ಉಜಿರೆ: ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಹಾಗೂ ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಮತ್ತು ಎಂ.ಕೆ.ಅನಂತರಾಜು ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಮೂಡಬಿದ್ರೆಯ ಸ್ಕೌಟ್ಸ್ ಅಂಡ್ ಗೈಡ್ಸ್ ಭವನದಲ್ಲಿ ಸೆ. 1 ರಂದು ನಡೆದ ರಾಜ್ಯಮಟ್ಟದ ಕರಾಟೆ ಚಾಂಪಿಯನ್ಶಿಪ್ ಪಂದ್ಯಕೂಟದಲ್ಲಿ ಹಿಮಾನ್ಸ್ ರವರು ಕುಮಿಟೆ ವಿಭಾಗದಲ್ಲಿ ದ್ವಿತೀಯ ಹಾಗೂ ಕಟಾ ವಿಭಾಗ ದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.
ಇವರು ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿರುತ್ತಾರೆ. ಉಜಿರೆಯ ವಿಜಯ್ ಕುಮಾರ್ ಶ್ರೀ ರಾಮ್ ತರಕಾರಿ ಅಂಗಡಿ ಹಾಗೂ ಸುಮಾ ದಂಪತಿಯ ಪುತ್ರರಾಗಿರುತ್ತಾರೆ. ಇವರಿಗೆ ಶಿಹಾನ್ ಅಬ್ದುಲ್ ರಹಮಾನ್ ರವರು ಕರಾಟೆ ತರಬೇತಿಯನ್ನು ನೀಡಿರುತ್ತಾರೆ.











