23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ ನಲ್ಲಿ ಗುರುಜಯಂತಿ ಆಚರಣೆ

ತೋಟತ್ತಾಡಿ: ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ ತೋಟತ್ತಾಡಿಯಲ್ಲಿ ಸೆ.07 ರಂದು ಶ್ರೀ ನಾರಾಯಣ ಗುರುಗಳ 171ನೇ ವರ್ಷದ ಗುರುಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.

ಬೆಳಿಗ್ಗೆ ಗುರುಪೂಜೆ ಬಳಿಕ ಸಭಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಬಾಲಕೃಷ್ಣ ಸೌತಡ್ಕ ಉದ್ಘಾಟನೆ ಮಾಡಿದರು.

ಸಂಘದ ಸದಸ್ಯರ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಯಲ್ಲಿ ತೆರ್ಗಡೆಯಾದ ಮಕ್ಕಳಿಗೆ ವಿದ್ಯಾರ್ಥಿವೇತನ ಮತ್ತು ಆಟೋಟ ಸ್ಪರ್ಧೆ ಯ ಬಹುಮಾನವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸುರೇಶ್. ಎಮ್.ಎನ್., ಯೂನಿಯನ್ ಕೌಸಿಲರಾದ ಉನಿಕೃಷ್ಣನ್, ಉಪಾಧ್ಯಕ್ಷ ಶಿವರಾಜನ್, ಗೌರವ ಅಧ್ಯಕ್ಷ ಚಿದಾನಂದ, ಮಹಿಳಾ ಸಂಘ ಅಧ್ಯಕ್ಷೆ ಸಿಂಧು ಅಜಿತ್, ಯೂತ್ ಮೂಮೆಂಟ್ ಅಧ್ಯಕ್ಷ ಸುಧೀರ್ ಹಾಗೂ ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಮನೋಜ್ ನಿರೂಪಿಸಿದರು. ಕಾರ್ಯಕ್ರಮದಲ್ಲಿ 250ಕ್ಕೂ ಹೆಚ್ಚು ಜನ ಭಾಗಿಯಾಗಿ 20 ಬಗೆಯ ಪದಾರ್ಥಗಳು ಹಾಗೂ ಪಾಯಸದೊಂದಿಗೆ ಚದಯ ಸದ್ಯ ಸವಿದರು.

Related posts

ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ನಾಳ ದಿನೇಶ್ ಶೆಟ್ಟಿ ಯಾನೆ ದಿನ್ನು ಬಂಧನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಯಾಗಿ ಖಾಲಿದ್ ಪುಲಾಬೆ ನೇಮಕ

Suddi Udaya

ಕಳೆoಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಬಂಗಾಡಿ ಪರಿಸರದಲ್ಲಿ ಏರ್ ಟೆಲ್ ಟವರ್ ಇದ್ದು ಪ್ರಯೋಜನಕ್ಕೆ ಬಾರದ ನೆಟ್ವರ್ಕ್

Suddi Udaya

ಲಾಯಿಲ: ಶ್ರೀ ಮಹಮ್ಮಾಯಿ ಅಮ್ಮನವರ ಮಾರಿ ಪೂಜೋತ್ಸವ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya
error: Content is protected !!