22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ (ತೆನೆ ) ಹಬ್ಬ

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಇಂದು ಕನ್ಯಾ ಮರಿಯಮ್ಮರವರ ಹುಟ್ಟು ಹಬ್ಬವಾದ ಮೊಂತಿ ಹಬ್ಬ ( ತೆನೆ ಹಬ್ಬ) ವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.


ಬೆಳ್ತಂಗಡಿ ಚರ್ಚ್ ಬಸ್ ಸ್ಟಾಂಡ್ ಸರ್ವಿಸ್ ರೋಡ್ ನಲ್ಲಿ ಹಿಮಾಲಯ ಚಿಕನ್ ಫಾರ್ಮ್ ಬಳಿ ಹಾಕಲಾದ ಭವ್ಯ ಮಂಟಪದಲ್ಲಿ ಕನ್ಯಾ ಮರಿಯಮ್ಮರವರ ಪ್ರಾರ್ಥನೆ ಹಾಗೂ ತೆನೆಯ ಆಶೀರ್ವಚನ ನಡೆಯಿತು.


ಚರ್ಚಿನ ಪ್ರದಾನ ಧರ್ಮ ಗುರುಗಳಾದ ಅತಿ ವಂದನೀಯ ಫಾ. ವಾಲ್ಟರ್ ಡಿಮೆಲ್ಲೋ, ವಂದನೀಯ ಫಾ. ಕ್ಲಿಫರ್ಡ್ ಪಿಂಟೊ, ಅತಿಥಿ ಗುರುಗಳಾದ ವo. ಫಾ. ಕಿರಣ್ ಲೋಬೊ ಹಾಗು ವo. ಫಾ. ಆಲ್ವಿನ್ ಮಾಡ್ತಾರವರು ಹಾಜರಿದ್ದರು. ಫಾ. ಕ್ಲಿಫರ್ಡ್ ಪಿಂಟೊರವರು ಮೊಂತಿ ಹಬ್ಬದ ದಿನದ ಮಹತ್ವವನ್ನು ತಿಳಿಸಿದರು.


ಫಾ. ಕಿರಣ್ ಲೋಬೊರವರು ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿ ಪ್ರಧಾನ ಗುರುಗಳಾದ ಫಾ. ವಾಲ್ಟರ್ ಡಿ’ಮೆಲ್ಲೊ ಪ್ರಾರ್ಥನೆ ನಡೆಸಿಕೊಟ್ಟರು.
ನಂತರ ಭವ್ಯ ಮೆರವಣಿಗೆ ಚರ್ಚ್ ತನಕ ನಡೆಯಿತು. ಚರ್ಚ್ ನಲ್ಲಿ ಸಂಭ್ರಮದ ದಿವ್ಯ ಬಲಿ ಪೂಜೆ, ಹೊಸ ತೆನೆ ಚರ್ಚಿನ ಪ್ರತಿ ಕುಟುಂಬಕ್ಕೆ ವಾಳೆಯ ಗುರಿಕಾರರು ವಿತರಿಸಿದರು. ಕನ್ಯಾ ಮರಿಯಮ್ಮರಿಗೆ ಹೂಗಳನ್ನು ತಂದು ಅರ್ಪಿಸಿದ ಮಕ್ಕಳಿಗೆ ಕಬ್ಬು ಹಾಗೂ ಬಂದಂತಹ ಎಲ್ಲರಿಗೆ ಸಿಹಿಯನ್ನು ವಿತರಿಸಲಾಯಿತು.
ಚರ್ಚ್ ಪಾಲನ ಮಂಡಳಿಯ ಉಪಾಧ್ಯಕ್ಷ ವಾಲ್ಟರ್ ಮೋನಿಸ್, ಕಾರ್ಯದರ್ಶಿ ಗಿಲ್ಬರ್ಟ್ ಪಿಂಟೊ, ಪಾಲನ ಮಂಡಳಿಯ ಸದಸ್ಯರು ಹಾಗೂ 18 ವಾಳೆಯ ಗುರಿಕಾರರು ಸಹಕರಿಸಿದರು.

Related posts

ತುಮಕೂರುನಲ್ಲಿ ನಡೆದ ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಎಸ್.ಡಿ.ಪಿ ಐ ಖಂಡನೆ: ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಎಸ್.ಡಿ.ಪಿ.ಐ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಮಡಂತ್ಯಾರು ಗ್ರಾ.ಪಂ ಕಲಿಕಾ ಕೇಂದ್ರದಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ದೊರೆತ ಐಎಸ್‌ಒ 27001 ಮೇಲ್ದರ್ಜೆಗೆ

Suddi Udaya

ಗಮಕ, ಯಕ್ಷಗಾನದಲ್ಲಿ ವಿಶೇಷ ಸಾಧನೆ: ಮಧೂರು ಮೋಹನ ಕಲ್ಲೂರಾಯರಿಗೆ ರಾಜ್ಯ ಪ್ರಶಸ್ತಿ

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

ಸಬ್ ಸ್ಟೇಷನ್ಗಳನ್ನು ನಿರ್ಮಿಸಿ ಬೆಳ್ತಂಗಡಿ ತಾಲೂಕಿನ ಜನರಿಗೆ ನಿರಂತರವಾಗಿ ವಿದ್ಯುತ್ ಪೂರೈಸಲು ಸಮಸ್ಯೆಯಾಗದಂತೆ ಅಭಿವೃದ್ದಿ ಪಡಿಸಬೇಕೆಂದು ಶಾಸಕ ಹರೀಶ್ ಪೂಂಜರಿಂದ ಇಂಧನ ಸಚಿವರಿಗೆ ಮನವಿ

Suddi Udaya
error: Content is protected !!