23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೂಡುಬಿದಿರೆ: ಕೋಟೆಬಾಗಿಲು ವೀರಮಾರುತಿ ದೇವಸ್ಥಾನದಲ್ಲಿ ಹೂವಿನ ಪೂಜೆ

ಮೂಡುಬಿದಿರೆ: ಕೋಟೆಬಾಗಿಲು ಶ್ರೀ ವೀರಮಾರುತಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ವಿಶೇಷ ಹೂವಿನ ಪೂಜೆ ಎಡಪದವು ವೆಂಕಟೇಶ ತಂತ್ರಿಗಳ ನೇತೃತ್ವದಲ್ಲಿ ಸೆ.6ರಂದು ನಡೆಯಿತು.

ಬೆಳಗ್ಗೆ ಪುಣ್ಯಾಹ ವಾಚನ, ಗಣಪತಿ ಹೋಮ, ಪವಮಾನ ಹೋಮ ನಡೆಯಿತು. ಬಳಿಕ ದೇವರಿಗೆ ಪಂಚಾಮೃತ ಅಭಿಷೇಕ, ಅಲಂಕಾರ ಪೂಜೆ ಜರುಗಿತು. ದೇವಸ್ಥಾನದ ಪ್ರಧಾನ ಅರ್ಚಕ ಶಿವಪ್ರಸಾದ್ ಭಟ್ ನೇತೃತ್ವದಲ್ಲಿ ಮಧ್ಯಾಹ್ನ ವೀರಮಾರುತಿ ದೇವರಿಗೆ ವಿಶೇಷ ಹೂವಿನ ಪೂಜೆ, ಮಹಾಪೂಜೆ ನಡೆಯಿತು.

ಸಂಜೆ ಮಹಾರಂಗಪೂಜೆ ಬಳಿಕ ದೀಪಾರಾಧನೆ ಜರುಗಿತು. ಕಾರ್ಕಳ ಹಾಗೂ ಮೂಡುಬಿದಿರೆ ವಲಯ ಮಹಿಳಾ ಸಂಘದ ಸದಸ್ಯೆಯರು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ದೇವಸ್ಥಾನದ ಆಡಳಿತ ಮೊಕೇಸರ ಶ್ಯಾಮ ಹೆಗ್ಡೆ, ಕಾರ್ಯದರ್ಶಿ ಅನಿಲ್ ಹೆಗ್ಡೆ ಹಾಗೂ ಮೊತ್ತೇಸರರು, ಜಿಲ್ಲಾ ಹೆಗ್ಗಡೆ ಸಂಘದ ಅಧ್ಯಕ್ಷ ಹಟ್ಟಾಜೆಗುತ್ತು ಪ್ರಭಾಕರ ಹೆಗ್ಡೆ, ಕಾರ್ಯದರ್ಶಿ ಶುಭರಾಜ್ ಹೆಗ್ಡೆ ಹಾಗೂ ಸದಸ್ಯರು, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ಹೆಗ್ಡೆ, ಕಾರ್ಯದರ್ಶಿ ಲತಾ ಯು.ಹೆಗ್ಡೆ, ಮೂಡುಬಿದಿರೆ ವಲಯ ಮಹಿಳಾ ಘಟಕ ಅಧ್ಯಕ್ಷೆ ಉಷಾ ಕೆ.ಹೆಗ್ಡೆ, ಹೆಗ್ಗಡೆ ಸಂಘ ಮೂಡುಬಿದಿರೆ ವಲಯದ ಅಧ್ಯಕ್ಷ ಸದಾಶಿವ ಹೆಗ್ಡೆ, ಕಾರ್ಯದರ್ಶಿ ಜಯರಾಮ ಹೆಗ್ಡೆ, ವಿವಿಧ ವಲಯಗಳ ಅಧ್ಯಕ್ಷರು, ದೇವಸ್ಥಾನದ ಮಾಜಿ ಆಡಳಿತ ಮೊಕೇಸರ ಉದಯ ಕುಮಾರ್ ಹೆಗ್ಡೆ, ಸಂಘದ ಮಾಜಿ ಅಧ್ಯಕ್ಷ ನವೀನ್ ಹೆಗ್ಡೆ ಮತ್ತಿತರರಿದ್ದರು.

Related posts

ಜೂ.9: ಪಡಂಗಡಿಯಲ್ಲಿ ಉಚಿತ ವೈದ್ಯಕೀಯ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಾಗೂ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

Suddi Udaya

ಉಜಿರೆ: ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ ನಿಧನ

Suddi Udaya

ಮಲವಂತಿಗೆ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬಿಜೆಪಿ ಮುಖಂಡ ರಾಜೇಶ್ ಕೊಲೆ ಯತ್ನ ಪ್ರಕರಣ: ಆರೋಪಿ ಕುಶಾಲಪ್ಪ ಗೌಡ ಬಂಧನ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಪಿ.ಕೋಟ್ಯಾನ್ ಪುನರಾಯ್ಕೆ

Suddi Udaya

ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!