September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಗೀತೆ ಜತೆ ಸಾಹಿತ್ಯ ಸಾಂಗತ್ಯ

ಬೆಳ್ತಂಗಡಿ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಗೀತೆ ಜತೆ ಸಾಹಿತ್ಯ ಸಾಂಗತ್ಯ ಕಾರ್ಯಕ್ರಮ ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಭವನದಲ್ಲಿ ನಡೆಯಿತು.

ಗೀತೆ ಜತೆ ಸಾಹಿತ್ಯ ಸಾಂಗತ್ಯ ಒಂದು ವರ್ಷದ ಸಾಹಿತ್ಯ ಪರ್ವ ಉಪನ್ಯಾಸ ಮಾಲಿಕೆಯ ಹದಿಮೂರನೇ ಅಧ್ಯಾಯ ಕ್ಷೇತ್ರ ಕ್ಷೇತ್ರಜ್ಞ ವಿಭಾಗ ಯೋಗದ ಉಪನ್ಯಾಸವನ್ನು ಸಂಪನ್ಮೂಲ ವ್ಯಕ್ತಿ ರಾಮಕೃಷ್ಣ ಭಟ್ ಅಧ್ಯಕ್ಷರು ಗಮಕ ಕಲಾ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ, ಇವರು ನೀಡಿ ಭಗವದ್ಗೀತೆಯ 13 ನೇ ಅಧ್ಯಾಯ ದೇಹ ಮತ್ತು ಆತ್ಮ ಇವುಗಳ ನಡುವಿನ ವ್ಯತ್ಯಾಸವನ್ನು ವಿವರಿಸುವ ಕ್ಷೇತ್ರ ಕ್ಷೇತ್ರಜ್ಞ ವಿಭಾಗ ಯೋಗದಲ್ಲಿ ಪ್ರಕೃತಿ, ಪುರುಷ, ಜ್ಞಾನ ಮತ್ತು ಜ್ಞೇಯ , ಜ್ಞಾನದ ಸ್ವರೂಪ, ಮೋಕ್ಷದ ಮಾರ್ಗ, ಆತ್ಮದ ಸ್ವರೂಪದ ಬಗ್ಗೆ ಶ್ರೀ ಕೃಷ್ಣ ಭಗವಂತ ಅರ್ಜುನನಿಗೆ ನೀಡಿದ ವಿವರಣೆಯನ್ನು ಸಾಹಿತ್ಯದ ಅನೇಕ ಉದಾಹರಣೆಗಳೊಂದಿಗೆ ಮನ ಮುಟ್ಟುವಂತೆ ವಿವರಿಸಿದರು.

ಪತ್ರಕರ್ತರ ಮನೋಹರ ಬಳಂಜ ಅದ್ಯಕ್ಷತೆ ವಹಿಸಿ ಮಾತನಾಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬೆಳ್ತಂಗಡಿ ತಾಲೂಕು ಸಮಿತಿ ಆಯೋಜಿಸಿರುವ ಗೀತೆ ಜತೆ ಸಾಹಿತ್ಯ ಸಾಂಗತ್ಯ ಕಾರ್ಯಕ್ರಮವನ್ನು ಶ್ಲಾಘಿಸುತ್ತಾ..ಇಂತಹ ಕಾರ್ಯಕ್ರಮಗಳ ಅಗತ್ಯತೆಯನ್ನು ತಿಳಿಸಿ, ಇದರ ಪ್ರಯೋಜನವನ್ನು ಯುವಜನರು ಪಡೆಯುವಂತಾಗಲಿ ಎಂದರು.

ವಸಂತಿ ಕುಳಮರ್ವ ಕಾರ್ಯಕ್ರಮವನ್ನು ನಿರೂಪಿಸಿ, ಡಾ. ಶ್ರೀಧರ ಭಟ್ ವಂದಿಸಿದರು.ರವೀಂದ್ರ ಶೆಟ್ಟಿ ಬಳಂಜ ಸ್ವಾಗತಿಸಿದರು.

Related posts

ಕಲ್ಮಂಜ: ಆಟೋ ಚಾಲಕ ಪ್ರಮೋದ್ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ‘ಉತ್ತಮ ಆಹಾರ ಅಭ್ಯಾಸ ಮತ್ತು ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಮಾಹಿತಿ ಕಾರ್ಯಕ್ರಮ

Suddi Udaya

ರಾಜ್ಯ ಸರ್ಕಾರದಿಂದ ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ : ಇದು ಬಡಜನರ ಮೇಲಿನ ಮರಣ ಶಾಸನ: ಶೇಖರ ಎಲ್

Suddi Udaya

ಇತ್ತೀಚೆಗೆ ಸುಟ್ಟು ಕರಕಲಾದ ಸ್ವಸ್ತಿಕ್ ಆಟೋ ಶೋರೂಮ್ ಗೆ ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ವತಿಯಿಂದ ಸಹಾಯಧನ

Suddi Udaya

ಹೊಸಂಗಡಿ ವಲಯದ ಗುಂಡೂರಿ ಕಾರ್ಯಕ್ಷೇತ್ರದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ

Suddi Udaya
error: Content is protected !!