಾಯಿಸಿದರು. ಮಹಾಸಭೆಗೆ ಆಗಮಿಸಿದ ವಾರ್ಷಿಕ ಅವಧಿಯಲ್ಲಿ ಹಾಲು ಪೂರೈಸಿದ ಎಲ್ಲಾ ಸದಸ್ಯರಿಗೆ ಕುಕ್ಕರ್ ನೀಡಲಾಯಿತು. ಹಾಗೂ ಅತೀ ಹೆಚ್ಚು ಹಾಲು ಪೂರೈಸಿದ 10 ಜನ ಸದಸ್ಯರು ಹಾಗೂ 10000 ಲೀಟರ್ ಗಿಂತ ಅಧಿಕ ಹಾಲು ಪೂರೈಸಿದ 25ಜನ ಸದಸ್ಯರನ್ನು ಗೌರವಿಸಲಾಯಿತು.

ಈ ವೇಳೆ ಮುಖ್ಯಮಂತ್ರಿ ಪದಕ ಪಡೆದ ಎಂ ಪ್ರವೀಣ್, ಏಕಾಂಗಿಯಾಗಿ 2-3 ದನಗಳನ್ನು ಸಾಕಿಕೊಂಡು ಹೈನುಗಾರಿಕೆ ನಡೆಸುತ್ತಿರುವ ಶ್ರೀಮತಿ ಸರಸ್ವತಿ ಹಾಗೂ ಹೇರಾಜೆ ಸರಕಾರಿ ಶಾಲೆಯನ್ನು ಆರಂಭಿಸಿದ ಅಬ್ದುಲ್ ರಹಿಮಾನ್ ಪಿ.ಕೆ ರವರನ್ನು ಸನ್ಮಾನಿಸಲಾಯಿತು.

ಶ್ರೀಮತಿ ಪ್ರಮೀಳಾ ಪ್ರಾರ್ಥಿಸಿದರು. ನಿರ್ದೇಶಕ ಜನಾರ್ದನ ಗೌಡ ಸ್ವಾಗತಿಸಿದರು. ಒಕ್ಕೂಟದ ಅನುದಾನಗಳ ಬಗ್ಗೆ ವಿಸ್ತರಣಾಧಿಕಾರಿ ರಾಜೇಶ್ ಕಾಮತ್ ವಿವರಿಸಿದರು. ಕಾರ್ಯದರ್ಶಿ ಜಯರಾಜ್ ನಿರೂಪಿಸಿ, ನಿರ್ದೇಶಕ ಪಿ ಕೃಷ್ಣಪ್ಪ ವಂದಿಸಿದರು,

Related posts

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ರವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ

Suddi Udaya

ಕೇಂದ್ರದಲ್ಲಿ ಎನ್ ಡಿ ಎ ಬಿಜೆಪಿ ಮೋದಿ ಸರಕಾರ 10ನೇ ವರ್ಷಕ್ಕೆ ಪಾದಾರ್ಪಣೆ :ಪ್ರತಾಪಸಿಂಹ ನಾಯಕ್

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಧ್ವಜಾರೋಹಣದೊಂದಿಗೆ ಪ್ರಾರಂಭ

Suddi Udaya

ಉಜಿರೆ: ಹೆದ್ದಾರಿ ಬದಿ ಕೊಳಚೆ ನೀರು ಸಂಗ್ರಹ: ಸಾಂಕ್ರಾಮಿಕ ರೋಗದ ಭೀತಿ

Suddi Udaya

ಮಚ್ಚಿನ: ಮನೆಗೆ ಮರ ಬಿದ್ದು ಹಾನಿ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!