23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯಿಂದ (NDRF) ಮಾಹಿತಿ ಕಾರ್ಯಾಗಾರ

ಉಜಿರೆ: ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆ ಉಜಿರೆಯಲ್ಲಿ ಸೆ. 1 ರಂದು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯಿಂದ ಮಾಹಿತಿ ಕಾರ್ಯಗಾರ ಪರಿಸರ ಸಂಘದ ವತಿಯಿಂದ ನಡೆಯಿತು.


ಇನೆಸ್ಪಕ್ಟರ್ ಶಾಂತಿಲಾಲ್ ಜಟ್ಟಿ NDRF ಬೆಂಗಳೂರು ಇವರು ವಿದ್ಯಾರ್ಥಿಗಳಿಗೆ ಯಾವ ರೀತಿಯಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ಕೆಲಸ ನಿರ್ವಹಣೆ ಮಾಡುತ್ತದೆ ಎಂದು ತಿಳಿಸಿದರು. ಹೆಡ್ ಕಾನ್ಸ್ಟೇಬಲ್ ಶಂಕರಪ್ಪ ಇದರ ಮುಖ್ಯ ಕರ್ತವ್ಯಗಳು ,ಭೂಕಂಪ, ನೆರೆ ಸುನಾಮಿ ಚಂಡಮಾರುತ ಅಗ್ನಿ ಅವಘಡ, ಅಣು ದುರಂತ, ತುರ್ತು ವೈದ್ಯಕೀಯ ನೆರವು, ವಿಪತ್ತು ಸಂಭವಿಸಿದ ಪ್ರದೇಶದಲ್ಲಿ ಹುಡುಕಾಟ ಮತ್ತು ರಕ್ಷಣಾ ಕಾರ್ಯಚರಣೆ, ಇವುಗಳ ಬಗ್ಗೆ ಮಾಹಿತಿ ನೀಡಿದರು.ಹೆಡ್ ಕಾನ್ಸ್ಟೇಬಲ್ ಗಳಾದ ಸಿಟಿ ದಿವಕರ್ ರೆಡ್ಡಿ, ಸಿ.ಟಿ ಅಲ್ಬಿನ್ , ಸಿ.ಟಿ ಸತೀಶ್ ನಾಯ್ಕ್, ಸಿ.ಟಿ ಸಿರಿಲಾಲ್ ಇವರುಗಳು ಯಾವ ರೀತಿ ಅಪಘಾತಗಳು ಸಂಭವಿಸಿದಾಗ ಮುನ್ನೇ಼ಚರಿಕೆ ಕ್ರಮವನ್ನು ಡೆಮೋ ಮಾಡಿ ತೋರಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರುವ ಮುಖ್ಯೋಪಾಧ್ಯಾಯರಾದ ಸುರೇಶ್ .ಕೆ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮದ ಪ್ರಯೋಜನೆಗಳನ್ನು ವಿವರಿಸಿದರು.


ಒಂಭತ್ತನೇ ತರಗತಿಯ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡಿದರು, ವಿದ್ಯಾರ್ಥಿಗಳಾದ ಮಾನ್ಯ ಸ್ವಾಗತಿಸಿದರು, ರಕ್ಷಿತಾ ವಂದಿಸಿದರು, ಶ್ರುತಾ ಆಳ್ವ ಕಾರ್ಯಕ್ರಮ ನಿರೂಪಿಸಿದರು.

Related posts

ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. ನಿಧನ

Suddi Udaya

ನಡ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ “ಮಕ್ಕಳ ಗ್ರಾಮ ಸಭೆ”

Suddi Udaya

ತಣ್ಣೀರುಪಂಥ ವಲಯದ ಪುತ್ತಿಲ ಕಾರ್ಯಕ್ಷೇತ್ರದ ಒಕ್ಕೂಟದ ಸದಸ್ಯರಿಂದ ಶ್ರೀ ಮಹಾ ವಿಷ್ಣು ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಓಡಿಲ್ನಾಳ: ಮೈರಲ್ಕೆ ಪಶುಪತಿ ಕೃಪಾ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರರ ಪ್ರಾಯೋಜಕತ್ವದಲ್ಲಿ “ಕುಮಾರ ವಿಜಯ” ಯಕ್ಷಗಾನ ಹಾಗೂ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಸೇವೆಸಲ್ಲಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಕೊಕ್ಕಡ, ಅರಸಿನಮಕ್ಕಿಯಲ್ಲಿ ಹರೀಶ್ ಪೂಂಜರ ಬಿರುಸಿನ ಪ್ರಚಾರ ಸಭೆ

Suddi Udaya
error: Content is protected !!