23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ನಾರಾವಿ: “ಶಿಕ್ಷಕ ವೃತ್ತಿ ತುಂಬಾ ಪವಿತ್ರವಾದದ್ದು. ವಿದ್ಯಾರ್ಥಿಗಳು ಮಾಡುವ ತಪ್ಪುಗಳನ್ನು ಎತ್ತಿ ತೋರಿಸದೆ ನಯವಾಗಿ ತಿದ್ದಿ ಅವರನ್ನು ಸರಿದಾರಿಗೆ ತರುವವನೇ ನಿಜವಾದ ಶಿಕ್ಷಕ. ಗುರು ಶಿಷ್ಯರ ಸಂಬಂಧ ಅಮರವಾದುದು “ಎಂದು ಸಂತ ಅಂತೋನಿ ಕಾಲೇಜಿನ ಪ್ರಾoಶುಪಾಲ ಸಂತೋಷ್ ಸಲ್ದಾನ ಹೇಳಿದರು.

ಅವರು ಸಂತ ಅಂತೋನಿ ಪದವಿ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಂಟಿಯಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಸಲ್ಲಿಸಲಾಯಿತು. ವೇದಿಕೆಯಲ್ಲಿ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು. ದ್ವಿತೀಯ ಪಿ ಯು ಸಿ ವಿದ್ಯಾರ್ಥಿನಿ ಕು. ಗ್ಲೆನಿಷಾ ಸ್ವಾಗತಿಸಿದರು. ಕು ಕಾವ್ಯ, ಡಾ. ಸರ್ವ ಪಳ್ಳಿ ರಾಧಾಕೃಷ್ಣನ್ ಅವರ ಜೀವನ ಸಾಧನೆಯನ್ನು ವಿವರಿಸಿದರು. ಕು ಶೈಲಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಪದವಿ ಕಾಲೇಜು ವಿದ್ಯಾರ್ಥಿಗಳು ಎಲ್ಲಾ ಉಪನ್ಯಾಸಕರಿಗೆ ಸ್ಪರ್ಧೆಗಳನ್ನು ಏರ್ಪಡಿಸಿ ರಂಜಿಸಿದರು.

Related posts

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಾಯರ್ತಡ್ಕ ಶಾಲೆಗೆ ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿದ ರಾಷ್ಟ್ರಪತಿ ಪ್ರಶಸ್ತಿ ವಿಜೇತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರಿಗೆ ಸನ್ಮಾನ

Suddi Udaya

ನಡ: ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿ ಪರಿಷತ್ತಿನ ಚುನಾವಣೆ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ದೀಪಾವಳಿ ಸ್ಪೆಷಲ್ ಆಫರ್

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ದೂರುದಾರ ಎಸ್ಐಟಿ ಕಸ್ಟಡಿಗೆ

Suddi Udaya

ಆಳ್ವಾಸ್ ಕಾಲೇಜು: ಡಾ. ನರಹಳ್ಳಿ ಬಾಲಸುಬ್ರಮಣ್ಯ ಮತ್ತು ಜೀವನ: ಒಂದು ಪಟ್ಟಾಂಗ – ಪ್ರೀತಿಯ ಸಖ್ಯ” ವಿಶೇಷ ಕಾರ್ಯಕ್ರಮ

Suddi Udaya

ಬೆಳಾಲು ಪ್ರೌಢ ಶಾಲೆ ವಿದ್ಯಾರ್ಥಿ ಸಂಸತ್ ಉದ್ಘಾಟನೆ

Suddi Udaya
error: Content is protected !!