30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೆರಿಯ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

ನೆರಿಯ ಗ್ರಾಮದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಸೆ.7 ರಂದು ನಡೆದ ನೆರಿಯ ಶಕ್ತಿ ಕೇಂದ್ರ ಮಟ್ಟದ ಅಭ್ಯಾಸ ವರ್ಗ ಸಭೆ ಸೇವಾ ಸಹಕಾರಿ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ಲೋಕಯ್ಯ ಗೌಡ ಇಟ್ಯಾಡಿ, ಸೋಂಪ ಗೌಡ ಬಾಂದಡ್ಕ, ಶಾಂತಪ್ಪ ಮಲೆಕುಡಿಯ ದೀಪ ಬೆಳಗಿಸಿ ಉದ್ಘಾಟಿಸಿದರು. ಅಭ್ಯಾಸ ವರ್ಗದ ಸಂಚಾಲಕರಾದ ಕೊರಗಪ್ಪ ಗೌಡ ಚಾರ್ಮಾಡಿ ಉದ್ಘಾಟನಾ ಭಾಷಣ ಮಾಡಿದರು.

ವೇದಿಕೆಯಲ್ಲಿ ಬಾಬು ಗೌಡ ಪರ್ಪಲ ಉಪಸ್ಥಿತರಿದ್ದರು. ಈ ಮಹಾಬಲ ಗೌಡ, ರಾಜೇಶ್ ಪೆರ್ಮುಡ, ವೃಷಾಂಕ್ ಖಾಡಿಲ್ಕರ್, ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ನಿರಂಜನ್ ಶೆಟ್ಟಿ ಇವರುಗಳು ಬೈಠಕ್ ನೀಡಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಮಾರೋಪ ಭಾಷಣ ಮಾಡಿ, ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ನೆರೆದ ಕಾರ್ಯಕರ್ತರಿಗೆ ಅರಿವು ಮೂಡಿಸಿದರು.

ಈ ಸಂದರ್ಭದಲ್ಲಿ ಉಜಿರೆ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಯಶವಂತ ಪುದುವೆಟ್ಟು, ಪಂಚಾಯತ್ ಅಧ್ಯಕ್ಷ ಶ್ರಿಮತಿ ವಸಂತಿ, ಶಕ್ತಿ ಕೇಂದ್ರದ ಪ್ರಮುಖರಾದ ವಿಶ್ವನಾಥ ದ ಗೌಡ, ಸಿಎ ಅಧ್ಯಕ್ಷ ಪ್ರಕಾಶ್ ನಾರಾಯಣ, ನೆರಿಯ ಪಂಚಾಯತ್ ಸದಸ್ಯರುಗಳು, ಬೂತ್ ಅಧ್ಯಕ್ಷರುಗಳು, ಪದಾಧಿಕಾರಿಗಳು, ಹಾಗೂ ಅನನ್ಯ ಜವಾಬ್ದಾರಿಯ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ:ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೆ. ಹರೀಶ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗಂಗಾಧರ ಮಿತ್ತಮಾರು ಅವಿರೋಧ ಆಯ್ಕೆ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿ ದೇವಸ್ಥಾನದ ವತಿಯಿಂದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಕೊಕ್ಕಡ : ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ದೈವಸ್ಥಾನದಲ್ಲಿ ಕಲಶಾಭಿಷೇಕ, ದೈವಗಳಿಗೆ ತಂಬಿಲ ಸೇವೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

‘ಮಕ್ಕಳಿಗೆ ಓದುವುದು ಎಷ್ಟು ಮಹತ್ವ’ ವಿಷಯದ ಕುರಿತು ಪದ್ಮಲತಾ ಮೋಹನ್ ನಿಡ್ಲೆಯವರಿಂದ ಉಪನ್ಯಾಸ

Suddi Udaya
error: Content is protected !!