25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ತಿಲ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ತಣ್ಣೀರುಪಂತ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕು ತಣ್ಣೀರುಪಂತ ವಲಯ ದ.ಕ.ಜಿ.ಪ ಸರಕಾರಿ ಪ್ರೌಢಶಾಲೆ ಪುತ್ತಿಲದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಉದ್ಘಾಟನೆಯನ್ನು ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಜಯರಾಜ್ ಹೆಗ್ಡೆ ಪುತ್ತಿಲರವರು ನೆರವೇರಿಸಿ, ಮಕ್ಕಳಿಗೆ ಶುಭಹಾರೈಸಿದರು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಬಿ.ಸೋಮಶೇಖರ್ ಶೆಟ್ಟಿಯವರು ದುಶ್ಚಟದಿಂದ ಮಕ್ಕಳು ದೂರ ಇರಬೇಕು. ತಂದೆ ತಾಯಿಗೆ ಉತ್ತಮ ಮಕ್ಕಳಾಗಿ ಶಾಲೆಯಲ್ಲಿ ಉತ್ತಮ ವಿದ್ಯಾರ್ಥಿಗಳಾಗಿ ಬೆಳೆಯಬೇಕು ಮದ್ಯಪಾನ, ಸಿಗರೇಟ್, ಗಾಂಜಾ, ಆಫೀಮ್ ಇವುಗಳಿಂದ ದೂರವಿದ್ದು, ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಮೂಡಿ ಬರಬೇಕು ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಅಧ್ಯಕ್ಷ ರಾಜಶೇಖರ ರೈ, ಶಾಲೆಯ ಮುಖ್ಯೋಪಾಧ್ಯಾಯರಾದ ಮಹೇಂದ್ರ ಪೂಜಾರಿ, ಪುತ್ತಿಲ ಒಕ್ಕೂಟದ ಕಾರ್ಯದರ್ಶಿಯಾದ ಸುಖಲತಾ, ಸೇವಾಪ್ರತಿನಿಧಿಯಾದ ಸುನೀತಾ ಹಾಗೂ ಶಾಲೆಯ ಶಿಕ್ಷಕ ವೃಂದಾದವರು ಮತ್ತು ಮಕ್ಕಳು ಉಪಸ್ಥಿತರಿದ್ದರು.

ವಲಯದ ಮೇಲ್ವಿಚಾರಕರಾದ ವಿಶ್ವನಾಥ ಪೂಜಾರಿ ಕಾರ್ಯಕ್ರಮ ನಿರೂಪಿಸಿ , ಸೇವಾಪ್ರತಿನಿಧಿ ಶಾಂತ ಸ್ವಾಗತಿಸಿ, ಶಿಕ್ಷಕ ಪ್ರದೀಪ್ ಧನ್ಯವಾದವಿತ್ತರು.

Related posts

ಎಸ್,ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಮೂರನೇ ಸ್ಥಾನ ಪಡೆದ ಸುಪ್ರಿಯಾ ಎಸ್ ಇವರನ್ನು ಮೂಡುಕೋಡಿ ಬಿಲ್ಲವ ಸಂಘ ಮತ್ತು ವೇಣೂರು ಯುವವಾಹಿನಿ ಘಟಕದ ವತಿಯಿಂದ ಸನ್ಮಾನ

Suddi Udaya

ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಜ್ಜಿ ಹೇಮಾವತಿ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಹಿಂದೂ ಸಂರಕ್ಷಣಾ ಯಾತ್ರೆ ಬಗ್ಗೆ ಹಾಕಿದ ಎರಡು ಬ್ಯಾನರ್ ಹರಿದ ಕಿಡಿಗೇಡಿಗಳು

Suddi Udaya

ಪೆರಿಂಜೆ ಪಡ್ಯಾರಬೆಟ್ಟ ಕ್ಷೇತ್ರದಿಂದ ಪುಸ್ತಕ ವಿತರಣೆ

Suddi Udaya

ಮೇ 26: ಮಳೆಗಾಲದ – ಪ್ರಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ, ನಿರ್ವಹಣೆ ಹಾಗೂ ತುರ್ತು ಪರಿಹಾರಗಳ ಬಗ್ಗೆ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ ಜೊತೆ ಸಮಾಲೋಚನಾ ಸಭೆ

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya
error: Content is protected !!