25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ (ತೆನೆ ) ಹಬ್ಬ

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಇಂದು ಕನ್ಯಾ ಮರಿಯಮ್ಮರವರ ಹುಟ್ಟು ಹಬ್ಬವಾದ ಮೊಂತಿ ಹಬ್ಬ ( ತೆನೆ ಹಬ್ಬ) ವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.


ಬೆಳ್ತಂಗಡಿ ಚರ್ಚ್ ಬಸ್ ಸ್ಟಾಂಡ್ ಸರ್ವಿಸ್ ರೋಡ್ ನಲ್ಲಿ ಹಿಮಾಲಯ ಚಿಕನ್ ಫಾರ್ಮ್ ಬಳಿ ಹಾಕಲಾದ ಭವ್ಯ ಮಂಟಪದಲ್ಲಿ ಕನ್ಯಾ ಮರಿಯಮ್ಮರವರ ಪ್ರಾರ್ಥನೆ ಹಾಗೂ ತೆನೆಯ ಆಶೀರ್ವಚನ ನಡೆಯಿತು.


ಚರ್ಚಿನ ಪ್ರದಾನ ಧರ್ಮ ಗುರುಗಳಾದ ಅತಿ ವಂದನೀಯ ಫಾ. ವಾಲ್ಟರ್ ಡಿಮೆಲ್ಲೋ, ವಂದನೀಯ ಫಾ. ಕ್ಲಿಫರ್ಡ್ ಪಿಂಟೊ, ಅತಿಥಿ ಗುರುಗಳಾದ ವo. ಫಾ. ಕಿರಣ್ ಲೋಬೊ ಹಾಗು ವo. ಫಾ. ಆಲ್ವಿನ್ ಮಾಡ್ತಾರವರು ಹಾಜರಿದ್ದರು. ಫಾ. ಕ್ಲಿಫರ್ಡ್ ಪಿಂಟೊರವರು ಮೊಂತಿ ಹಬ್ಬದ ದಿನದ ಮಹತ್ವವನ್ನು ತಿಳಿಸಿದರು.


ಫಾ. ಕಿರಣ್ ಲೋಬೊರವರು ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿ ಪ್ರಧಾನ ಗುರುಗಳಾದ ಫಾ. ವಾಲ್ಟರ್ ಡಿ’ಮೆಲ್ಲೊ ಪ್ರಾರ್ಥನೆ ನಡೆಸಿಕೊಟ್ಟರು.
ನಂತರ ಭವ್ಯ ಮೆರವಣಿಗೆ ಚರ್ಚ್ ತನಕ ನಡೆಯಿತು. ಚರ್ಚ್ ನಲ್ಲಿ ಸಂಭ್ರಮದ ದಿವ್ಯ ಬಲಿ ಪೂಜೆ, ಹೊಸ ತೆನೆ ಚರ್ಚಿನ ಪ್ರತಿ ಕುಟುಂಬಕ್ಕೆ ವಾಳೆಯ ಗುರಿಕಾರರು ವಿತರಿಸಿದರು. ಕನ್ಯಾ ಮರಿಯಮ್ಮರಿಗೆ ಹೂಗಳನ್ನು ತಂದು ಅರ್ಪಿಸಿದ ಮಕ್ಕಳಿಗೆ ಕಬ್ಬು ಹಾಗೂ ಬಂದಂತಹ ಎಲ್ಲರಿಗೆ ಸಿಹಿಯನ್ನು ವಿತರಿಸಲಾಯಿತು.
ಚರ್ಚ್ ಪಾಲನ ಮಂಡಳಿಯ ಉಪಾಧ್ಯಕ್ಷ ವಾಲ್ಟರ್ ಮೋನಿಸ್, ಕಾರ್ಯದರ್ಶಿ ಗಿಲ್ಬರ್ಟ್ ಪಿಂಟೊ, ಪಾಲನ ಮಂಡಳಿಯ ಸದಸ್ಯರು ಹಾಗೂ 18 ವಾಳೆಯ ಗುರಿಕಾರರು ಸಹಕರಿಸಿದರು.

Related posts

ಮಧ್ವ ಓಂಕಾರ ಫ್ರೆಂಡ್ಸ್ ಹಾಗೂ ಓಂಕಾರ ಮಹಿಳಾ ಘಟಕದ ವಾರ್ಷಿಕೋತ್ಸವ

Suddi Udaya

ಕನ್ಯಾಡಿII ಸ.ಉ.ಹಿ.ಪ್ರಾ. ಶಾಲೆಗೆ ಪೆಟ್ರೋನೆಟ್ ಎಂ.ಹೆಚ್.ಬಿ ಲಿಮಿಟೆಡ್ ಕಂಪನಿಯಿಂದ ಕಂಪ್ಯೂಟರ್ ಮತ್ತು ಕಂಪ್ಯೂಟರ್ ಟೇಬಲ್ ಕೊಡುಗೆ

Suddi Udaya

ಗಾಳಿ ಮಳೆಗೆ ಹಾನಿಗೊಂಡ ಕಣಿಯೂರು ಮಾದ ಸಪಲ್ಯ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ವೈಯಕ್ತಿಕ ಧನ ಸಹಾಯ ಹಸ್ತಾಂತರ

Suddi Udaya

ಅರಸಿನಮಕ್ಕಿ: ಪಡ್ಡಾಯಿಬೆಟ್ಟು ನಿವಾಸಿ ನಿವೃತ್ತ ಶಿಕ್ಷಕ ತಿರುಮಲೇಶ್ವರ ಭಟ್ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ ಗ್ರಾ. ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ” ಉದ್ಘಾಟನೆ

Suddi Udaya
error: Content is protected !!