25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರ

ಉಜಿರೆ: ಫಿಸಿಯೋಥೆರಪಿ ದಿನದ ಪ್ರಯುಕ್ತ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರವನ್ನು ನಡೆಸಲಾಯಿತು.

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ ಜನಾರ್ದನ್ ಶಿಬಿರ ಉದ್ಘಾಟಿಸಿ ಮಾತನಾಡುತ್ತಾ, ಫಿಸಿಯೋಥೆರಪಿಯಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳಿಗೆ ಅದರದ್ದೇ ಆದ ಚಿಕಿತ್ಸಾ ವಿಧಾನಗಳಿವೆ. ನಮ್ಮ ಆಸ್ಪತ್ರೆಯಲ್ಲಿ ರೋಗಿಗಳ ಆರೋಗ್ಯ ಸಮಸ್ಯೆಗಳಿಗೆ ತಕ್ಕಂತೆ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗಿದೆ. ಇಬ್ಬರು ಫಿಸಿಯೋಥೆರಪಿ ತಜ್ಞರು ಫಿಸಿಯೋಥೆರಪಿ ಸೇವೆ ನೀಡುತ್ತಿದ್ದು, ವಿಶ್ವ ಫಿಸಿಯೋಥೆರಪಿ ದಿನದ ಪ್ರಯುಕ್ತ ಈ ದಿನ ರಿಯಾಯಿತಿ ದರದಲ್ಲಿ ಚಿಕಿತ್ಸಾ ಸೌಲಭ್ಯ ನೀಡಲಾಗುತ್ತಿದೆ ಎಂದರು.


ಶಿಬಿರದಲ್ಲಿ ನರ ಮತ್ತು ಮೂಳೆಗಳಿಗೆ ಸಂಬAಧಿಸಿದ ಕಾಯಿಲೆಗಳಿಗೆ, ಮಕ್ಕಳಲ್ಲಿ ಕಂಡುಬರುವ ದೈಹಿಕ ತೊಂದರೆಗಳಿಗೆ, ಶಸ್ತçಚಿಕಿತ್ಸೆಯ ಬಳಿಕದ ಫಿಸಿಯೋಥೆರಪಿ ಮತ್ತು ನೋವು ನಿವಾರಣೆಗಳಿಗೆ ಮಾಡಬೇಕಾದ ಫಿಸಿಯೋಥೆರಪಿಗಳನ್ನು ಉಚಿತವಾಗಿ ಮಾಡಲಾಯಿತು.


ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಫಿಸಿಯೋಥೆರಪಿಸ್ಟ್ ತಜ್ಞರಾದ ಸನ್ನಿಧಿ ಜೈನ್ ಮತ್ತು ಪ್ರೀಥಮ್ ಈ ಶಿಬಿರವನ್ನು ನಡೆಸಿಕೊಟ್ಟರು. ಫಿಸಿಯೋಥೆರಪಿ ಸಮಾಲೋಚನೆಯನ್ನು ಉಚಿತವಾಗಿ ಮಾಡಲಾಯಿತು. ಫಿಸಿಯೋಥೆರಪಿ ವಿಧಾನಗಳಿಗೆ 20% ರಿಯಾಯತಿ ನೀಡಲಾಯಿತು.

Related posts

ಅಳದಂಗಡಿ: “ಸರ್ಕಾರದ ನಡೆ ಕಾರ್ಯಕರ್ತರ ಕಡೆ” ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಕುಪ್ಪೆಟ್ಟಿಯಲ್ಲಿ ರಿಕ್ಷಾ ಮತ್ತು ನಂದಿನಿ ಟೆಂಪೋ ಡಿಕ್ಕಿ: ರಿಕ್ಷಾ ಚಾಲಕ ಗಂಭೀರ ಗಾಯ

Suddi Udaya

ಬೆಳಾಲು ನಿವೃತ್ತ ಶಿಕ್ಷಕನ ಕೊಲೆ ಪ್ರಕರಣ: ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಐಜಿಪಿ ಭೇಟಿ

Suddi Udaya

ನವದೆಹಲಿಯಲ್ಲಿ ನಡೆಯಲಿರುವ ಜಲ್ ಮಹೋತ್ಸವಕ್ಕೆ ತಣ್ಣೀರುಪಂತದ ಸವಿತಾರಿಗೆ ವಿಶೇಷ ಆಹ್ವಾನ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿದೇವರ ಪುನರ್‌ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ: ಭವ್ಯ ಮೆರವಣಿಗೆಯೊಂದಿಗೆ ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya
error: Content is protected !!