September 6, 2026
Uncategorized

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರ

ಉಜಿರೆ: ಫಿಸಿಯೋಥೆರಪಿ ದಿನದ ಪ್ರಯುಕ್ತ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರವನ್ನು ನಡೆಸಲಾಯಿತು.

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ ಜನಾರ್ದನ್ ಶಿಬಿರ ಉದ್ಘಾಟಿಸಿ ಮಾತನಾಡುತ್ತಾ, ಫಿಸಿಯೋಥೆರಪಿಯಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳಿಗೆ ಅದರದ್ದೇ ಆದ ಚಿಕಿತ್ಸಾ ವಿಧಾನಗಳಿವೆ. ನಮ್ಮ ಆಸ್ಪತ್ರೆಯಲ್ಲಿ ರೋಗಿಗಳ ಆರೋಗ್ಯ ಸಮಸ್ಯೆಗಳಿಗೆ ತಕ್ಕಂತೆ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗಿದೆ. ಇಬ್ಬರು ಫಿಸಿಯೋಥೆರಪಿ ತಜ್ಞರು ಫಿಸಿಯೋಥೆರಪಿ ಸೇವೆ ನೀಡುತ್ತಿದ್ದು, ವಿಶ್ವ ಫಿಸಿಯೋಥೆರಪಿ ದಿನದ ಪ್ರಯುಕ್ತ ಈ ದಿನ ರಿಯಾಯಿತಿ ದರದಲ್ಲಿ ಚಿಕಿತ್ಸಾ ಸೌಲಭ್ಯ ನೀಡಲಾಗುತ್ತಿದೆ ಎಂದರು.


ಶಿಬಿರದಲ್ಲಿ ನರ ಮತ್ತು ಮೂಳೆಗಳಿಗೆ ಸಂಬAಧಿಸಿದ ಕಾಯಿಲೆಗಳಿಗೆ, ಮಕ್ಕಳಲ್ಲಿ ಕಂಡುಬರುವ ದೈಹಿಕ ತೊಂದರೆಗಳಿಗೆ, ಶಸ್ತçಚಿಕಿತ್ಸೆಯ ಬಳಿಕದ ಫಿಸಿಯೋಥೆರಪಿ ಮತ್ತು ನೋವು ನಿವಾರಣೆಗಳಿಗೆ ಮಾಡಬೇಕಾದ ಫಿಸಿಯೋಥೆರಪಿಗಳನ್ನು ಉಚಿತವಾಗಿ ಮಾಡಲಾಯಿತು.


ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಫಿಸಿಯೋಥೆರಪಿಸ್ಟ್ ತಜ್ಞರಾದ ಸನ್ನಿಧಿ ಜೈನ್ ಮತ್ತು ಪ್ರೀಥಮ್ ಈ ಶಿಬಿರವನ್ನು ನಡೆಸಿಕೊಟ್ಟರು. ಫಿಸಿಯೋಥೆರಪಿ ಸಮಾಲೋಚನೆಯನ್ನು ಉಚಿತವಾಗಿ ಮಾಡಲಾಯಿತು. ಫಿಸಿಯೋಥೆರಪಿ ವಿಧಾನಗಳಿಗೆ 20% ರಿಯಾಯತಿ ನೀಡಲಾಯಿತು.

Related posts

ಬಾರ್ಯ ಗ್ರಾಮ ಪಂಚಾಯತ್ ನಲ್ಲಿ ಅಣಬೆ ಕೃಷಿ ತರಬೇತಿ

Suddi Udaya

ಮಂಜುಶ್ರೀ ಮುದ್ರಣಾಲಯದ ಮೇಲ್ವಿಚಾರಕ ವಿಶ್ವನಾಥ ಶೆಟ್ಟಿಯವರಿಗೆ ಬೀಳ್ಕೊಡುಗೆ

Suddi Udaya

ಜೆಸಿಐ ಮಡಂತ್ಯಾರ್ ಸಪ್ತಾಹ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಮುಕ್ತಾಯ

Suddi Udaya

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

Suddi Udaya

ಧರ್ಮಸ್ಥಳದ ಮೇಲೆ ಅಪಪ್ರಚಾರವನ್ನು ಸೃಷ್ಟಿಸಿರುವ ಮುಖವಾಡದ ಹಿಂದೆ ಇರುವ ಧಾರ್ಮಿಕ ವಿರೋಧಿ ಶಕ್ತಿಗಳ ವಿರುದ್ಧ ಸಿಬಿಐ ಅಥವಾ ಎನ್.ಐ.ಎ ತನಿಖೆ ನಡೆಸಿ ಕಠಿಣ ಶಿಕ್ಷೆಗೆ ಗುರಿಪಡಿಸಿ ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಪರಿಷತ್ ಅಧ್ಯಕ್ಷ ಡಾ. ಸಂಪತ್ ಕುಮಾರ್ ಆಗ್ರಹ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!