22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಗೀತೆ ಜತೆ ಸಾಹಿತ್ಯ ಸಾಂಗತ್ಯ

ಬೆಳ್ತಂಗಡಿ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಗೀತೆ ಜತೆ ಸಾಹಿತ್ಯ ಸಾಂಗತ್ಯ ಕಾರ್ಯಕ್ರಮ ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಭವನದಲ್ಲಿ ನಡೆಯಿತು.

ಗೀತೆ ಜತೆ ಸಾಹಿತ್ಯ ಸಾಂಗತ್ಯ ಒಂದು ವರ್ಷದ ಸಾಹಿತ್ಯ ಪರ್ವ ಉಪನ್ಯಾಸ ಮಾಲಿಕೆಯ ಹದಿಮೂರನೇ ಅಧ್ಯಾಯ ಕ್ಷೇತ್ರ ಕ್ಷೇತ್ರಜ್ಞ ವಿಭಾಗ ಯೋಗದ ಉಪನ್ಯಾಸವನ್ನು ಸಂಪನ್ಮೂಲ ವ್ಯಕ್ತಿ ರಾಮಕೃಷ್ಣ ಭಟ್ ಅಧ್ಯಕ್ಷರು ಗಮಕ ಕಲಾ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ, ಇವರು ನೀಡಿ ಭಗವದ್ಗೀತೆಯ 13 ನೇ ಅಧ್ಯಾಯ ದೇಹ ಮತ್ತು ಆತ್ಮ ಇವುಗಳ ನಡುವಿನ ವ್ಯತ್ಯಾಸವನ್ನು ವಿವರಿಸುವ ಕ್ಷೇತ್ರ ಕ್ಷೇತ್ರಜ್ಞ ವಿಭಾಗ ಯೋಗದಲ್ಲಿ ಪ್ರಕೃತಿ, ಪುರುಷ, ಜ್ಞಾನ ಮತ್ತು ಜ್ಞೇಯ , ಜ್ಞಾನದ ಸ್ವರೂಪ, ಮೋಕ್ಷದ ಮಾರ್ಗ, ಆತ್ಮದ ಸ್ವರೂಪದ ಬಗ್ಗೆ ಶ್ರೀ ಕೃಷ್ಣ ಭಗವಂತ ಅರ್ಜುನನಿಗೆ ನೀಡಿದ ವಿವರಣೆಯನ್ನು ಸಾಹಿತ್ಯದ ಅನೇಕ ಉದಾಹರಣೆಗಳೊಂದಿಗೆ ಮನ ಮುಟ್ಟುವಂತೆ ವಿವರಿಸಿದರು.

ಪತ್ರಕರ್ತರ ಮನೋಹರ ಬಳಂಜ ಅದ್ಯಕ್ಷತೆ ವಹಿಸಿ ಮಾತನಾಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬೆಳ್ತಂಗಡಿ ತಾಲೂಕು ಸಮಿತಿ ಆಯೋಜಿಸಿರುವ ಗೀತೆ ಜತೆ ಸಾಹಿತ್ಯ ಸಾಂಗತ್ಯ ಕಾರ್ಯಕ್ರಮವನ್ನು ಶ್ಲಾಘಿಸುತ್ತಾ..ಇಂತಹ ಕಾರ್ಯಕ್ರಮಗಳ ಅಗತ್ಯತೆಯನ್ನು ತಿಳಿಸಿ, ಇದರ ಪ್ರಯೋಜನವನ್ನು ಯುವಜನರು ಪಡೆಯುವಂತಾಗಲಿ ಎಂದರು.

ವಸಂತಿ ಕುಳಮರ್ವ ಕಾರ್ಯಕ್ರಮವನ್ನು ನಿರೂಪಿಸಿ, ಡಾ. ಶ್ರೀಧರ ಭಟ್ ವಂದಿಸಿದರು.ರವೀಂದ್ರ ಶೆಟ್ಟಿ ಬಳಂಜ ಸ್ವಾಗತಿಸಿದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನಕ್ಕೆ ಹೈ ಮಾಸ್ಕ್ ದೀಪದ ಕೊಡುಗೆ ನೀಡಿದ ವಿಧಾನ ಪರಿಷತ್ತು ಶಾಸಕ ಪ್ರತಾಪ್ ಸಿಂಹ ನಾಯಕ್

Suddi Udaya

ಬೆಳ್ತಂಗಡಿ: ಚಿನ್ನಯ್ಯನಿಗೆ ಜಿಲ್ಲಾ ಕೋರ್ಟ್ ನಲ್ಲಿ ಜಾಮೀನು ಮಂಜೂರು

Suddi Udaya

ಮಾ.10: ಶಿರ್ಲಾಲು ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಕ್ರೀಡಾಕೂಟ

Suddi Udaya

ಸಂತ ಫಿಲೋಮೀನಾ ಸ್ವಾಯತ್ತ ಕಾಲೇಜಿನಲ್ಲಿ ‘ ಭಯೋತ್ಪಾದನಾ ವಿರೋಧಿ ದಿನ’ ಆಚರಣೆ

Suddi Udaya

ಲಾಯಿಲ :ಕರ್ನೋಡಿ ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ 1 ನೇ ತರಗತಿ ಆಂಗ್ಲ ಮಾಧ್ಯಮ ಉದ್ಘಾಟನೆ

Suddi Udaya

ಎ.20: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ

Suddi Udaya
error: Content is protected !!