25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಗೀತೆ ಜತೆ ಸಾಹಿತ್ಯ ಸಾಂಗತ್ಯ

ಬೆಳ್ತಂಗಡಿ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಗೀತೆ ಜತೆ ಸಾಹಿತ್ಯ ಸಾಂಗತ್ಯ ಕಾರ್ಯಕ್ರಮ ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಭವನದಲ್ಲಿ ನಡೆಯಿತು.

ಗೀತೆ ಜತೆ ಸಾಹಿತ್ಯ ಸಾಂಗತ್ಯ ಒಂದು ವರ್ಷದ ಸಾಹಿತ್ಯ ಪರ್ವ ಉಪನ್ಯಾಸ ಮಾಲಿಕೆಯ ಹದಿಮೂರನೇ ಅಧ್ಯಾಯ ಕ್ಷೇತ್ರ ಕ್ಷೇತ್ರಜ್ಞ ವಿಭಾಗ ಯೋಗದ ಉಪನ್ಯಾಸವನ್ನು ಸಂಪನ್ಮೂಲ ವ್ಯಕ್ತಿ ರಾಮಕೃಷ್ಣ ಭಟ್ ಅಧ್ಯಕ್ಷರು ಗಮಕ ಕಲಾ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ, ಇವರು ನೀಡಿ ಭಗವದ್ಗೀತೆಯ 13 ನೇ ಅಧ್ಯಾಯ ದೇಹ ಮತ್ತು ಆತ್ಮ ಇವುಗಳ ನಡುವಿನ ವ್ಯತ್ಯಾಸವನ್ನು ವಿವರಿಸುವ ಕ್ಷೇತ್ರ ಕ್ಷೇತ್ರಜ್ಞ ವಿಭಾಗ ಯೋಗದಲ್ಲಿ ಪ್ರಕೃತಿ, ಪುರುಷ, ಜ್ಞಾನ ಮತ್ತು ಜ್ಞೇಯ , ಜ್ಞಾನದ ಸ್ವರೂಪ, ಮೋಕ್ಷದ ಮಾರ್ಗ, ಆತ್ಮದ ಸ್ವರೂಪದ ಬಗ್ಗೆ ಶ್ರೀ ಕೃಷ್ಣ ಭಗವಂತ ಅರ್ಜುನನಿಗೆ ನೀಡಿದ ವಿವರಣೆಯನ್ನು ಸಾಹಿತ್ಯದ ಅನೇಕ ಉದಾಹರಣೆಗಳೊಂದಿಗೆ ಮನ ಮುಟ್ಟುವಂತೆ ವಿವರಿಸಿದರು.

ಪತ್ರಕರ್ತರ ಮನೋಹರ ಬಳಂಜ ಅದ್ಯಕ್ಷತೆ ವಹಿಸಿ ಮಾತನಾಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬೆಳ್ತಂಗಡಿ ತಾಲೂಕು ಸಮಿತಿ ಆಯೋಜಿಸಿರುವ ಗೀತೆ ಜತೆ ಸಾಹಿತ್ಯ ಸಾಂಗತ್ಯ ಕಾರ್ಯಕ್ರಮವನ್ನು ಶ್ಲಾಘಿಸುತ್ತಾ..ಇಂತಹ ಕಾರ್ಯಕ್ರಮಗಳ ಅಗತ್ಯತೆಯನ್ನು ತಿಳಿಸಿ, ಇದರ ಪ್ರಯೋಜನವನ್ನು ಯುವಜನರು ಪಡೆಯುವಂತಾಗಲಿ ಎಂದರು.

ವಸಂತಿ ಕುಳಮರ್ವ ಕಾರ್ಯಕ್ರಮವನ್ನು ನಿರೂಪಿಸಿ, ಡಾ. ಶ್ರೀಧರ ಭಟ್ ವಂದಿಸಿದರು.ರವೀಂದ್ರ ಶೆಟ್ಟಿ ಬಳಂಜ ಸ್ವಾಗತಿಸಿದರು.

Related posts

ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಲೋಕಾರ್ಪಣೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ವಿದ್ಯಾಭ್ಯಾಸಕ್ಕಾಗಿ ಸಹಾಯಧನ ಹಸ್ತಾಂತರ

Suddi Udaya

ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಜಾತ್ರಾ ಸಮಿತಿ ರಚನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ನೂತನ ಸದಸ್ಯರಿಗೆ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಶಾಲಾ ಬಸ್ಸು ಚಾಲಕರಿಗೆ “ಸ್ಟೇರಿಂಗ್ ಟುವರ್ಡ್ಸ್ ಸೇಫ್ಟಿ” ಕಾರ್ಯಾಗಾರ

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ಸತತ 6ನೇ ಬಾರಿಗೆ ಶೇ.100 ಫಲಿತಾಂಶ

Suddi Udaya
error: Content is protected !!