25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯಿಂದ (NDRF) ಮಾಹಿತಿ ಕಾರ್ಯಾಗಾರ

ಉಜಿರೆ: ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆ ಉಜಿರೆಯಲ್ಲಿ ಸೆ. 1 ರಂದು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯಿಂದ ಮಾಹಿತಿ ಕಾರ್ಯಗಾರ ಪರಿಸರ ಸಂಘದ ವತಿಯಿಂದ ನಡೆಯಿತು.


ಇನೆಸ್ಪಕ್ಟರ್ ಶಾಂತಿಲಾಲ್ ಜಟ್ಟಿ NDRF ಬೆಂಗಳೂರು ಇವರು ವಿದ್ಯಾರ್ಥಿಗಳಿಗೆ ಯಾವ ರೀತಿಯಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ಕೆಲಸ ನಿರ್ವಹಣೆ ಮಾಡುತ್ತದೆ ಎಂದು ತಿಳಿಸಿದರು. ಹೆಡ್ ಕಾನ್ಸ್ಟೇಬಲ್ ಶಂಕರಪ್ಪ ಇದರ ಮುಖ್ಯ ಕರ್ತವ್ಯಗಳು ,ಭೂಕಂಪ, ನೆರೆ ಸುನಾಮಿ ಚಂಡಮಾರುತ ಅಗ್ನಿ ಅವಘಡ, ಅಣು ದುರಂತ, ತುರ್ತು ವೈದ್ಯಕೀಯ ನೆರವು, ವಿಪತ್ತು ಸಂಭವಿಸಿದ ಪ್ರದೇಶದಲ್ಲಿ ಹುಡುಕಾಟ ಮತ್ತು ರಕ್ಷಣಾ ಕಾರ್ಯಚರಣೆ, ಇವುಗಳ ಬಗ್ಗೆ ಮಾಹಿತಿ ನೀಡಿದರು.ಹೆಡ್ ಕಾನ್ಸ್ಟೇಬಲ್ ಗಳಾದ ಸಿಟಿ ದಿವಕರ್ ರೆಡ್ಡಿ, ಸಿ.ಟಿ ಅಲ್ಬಿನ್ , ಸಿ.ಟಿ ಸತೀಶ್ ನಾಯ್ಕ್, ಸಿ.ಟಿ ಸಿರಿಲಾಲ್ ಇವರುಗಳು ಯಾವ ರೀತಿ ಅಪಘಾತಗಳು ಸಂಭವಿಸಿದಾಗ ಮುನ್ನೇ಼ಚರಿಕೆ ಕ್ರಮವನ್ನು ಡೆಮೋ ಮಾಡಿ ತೋರಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರುವ ಮುಖ್ಯೋಪಾಧ್ಯಾಯರಾದ ಸುರೇಶ್ .ಕೆ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮದ ಪ್ರಯೋಜನೆಗಳನ್ನು ವಿವರಿಸಿದರು.


ಒಂಭತ್ತನೇ ತರಗತಿಯ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡಿದರು, ವಿದ್ಯಾರ್ಥಿಗಳಾದ ಮಾನ್ಯ ಸ್ವಾಗತಿಸಿದರು, ರಕ್ಷಿತಾ ವಂದಿಸಿದರು, ಶ್ರುತಾ ಆಳ್ವ ಕಾರ್ಯಕ್ರಮ ನಿರೂಪಿಸಿದರು.

Related posts

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ. 2. 43 ಲಕ್ಷ ನಿವ್ವಳ ಲಾಭ.

Suddi Udaya

ಧರ್ಮಸ್ಥಳ: ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟ

Suddi Udaya

ಹತ್ಯಡ್ಕ ಸಹಕಾರಿ ಸಂಘದ ಚುನಾವಣೆ :ಸಹಕಾರ ಭಾರತೀಯ ಅಭ್ಯರ್ಥಿಗಳ ‘ಮಹಾಭಿಯಾನ’ ಪ್ರಚಾರಕ್ಕೆ ಅರುಣ್ ಕುಮಾರ್ ಪುತ್ತಿಲರಿಂದ ಚಾಲನೆ

Suddi Udaya

ಫೇಸ್‌ಬುಕ್ ಜಾಲತಾಣದಲ್ಲಿ ಮಹಿಳೆಗೆ ಚಾರಿತ್ರ್ಯಕ್ಕೆ ಧಕ್ಕೆಯಾಗುವ ಬರಹ ಬೆದರಿಕೆ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಇದರ ನೇತೃತ್ವ ರೂ. 6 ಕೋಟಿ ವೆಚ್ಚದ ನೂತನವಾಗಿ ನಿರ್ಮಿಸಲಾದ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಹಾಗೂ ವಾಣಿ ವಿದ್ಯಾಸಂಸ್ಥೆಗಳ ನೂತನ ಕಟ್ಟಡ ಎ.20 ರಂದು ಶೃಂಗೇರಿ ಮಠದ ಶ್ರೀಮಜ್ಜದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿಯವರಿಂದ ಲೋಕಾರ್ಪಣೆ

Suddi Udaya

ಫೆ 14, 15: ಮುಗೇರಡ್ಕ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ರಜತ ಸಂಭ್ರಮದ ಪ್ರಯುಕ್ತ ರಜತ ಪಥ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!