September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ನಾರಾವಿ: “ಶಿಕ್ಷಕ ವೃತ್ತಿ ತುಂಬಾ ಪವಿತ್ರವಾದದ್ದು. ವಿದ್ಯಾರ್ಥಿಗಳು ಮಾಡುವ ತಪ್ಪುಗಳನ್ನು ಎತ್ತಿ ತೋರಿಸದೆ ನಯವಾಗಿ ತಿದ್ದಿ ಅವರನ್ನು ಸರಿದಾರಿಗೆ ತರುವವನೇ ನಿಜವಾದ ಶಿಕ್ಷಕ. ಗುರು ಶಿಷ್ಯರ ಸಂಬಂಧ ಅಮರವಾದುದು “ಎಂದು ಸಂತ ಅಂತೋನಿ ಕಾಲೇಜಿನ ಪ್ರಾoಶುಪಾಲ ಸಂತೋಷ್ ಸಲ್ದಾನ ಹೇಳಿದರು.

ಅವರು ಸಂತ ಅಂತೋನಿ ಪದವಿ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಂಟಿಯಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಸಲ್ಲಿಸಲಾಯಿತು. ವೇದಿಕೆಯಲ್ಲಿ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು. ದ್ವಿತೀಯ ಪಿ ಯು ಸಿ ವಿದ್ಯಾರ್ಥಿನಿ ಕು. ಗ್ಲೆನಿಷಾ ಸ್ವಾಗತಿಸಿದರು. ಕು ಕಾವ್ಯ, ಡಾ. ಸರ್ವ ಪಳ್ಳಿ ರಾಧಾಕೃಷ್ಣನ್ ಅವರ ಜೀವನ ಸಾಧನೆಯನ್ನು ವಿವರಿಸಿದರು. ಕು ಶೈಲಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಪದವಿ ಕಾಲೇಜು ವಿದ್ಯಾರ್ಥಿಗಳು ಎಲ್ಲಾ ಉಪನ್ಯಾಸಕರಿಗೆ ಸ್ಪರ್ಧೆಗಳನ್ನು ಏರ್ಪಡಿಸಿ ರಂಜಿಸಿದರು.

Related posts

ಕೊಕ್ಕಡ ಜೆಸಿ ಸಾಮಾನ್ಯ ಸಭೆ: ವಾರ್ಷಿಕ ಕ್ರಿಯಾಯೋಜನೆ ಮಂಜೂರಾತಿ

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ನಿರ್ದೇಶಕರ ಹಾಗೂ ವಿಶೇಷ ಆಹ್ವಾನಿತರ ಸಭೆ: ದೀಪಾವಳಿಯ ತುಡಾರು ಪರ್ಬ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ರಾಮಲಾಲ್ಲಾನ ಪ್ರಾಣ ಪ್ರತಿಷ್ಠೆ: ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಶ್ರೀ ರಾಮೋತ್ಸವ: ಸುರಕ್ಷಾ ಆಚಾರ್ಯ ರವರ ಕೈಚಳಕದಲ್ಲಿ ಸುಂದರವಾಗಿ ಮೂಡಿಬಂದ ರಾಮಮಂದಿರ

Suddi Udaya

ನೆರಿಯ: ಕೋಲೋಡಿ ತೋಡಿಗೆ ಪೈಪ್ ಮೋರಿ ಅಳವಡಿಕೆ: ಭರವಸೆ ಈಡೇರಿಸಿದ ರಕ್ಷಿತ್ ಶಿವರಾಂ

Suddi Udaya

ಜು.13: ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ಧೇಶ ಸಹಕಾರ ಸಂಘದ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಲೋಕಾಯುಕ್ತ ಎಸ್ಪಿಯವರಿಂದ ಸಾರ್ವಜನಿಕ ಕುಂದು ಕೊರತೆ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ

Suddi Udaya
error: Content is protected !!