September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ತಿಲ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ತಣ್ಣೀರುಪಂತ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕು ತಣ್ಣೀರುಪಂತ ವಲಯ ದ.ಕ.ಜಿ.ಪ ಸರಕಾರಿ ಪ್ರೌಢಶಾಲೆ ಪುತ್ತಿಲದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಉದ್ಘಾಟನೆಯನ್ನು ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಜಯರಾಜ್ ಹೆಗ್ಡೆ ಪುತ್ತಿಲರವರು ನೆರವೇರಿಸಿ, ಮಕ್ಕಳಿಗೆ ಶುಭಹಾರೈಸಿದರು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಬಿ.ಸೋಮಶೇಖರ್ ಶೆಟ್ಟಿಯವರು ದುಶ್ಚಟದಿಂದ ಮಕ್ಕಳು ದೂರ ಇರಬೇಕು. ತಂದೆ ತಾಯಿಗೆ ಉತ್ತಮ ಮಕ್ಕಳಾಗಿ ಶಾಲೆಯಲ್ಲಿ ಉತ್ತಮ ವಿದ್ಯಾರ್ಥಿಗಳಾಗಿ ಬೆಳೆಯಬೇಕು ಮದ್ಯಪಾನ, ಸಿಗರೇಟ್, ಗಾಂಜಾ, ಆಫೀಮ್ ಇವುಗಳಿಂದ ದೂರವಿದ್ದು, ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಮೂಡಿ ಬರಬೇಕು ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಅಧ್ಯಕ್ಷ ರಾಜಶೇಖರ ರೈ, ಶಾಲೆಯ ಮುಖ್ಯೋಪಾಧ್ಯಾಯರಾದ ಮಹೇಂದ್ರ ಪೂಜಾರಿ, ಪುತ್ತಿಲ ಒಕ್ಕೂಟದ ಕಾರ್ಯದರ್ಶಿಯಾದ ಸುಖಲತಾ, ಸೇವಾಪ್ರತಿನಿಧಿಯಾದ ಸುನೀತಾ ಹಾಗೂ ಶಾಲೆಯ ಶಿಕ್ಷಕ ವೃಂದಾದವರು ಮತ್ತು ಮಕ್ಕಳು ಉಪಸ್ಥಿತರಿದ್ದರು.

ವಲಯದ ಮೇಲ್ವಿಚಾರಕರಾದ ವಿಶ್ವನಾಥ ಪೂಜಾರಿ ಕಾರ್ಯಕ್ರಮ ನಿರೂಪಿಸಿ , ಸೇವಾಪ್ರತಿನಿಧಿ ಶಾಂತ ಸ್ವಾಗತಿಸಿ, ಶಿಕ್ಷಕ ಪ್ರದೀಪ್ ಧನ್ಯವಾದವಿತ್ತರು.

Related posts

ಲಾಯಿಲ: ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ನಡ ಗ್ರಾಮ ಸಹಾಯಕ ಜಯರಾಜ್ ಮೃತ್ಯು

Suddi Udaya

ಡಿ.28-ಜ.2: ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ

Suddi Udaya

ಸೂಳಬೆಟ್ಟು ಡೋಂಗ್ರೆ ಕುಟುಂಬಸ್ಥರಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ‘ನಾಂದಿ’ 2025 ತರಬೇತಿ ಕಾರ್ಯಕ್ರಮ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಕುಟುಂಬೋತ್ಸವ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

Suddi Udaya
error: Content is protected !!