25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೂಡುಬಿದಿರೆ: ಕೋಟೆಬಾಗಿಲು ವೀರಮಾರುತಿ ದೇವಸ್ಥಾನದಲ್ಲಿ ಹೂವಿನ ಪೂಜೆ

ಮೂಡುಬಿದಿರೆ: ಕೋಟೆಬಾಗಿಲು ಶ್ರೀ ವೀರಮಾರುತಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ವಿಶೇಷ ಹೂವಿನ ಪೂಜೆ ಎಡಪದವು ವೆಂಕಟೇಶ ತಂತ್ರಿಗಳ ನೇತೃತ್ವದಲ್ಲಿ ಸೆ.6ರಂದು ನಡೆಯಿತು.

ಬೆಳಗ್ಗೆ ಪುಣ್ಯಾಹ ವಾಚನ, ಗಣಪತಿ ಹೋಮ, ಪವಮಾನ ಹೋಮ ನಡೆಯಿತು. ಬಳಿಕ ದೇವರಿಗೆ ಪಂಚಾಮೃತ ಅಭಿಷೇಕ, ಅಲಂಕಾರ ಪೂಜೆ ಜರುಗಿತು. ದೇವಸ್ಥಾನದ ಪ್ರಧಾನ ಅರ್ಚಕ ಶಿವಪ್ರಸಾದ್ ಭಟ್ ನೇತೃತ್ವದಲ್ಲಿ ಮಧ್ಯಾಹ್ನ ವೀರಮಾರುತಿ ದೇವರಿಗೆ ವಿಶೇಷ ಹೂವಿನ ಪೂಜೆ, ಮಹಾಪೂಜೆ ನಡೆಯಿತು.

ಸಂಜೆ ಮಹಾರಂಗಪೂಜೆ ಬಳಿಕ ದೀಪಾರಾಧನೆ ಜರುಗಿತು. ಕಾರ್ಕಳ ಹಾಗೂ ಮೂಡುಬಿದಿರೆ ವಲಯ ಮಹಿಳಾ ಸಂಘದ ಸದಸ್ಯೆಯರು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ದೇವಸ್ಥಾನದ ಆಡಳಿತ ಮೊಕೇಸರ ಶ್ಯಾಮ ಹೆಗ್ಡೆ, ಕಾರ್ಯದರ್ಶಿ ಅನಿಲ್ ಹೆಗ್ಡೆ ಹಾಗೂ ಮೊತ್ತೇಸರರು, ಜಿಲ್ಲಾ ಹೆಗ್ಗಡೆ ಸಂಘದ ಅಧ್ಯಕ್ಷ ಹಟ್ಟಾಜೆಗುತ್ತು ಪ್ರಭಾಕರ ಹೆಗ್ಡೆ, ಕಾರ್ಯದರ್ಶಿ ಶುಭರಾಜ್ ಹೆಗ್ಡೆ ಹಾಗೂ ಸದಸ್ಯರು, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ಹೆಗ್ಡೆ, ಕಾರ್ಯದರ್ಶಿ ಲತಾ ಯು.ಹೆಗ್ಡೆ, ಮೂಡುಬಿದಿರೆ ವಲಯ ಮಹಿಳಾ ಘಟಕ ಅಧ್ಯಕ್ಷೆ ಉಷಾ ಕೆ.ಹೆಗ್ಡೆ, ಹೆಗ್ಗಡೆ ಸಂಘ ಮೂಡುಬಿದಿರೆ ವಲಯದ ಅಧ್ಯಕ್ಷ ಸದಾಶಿವ ಹೆಗ್ಡೆ, ಕಾರ್ಯದರ್ಶಿ ಜಯರಾಮ ಹೆಗ್ಡೆ, ವಿವಿಧ ವಲಯಗಳ ಅಧ್ಯಕ್ಷರು, ದೇವಸ್ಥಾನದ ಮಾಜಿ ಆಡಳಿತ ಮೊಕೇಸರ ಉದಯ ಕುಮಾರ್ ಹೆಗ್ಡೆ, ಸಂಘದ ಮಾಜಿ ಅಧ್ಯಕ್ಷ ನವೀನ್ ಹೆಗ್ಡೆ ಮತ್ತಿತರರಿದ್ದರು.

Related posts

ಬಕ್ರೀದ್ ಪ್ರಯುಕ್ತ ವೇಣೂರು ಪೊಲೀಸ್ ಸ್ಟೇಷನ್ ನಲ್ಲಿ ಶಾಂತಿ ಸಮಿತಿ ಸಭೆ

Suddi Udaya

ಮಿತ್ತಬಾಗಿಲು: ಹಿರಿಯ ದೈವನರ್ತಕ ಅಣ್ಣು ನಲಿಕೆ ನಿಧನ

Suddi Udaya

6 ವರ್ಷದ ಮಗುವಿನ ಪ್ರಾಣ ಕಾಪಾಡಲು ಮಂಗಳೂರಿನಿಂದ ಚೆನ್ನೈ ಗೆ ಆ್ಯಂಬುಲೆನ್ಸ್ ನಲ್ಲಿ ನಿರಂತರ 14 ಗಂಟೆ ಪ್ರಯಾಣ, ಮಚ್ಚಿನದ ವೀರಕೇಸರಿ ಆ್ಯಂಬುಲೆನ್ಸ್ ಚಾಲಕ ದೀಕ್ಷಿತ್ ರಿಗೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya
error: Content is protected !!