22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ತಿಲ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ತಣ್ಣೀರುಪಂತ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕು ತಣ್ಣೀರುಪಂತ ವಲಯ ದ.ಕ.ಜಿ.ಪ ಸರಕಾರಿ ಪ್ರೌಢಶಾಲೆ ಪುತ್ತಿಲದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಉದ್ಘಾಟನೆಯನ್ನು ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಜಯರಾಜ್ ಹೆಗ್ಡೆ ಪುತ್ತಿಲರವರು ನೆರವೇರಿಸಿ, ಮಕ್ಕಳಿಗೆ ಶುಭಹಾರೈಸಿದರು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಬಿ.ಸೋಮಶೇಖರ್ ಶೆಟ್ಟಿಯವರು ದುಶ್ಚಟದಿಂದ ಮಕ್ಕಳು ದೂರ ಇರಬೇಕು. ತಂದೆ ತಾಯಿಗೆ ಉತ್ತಮ ಮಕ್ಕಳಾಗಿ ಶಾಲೆಯಲ್ಲಿ ಉತ್ತಮ ವಿದ್ಯಾರ್ಥಿಗಳಾಗಿ ಬೆಳೆಯಬೇಕು ಮದ್ಯಪಾನ, ಸಿಗರೇಟ್, ಗಾಂಜಾ, ಆಫೀಮ್ ಇವುಗಳಿಂದ ದೂರವಿದ್ದು, ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಮೂಡಿ ಬರಬೇಕು ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಅಧ್ಯಕ್ಷ ರಾಜಶೇಖರ ರೈ, ಶಾಲೆಯ ಮುಖ್ಯೋಪಾಧ್ಯಾಯರಾದ ಮಹೇಂದ್ರ ಪೂಜಾರಿ, ಪುತ್ತಿಲ ಒಕ್ಕೂಟದ ಕಾರ್ಯದರ್ಶಿಯಾದ ಸುಖಲತಾ, ಸೇವಾಪ್ರತಿನಿಧಿಯಾದ ಸುನೀತಾ ಹಾಗೂ ಶಾಲೆಯ ಶಿಕ್ಷಕ ವೃಂದಾದವರು ಮತ್ತು ಮಕ್ಕಳು ಉಪಸ್ಥಿತರಿದ್ದರು.

ವಲಯದ ಮೇಲ್ವಿಚಾರಕರಾದ ವಿಶ್ವನಾಥ ಪೂಜಾರಿ ಕಾರ್ಯಕ್ರಮ ನಿರೂಪಿಸಿ , ಸೇವಾಪ್ರತಿನಿಧಿ ಶಾಂತ ಸ್ವಾಗತಿಸಿ, ಶಿಕ್ಷಕ ಪ್ರದೀಪ್ ಧನ್ಯವಾದವಿತ್ತರು.

Related posts

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್ : ಶೈಕ್ಷಣಿಕ ಸಾಧನೆಗಳ ಮೂಲಕ ರಾಜ್ಯದಲ್ಲಿ ಗುರುತಿಸ್ಪಟ್ಟ ಕಾಲೇಜು ಎಕ್ಸೆಲ್

Suddi Udaya

ಡಿ.7 ಧರ್ಮಸ್ಥಳದಲ್ಲಿ ಪದಾಧಿಕಾರಿಗಳ ಸಹಮಿಲನ ಹಾಗೂ ವ್ಯಸನ ಮುಕ್ತರ ಕುಟುಂಬೋತ್ಸವ

Suddi Udaya

ಫೇಸ್‌ಬುಕ್ ಜಾಲತಾಣದಲ್ಲಿ ಮಹಿಳೆಗೆ ಚಾರಿತ್ರ್ಯಕ್ಕೆ ಧಕ್ಕೆಯಾಗುವ ಬರಹ ಬೆದರಿಕೆ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸುದ್ದಿ ಉದಯ ‘ಬೆಳಕಿನ ಉದಯ’ ದೀಪಾವಳಿ ವಿಶೇಷಾಂಕ ಬಿಡುಗಡೆ: ಶ್ರೀರಾಮ‌ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯವರು ಬಿಡುಗಡೆಗೊಳಿಸಿ ಶುಭ ಹಾರೈಕೆ

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಸಂದೇಶ್ ಪೂಜಾರಿ ಕೈರೋಡಿ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಉದ್ಘಾಟನೆ

Suddi Udaya
error: Content is protected !!