22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ ಸಂಭ್ರಮದ ತೆನೆ ಹಬ್ಬ

ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ ಸಂಭ್ರಮದ ಸೆ.8 ರಂದು ಮೊಂತಿ (ತೆನೆ) ಹಬ್ಬವನ್ನು ಆಚಾರಿಸಲಾಯಿತು.


ಮೊಂತಿ ಹಬ್ಬದ ಹಿನ್ನೆಲೆಯಲ್ಲಿ ಕ್ರೈಸ್ತರು ತಮ್ಮ ವ್ಯಾಪ್ತಿಯ ಚರ್ಚ್ ಗಳಲ್ಲಿ ದಿವ್ಯ ಬಲಿ ಪೂಜೆಯನ್ನು ಪಾಲ್ಗೊಂಡು ತಮ್ಮ ಮನೆಗಳಲ್ಲಿ ಹೊಸ ಅಕ್ಕಿ ಕುಟುಂಬ ಸಮೇತರಾಗಿ ಊಟವನ್ನು ಸವಿದರು. 9 ದಿನಗಳ ನೊವೆನಾ ಆಚರಣೆಯಲ್ಲಿ ಪ್ರಾರ್ಥನೆ ಧ್ಯಾನ ಭಕ್ತಿಗೀತೆಗಳು ಹಾಗೂ ವಿಶೇಷ ಉದ್ದೇಶಕ್ಕಾಗಿ ಪ್ರಾರ್ಥನೆಯ ಸಲ್ಲಿಸಲಾಯಿತು. ಮೊಂತಿ ಹಬ್ಬದ ಕನ್ಯಾ ಮರಿಯಮ್ಮನಿಗೆ ಪ್ರಾರ್ಥನೆ, ಪ್ರಧಾನ ದಿವ್ಯ ಬಲಿ ಪೂಜೆಯನ್ನು ಫಾ.ಬರ್ನಾಡ್ ರೋಡ್ರಿಗಸ್ ತೆನೆ ಆಶೀರ್ವದಿಸಿ ಸಂದೇಶ ನೀಡಿದರು. ಶಿವಮೊಗ್ಗ ಧರ್ಮ ಪ್ರಾಂತ್ಯದಲ್ಲಿ ಸೇವೆ ಸಲ್ಲಿಸುವ ಫಾ. ಫೆಡ್ರಿಕ್ ಕೋರೆಯ ಸಹಕರಿಸಿದರು.

ವಾಹನಗಳ ಆಶೀರ್ವಚನ ಹಬ್ಬದ ಪ್ರಯುಕ್ತ ಕುಟುಂಬಗಳಿಗೆ ತೆನೆ ವಿತರಣೆ ಹಾಗೂ ಪುಷ್ಪಾರ್ಪಣೆ ಸಲ್ಲಿಸಿದ್ದ ಪುಟಾಣಿ ಮಕ್ಕಳಿಗೆ ಹಾಗೂ ಎಲ್ಲರಿಗೂ ಕಬ್ಬು ಹಾಗೂ ಸಿಹಿ ತಿಂಡಿ. ಸ್ತ್ರೀ ಸಂಘ ದವರು ವಿತರಿಸಲಾಯಿತು.
ಆರ್ಥಿಕ ಧನ ಸಹಾಯ ಮಾಡಿದ ದಾನಿಗಳಿಗೆ ಮೇಣದಬತ್ತಿ ವಿತರಿಸಿ ಗೌರವಿಸಲಾಯಿತು. ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷರು ಹಾಗೂ ಕಾರ್ಯದರ್ಶಿ ಆರ್ಥಿಕ ಸಮಿತಿ ಸದಸ್ಯರು ಗುರಿಕಾರರು , ಚರ್ಚ್ ಪಾಲನಾ ಮಂಡಳಿ ಸದಸ್ಯರು, ಮುಖಂಡರು ಸಹಕರಿಸಿದರು.

Related posts

ಸೇವಾ ನಿವೃತಿ ಹೊಂದಿದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಧರ್ಮಸ್ಥಳ ಸಿಎ ಬ್ಯಾಂಕಿನಿಂದ ಬಿಳ್ಕೋಡುಗೆ

Suddi Udaya

ಬೆಳ್ತಂಗಡಿ ತಾ.ಪಂ. ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್ ಅಧಿಕಾರ ಸ್ವೀಕಾರ

Suddi Udaya

ಕೊಕ್ಕಡ: ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

Suddi Udaya

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

Suddi Udaya

ಆ.11: ಮಡಂತ್ಯಾರಿನಲ್ಲಿ ವಿಧಾನ ಪರಿಷತ್ ಶಾಸಕ ಐವನ್ ಡಿ’ ಸೋಜ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!