30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಕ್ಕಾವುನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕುಕ್ಕಾವು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಬೆಳ್ತಂಗಡಿ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಪ್ರಗತಿ ಬಂಧು ಸ್ವ ಸಹಾಯ ಸಂಘಗ ಳ ಒಕ್ಕೂಟ , ಮುಂಡಾಜೆ ವಲಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕುಕ್ಕಾವು ಜನಜಾಗೃತಿ ಗ್ರಾಮ ಸಮಿತಿ ಕುಕ್ಕಾವು ಇದರ ಸಹಕಾರದೊಂದಿಗೆ ಎಸ್.ಡಿ.ಎಮ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಇಲ್ಲಿಯ ತಜ್ಞ ವೈದ್ಯರುಗಳಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕಾವು ನಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕೂಡ ಬೆಟ್ಟು ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ವಾಸುದೇವ ಕಕ್ಕೆನೇಜಿ ರವರು ನೆರವೇರಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಗ್ರಾಮೀಣ ಜನರಿಗೆ ಅನುಕೂಲವಾಗುವಂತೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು , ಊರಿನ ಜನರಿಗೆ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಂಡಿರುವುದಕ್ಕಾಗಿ ಸಂತಸ ವ್ಯಕ್ತಪಡಿಸಿದರು. ಎಸ್.ಡಿ.ಎಮ್ ಆಸ್ಪತ್ರೆಯ ಮೇಲ್ವಿಚಾರಕರಾದ ರವೀಂದ್ರ ಗುಡಿಗಾರರವರು ಎಸ್.ಡಿ.ಎಮ್ ಆಸ್ಪತ್ರೆಯಲ್ಲಿ ಸಿಗುವ ಸೌಲಭ್ಯದ ಬಗ್ಗೆ ಮಾಹಿತಿಯನ್ನು ನೀಡಿದರು.

ತಾಲೂಕಿನ ಯೋಜನಾಧಿಕಾರಿ ಯಶೋಧರ ಯಾವುದೇ ವ್ಯಕ್ತಿಗೆ ಆರೋಗ್ಯದಲ್ಲಿ ಸಮಸ್ಯೆಯಾದಾಗ ನಾವು ನಿರ್ಲಕ್ಷ್ಯ ವಹಿಸದೆ ಸರಿಯಾದ ಚಿಕಿತ್ಸೆಯನ್ನು ಪಡೆಯಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಗ್ರಾ.ಪಂ. ಅಧ್ಯಕ್ಷ ವಿನಯ ಚಂದ್ರ ಗೌಡ ರವರು ಕ್ಷೇತ್ರದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಶಿಬಿರದ್ದೊಂದಿಗೆ ಭಾಗವಹಿಸಲು ಅವಕಾಶ ಕಲ್ಪಿಸಿದ್ದಕ್ಕೆ ಧನ್ಯವಾದ ಅರ್ಪಿಸಿದರು.

ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಹರೀಶ್ ಮಾoಜ , ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ನೋಣಯ್ಯ ಗೌಡ ಬಂಗಾಡಿ ಸಿಎ ಬ್ಯಾಂಕ್ ಉಪಾಧ್ಯಕ್ಷ ಆನಂದ ಗೌಡ. ಒಕ್ಕೂಟದ ಅಧ್ಯಕ್ಷ ಜಗದೀಶ್ ಕುಂಬಾರ ಮತ್ತು ಸುರೇಶ್, ಶೌರ್ಯ ವಿಪತ್ತು ಘಟಕ ಪ್ರತಿನಿಧಿ ಲೋಕೇಶ್ ಕುಂಬಾರು ಉಪಸ್ಥಿತರಿದ್ದರು. ಮಕ್ಕಳ ತಜ್ಞರಾದ ಡಾ| ಪ್ರತೀತ್ , ಮೂಳೆ ತಜ್ಞರಾದ ಡಾ| ರಜತ್, ಕಣ್ಣಿನ ತಜ್ಞರಾದ ಡಾ| ಶುಭಾಸ್ ಚಂದ್ರ, ಇ ಎನ್ ಟಿ ತಜ್ಞ ಡಾ| ರೋಹನ್ ದೀಕ್ಷಿತ್, ಪಿಜೀಷಿಯನ್ ಜನರಲ್ ಡಾ| ಪ್ರೌ ಸ್ಟಿಲ್ ಮತ್ತು ಡಾ| ಆದರ್ಶ ಹಾಗೂ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ತಪಾಸಣೆಯನ್ನು ನಡೆಸಿಕೊಟ್ಟರು.

ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಮಧುರಾ ವಸಂತ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಜ್ಞಾನ ವಿಕಾಸ ಕೇಂದ್ರದ ಸದಸ್ಯರಾದ ತ್ರಿವೇಣಿ ಸ್ವಾಗತಿಸಿ, ವಲಯ ಮೇಲ್ವಿಚಾರಕ ಜನಾರ್ದನ ಧನ್ಯವಾದವಿತ್ತರು. ಸೇವಾ ಪ್ರತಿನಿಧಿ ರಶ್ಮಿ ಸುರೇಖಾ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮತ್ತು ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ರಸ್ತೆ ಬದಿ ಹಣ್ಣಿನ ಗಿಡ ನಾಟಿ, ನೆಟ್ಟ ಗಿಡಗಳ ಪುನಶ್ಚೇತನ ಮತ್ತು ಇಂಗು ಗುಂಡಿ ರಚನಾ ಕಾರ್ಯಕ್ರಮ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವೈದ್ಯಕೀಯ ನೆರವು

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡ ಮತ್ತು ಘಟಕ ಸಮಿತಿಗಳ ಸಮಾಲೋಚನಾ ಬೈಠಕ್

Suddi Udaya

ಕಣಿಯೂರು: ಟೀಂ ನವಕೇಸರಿ ಮಲೆಂಗಲ್ಲು ಮತ್ತು ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!