July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯಿಂದ (NDRF) ಮಾಹಿತಿ ಕಾರ್ಯಾಗಾರ

ಉಜಿರೆ: ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆ ಉಜಿರೆಯಲ್ಲಿ ಸೆ. 1 ರಂದು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯಿಂದ ಮಾಹಿತಿ ಕಾರ್ಯಗಾರ ಪರಿಸರ ಸಂಘದ ವತಿಯಿಂದ ನಡೆಯಿತು.


ಇನೆಸ್ಪಕ್ಟರ್ ಶಾಂತಿಲಾಲ್ ಜಟ್ಟಿ NDRF ಬೆಂಗಳೂರು ಇವರು ವಿದ್ಯಾರ್ಥಿಗಳಿಗೆ ಯಾವ ರೀತಿಯಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ಕೆಲಸ ನಿರ್ವಹಣೆ ಮಾಡುತ್ತದೆ ಎಂದು ತಿಳಿಸಿದರು. ಹೆಡ್ ಕಾನ್ಸ್ಟೇಬಲ್ ಶಂಕರಪ್ಪ ಇದರ ಮುಖ್ಯ ಕರ್ತವ್ಯಗಳು ,ಭೂಕಂಪ, ನೆರೆ ಸುನಾಮಿ ಚಂಡಮಾರುತ ಅಗ್ನಿ ಅವಘಡ, ಅಣು ದುರಂತ, ತುರ್ತು ವೈದ್ಯಕೀಯ ನೆರವು, ವಿಪತ್ತು ಸಂಭವಿಸಿದ ಪ್ರದೇಶದಲ್ಲಿ ಹುಡುಕಾಟ ಮತ್ತು ರಕ್ಷಣಾ ಕಾರ್ಯಚರಣೆ, ಇವುಗಳ ಬಗ್ಗೆ ಮಾಹಿತಿ ನೀಡಿದರು.ಹೆಡ್ ಕಾನ್ಸ್ಟೇಬಲ್ ಗಳಾದ ಸಿಟಿ ದಿವಕರ್ ರೆಡ್ಡಿ, ಸಿ.ಟಿ ಅಲ್ಬಿನ್ , ಸಿ.ಟಿ ಸತೀಶ್ ನಾಯ್ಕ್, ಸಿ.ಟಿ ಸಿರಿಲಾಲ್ ಇವರುಗಳು ಯಾವ ರೀತಿ ಅಪಘಾತಗಳು ಸಂಭವಿಸಿದಾಗ ಮುನ್ನೇ಼ಚರಿಕೆ ಕ್ರಮವನ್ನು ಡೆಮೋ ಮಾಡಿ ತೋರಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರುವ ಮುಖ್ಯೋಪಾಧ್ಯಾಯರಾದ ಸುರೇಶ್ .ಕೆ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮದ ಪ್ರಯೋಜನೆಗಳನ್ನು ವಿವರಿಸಿದರು.


ಒಂಭತ್ತನೇ ತರಗತಿಯ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡಿದರು, ವಿದ್ಯಾರ್ಥಿಗಳಾದ ಮಾನ್ಯ ಸ್ವಾಗತಿಸಿದರು, ರಕ್ಷಿತಾ ವಂದಿಸಿದರು, ಶ್ರುತಾ ಆಳ್ವ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಎಸ್ ಡಿ ಎಂ ಕಾಲೇಜು ಮತ್ತು ಎಸ್ ಡಿ ಎಂ ಕ್ರೀಡಾ ವಿಭಾಗದ ಸಂಯೋಜನೆಯಲ್ಲಿ ಬೇಸಿಗೆ ಶಿಬಿರ

Suddi Udaya

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 6 ಕ್ಷೇತ್ರಕ್ಕೆ ಅವಿರೋಧ ಆಯ್ಕೆ: 6 ಸ್ಥಾನ ಪದ್ಮಗೌಡ ನೇತೃತ್ವದ ತಂಡಕ್ಕೆ ಜಯ

Suddi Udaya

ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ, ಪುರಸ್ಕಾರ

Suddi Udaya

ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಬಳಂಜ ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಫೆ.8-12: ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya
error: Content is protected !!