ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೂಡುಬಿದಿರೆ: ಕೋಟೆಬಾಗಿಲು ವೀರಮಾರುತಿ ದೇವಸ್ಥಾನದಲ್ಲಿ ಹೂವಿನ ಪೂಜೆ

ಮೂಡುಬಿದಿರೆ: ಕೋಟೆಬಾಗಿಲು ಶ್ರೀ ವೀರಮಾರುತಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ವಿಶೇಷ ಹೂವಿನ ಪೂಜೆ ಎಡಪದವು ವೆಂಕಟೇಶ ತಂತ್ರಿಗಳ ನೇತೃತ್ವದಲ್ಲಿ ಸೆ.6ರಂದು ನಡೆಯಿತು.

ಬೆಳಗ್ಗೆ ಪುಣ್ಯಾಹ ವಾಚನ, ಗಣಪತಿ ಹೋಮ, ಪವಮಾನ ಹೋಮ ನಡೆಯಿತು. ಬಳಿಕ ದೇವರಿಗೆ ಪಂಚಾಮೃತ ಅಭಿಷೇಕ, ಅಲಂಕಾರ ಪೂಜೆ ಜರುಗಿತು. ದೇವಸ್ಥಾನದ ಪ್ರಧಾನ ಅರ್ಚಕ ಶಿವಪ್ರಸಾದ್ ಭಟ್ ನೇತೃತ್ವದಲ್ಲಿ ಮಧ್ಯಾಹ್ನ ವೀರಮಾರುತಿ ದೇವರಿಗೆ ವಿಶೇಷ ಹೂವಿನ ಪೂಜೆ, ಮಹಾಪೂಜೆ ನಡೆಯಿತು.

ಸಂಜೆ ಮಹಾರಂಗಪೂಜೆ ಬಳಿಕ ದೀಪಾರಾಧನೆ ಜರುಗಿತು. ಕಾರ್ಕಳ ಹಾಗೂ ಮೂಡುಬಿದಿರೆ ವಲಯ ಮಹಿಳಾ ಸಂಘದ ಸದಸ್ಯೆಯರು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ದೇವಸ್ಥಾನದ ಆಡಳಿತ ಮೊಕೇಸರ ಶ್ಯಾಮ ಹೆಗ್ಡೆ, ಕಾರ್ಯದರ್ಶಿ ಅನಿಲ್ ಹೆಗ್ಡೆ ಹಾಗೂ ಮೊತ್ತೇಸರರು, ಜಿಲ್ಲಾ ಹೆಗ್ಗಡೆ ಸಂಘದ ಅಧ್ಯಕ್ಷ ಹಟ್ಟಾಜೆಗುತ್ತು ಪ್ರಭಾಕರ ಹೆಗ್ಡೆ, ಕಾರ್ಯದರ್ಶಿ ಶುಭರಾಜ್ ಹೆಗ್ಡೆ ಹಾಗೂ ಸದಸ್ಯರು, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ಹೆಗ್ಡೆ, ಕಾರ್ಯದರ್ಶಿ ಲತಾ ಯು.ಹೆಗ್ಡೆ, ಮೂಡುಬಿದಿರೆ ವಲಯ ಮಹಿಳಾ ಘಟಕ ಅಧ್ಯಕ್ಷೆ ಉಷಾ ಕೆ.ಹೆಗ್ಡೆ, ಹೆಗ್ಗಡೆ ಸಂಘ ಮೂಡುಬಿದಿರೆ ವಲಯದ ಅಧ್ಯಕ್ಷ ಸದಾಶಿವ ಹೆಗ್ಡೆ, ಕಾರ್ಯದರ್ಶಿ ಜಯರಾಮ ಹೆಗ್ಡೆ, ವಿವಿಧ ವಲಯಗಳ ಅಧ್ಯಕ್ಷರು, ದೇವಸ್ಥಾನದ ಮಾಜಿ ಆಡಳಿತ ಮೊಕೇಸರ ಉದಯ ಕುಮಾರ್ ಹೆಗ್ಡೆ, ಸಂಘದ ಮಾಜಿ ಅಧ್ಯಕ್ಷ ನವೀನ್ ಹೆಗ್ಡೆ ಮತ್ತಿತರರಿದ್ದರು.

Related posts

ಯಕ್ಷಭಾರತಿ ಕನ್ಯಾಡಿ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಕೊಕ್ಕಡ ವಲಯದ ಹಳ್ಳಿoಗೇರಿಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತ‌ರ್ ಕಾಲೇಜು ಮಟ್ಟದ ಖೋ-ಖೋ ಪಂದ್ಯಾಟ

Suddi Udaya

ಸರ್ವೋದಯ ಪಕ್ಷದಿಂದ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು :ಆದಿತ್ಯ ನಾರಾಯಣ್

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ವಿ.ಹಿಂ.ಪ. ಬಜರಂಗದಳ‌ ಮಾತೃಶಕ್ತಿ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ಆಶ್ರಯದಲ್ಲಿ ನಡೆಯುವ ಅಖಂಡ ಭಾರತ ಸಂಕಲ್ಪ ದಿನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!