23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ಸಂಘವು ರೂ. 32.31 ಕೋಟಿ ವ್ಯವಹಾರ, ರೂ. 49.24 ಲಕ್ಷ ನಿವ್ವಳ ಲಾಭ

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆಯು ಸೆ. 7ರಂದು ಕೃಷಿ ಪತ್ತಿನ ಸಹಕಾರಿ ಸಂಘದ ಕನಸು ರೈತ ಸಭಾಭವನದಲ್ಲಿ ಜರುಗಿತು.

ಸಂಘದ ಅಧ್ಯಕ್ಷ ಪಿ ಜಯರಾಜ್ ಹೆಗ್ಡೆ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘವು 32,31,82,518.48 ವ್ಯವಹಾರ ನಡೆಸಿ, ವಾರ್ಷಿಕ ಹಾಲು ಖರೀದಿ 18,30,216.1 ಲೀಟರ್ , ಒಟ್ಟು ಮೊತ್ತ 6,60,57212, ರೂ. 49,24,391.64 ನಿವ್ವಳ ಲಾಭ, ರೂ. 27,47,646 ಉತ್ಪಾದಕರಿಗೆ ಬೋನಸ್ ನೀಡಿದೆ ಎಂದರು.

ಸುಮಾರು ರೂ. 88000 ವನ್ನು 22 ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ಮೂಲಕ ನೀಡಲಾಯಿತು. ಸದಸ್ಯರ ಕ್ಷೇಮನಿಧಿಯಿಂದ ಸುಮಾರು ರೂ. 95000 ಗಳನ್ನು ಆರ್ಥಿಕ ಸಹಾಯಧನ ನೀಡಲಾಯಿತು.

ಸಂಘದ ಮಾಜಿ ನಿರ್ದೇಶಕ ಸೇಸಪ್ಪ ಸಾಲಿಯಾನ್ ರವರು ಹಾಲಿಗೂ ಪಶು ಆಹಾರದ ದರಕ್ಕೂ ವಿಪರೀತ ಏರುಪೇರು ಇದ್ದು ಕನಿಷ್ಢ ರೂ. 50 ಪ್ರತಿ ಲೀಟರ್ ಗೆ ದೊರೆಯುವ ಬಗ್ಗೆ ಒಕ್ಕೂಟ, ಕರ್ನಾಟಕ ಹಾಲು ಮಹಾಮಂಡಳಿ ಪತ್ರ ಬರೆಯುವಂತೆ ಮಹಾಸಭೆಯಲ್ಲಿ ನಿರ್ಣಹಿಸಬೇಕೆಂದು ಒತ್ತಾಯಿಸಿದರು. ಮಹಾಸಭೆಗೆ ಆಗಮಿಸಿದ ವಾರ್ಷಿಕ ಅವಧಿಯಲ್ಲಿ ಹಾಲು ಪೂರೈಸಿದ ಎಲ್ಲಾ ಸದಸ್ಯರಿಗೆ ಕುಕ್ಕರ್ ನೀಡಲಾಯಿತು. ಹಾಗೂ ಅತೀ ಹೆಚ್ಚು ಹಾಲು ಪೂರೈಸಿದ 10 ಜನ ಸದಸ್ಯರು ಹಾಗೂ 10000 ಲೀಟರ್ ಗಿಂತ ಅಧಿಕ ಹಾಲು ಪೂರೈಸಿದ 25ಜನ ಸದಸ್ಯರನ್ನು ಗೌರವಿಸಲಾಯಿತು.

ಈ ವೇಳೆ ಮುಖ್ಯಮಂತ್ರಿ ಪದಕ ಪಡೆದ ಎಂ ಪ್ರವೀಣ್, ಏಕಾಂಗಿಯಾಗಿ 2-3 ದನಗಳನ್ನು ಸಾಕಿಕೊಂಡು ಹೈನುಗಾರಿಕೆ ನಡೆಸುತ್ತಿರುವ ಶ್ರೀಮತಿ ಸರಸ್ವತಿ ಹಾಗೂ ಹೇರಾಜೆ ಸರಕಾರಿ ಶಾಲೆಯನ್ನು ಆರಂಭಿಸಿದ ಅಬ್ದುಲ್ ರಹಿಮಾನ್ ಪಿ.ಕೆ ರವರನ್ನು ಸನ್ಮಾನಿಸಲಾಯಿತು.

ಶ್ರೀಮತಿ ಪ್ರಮೀಳಾ ಪ್ರಾರ್ಥಿಸಿದರು. ನಿರ್ದೇಶಕ ಜನಾರ್ದನ ಗೌಡ ಸ್ವಾಗತಿಸಿದರು. ಒಕ್ಕೂಟದ ಅನುದಾನಗಳ ಬಗ್ಗೆ ವಿಸ್ತರಣಾಧಿಕಾರಿ ರಾಜೇಶ್ ಕಾಮತ್ ವಿವರಿಸಿದರು. ಕಾರ್ಯದರ್ಶಿ ಜಯರಾಜ್ ನಿರೂಪಿಸಿ, ನಿರ್ದೇಶಕ ಪಿ ಕೃಷ್ಣಪ್ಪ ವಂದಿಸಿದರು,

Related posts

ತನ್ನ ಹೋಟೆಲ್ ಗೆ ಕಂಬಳ ಓಟದ ಪ್ರಸಿದ್ಧ ” ಕೋಣ ತಾಟೆ” ಹೆಸರಿಟ್ಟ ಮಾಲೀಕ

Suddi Udaya

ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ

Suddi Udaya

ಉಜಿರೆ ಕೇರಿಮಾರ್ ನಿವಾಸಿ ಶ್ರೀಮತಿ ಚೆಲುವಮ್ಮ ನಿಧನ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ

Suddi Udaya

ಬೆಳ್ತಂಗಡಿ ಪಶುವೈದ್ಯ ಆಸ್ಪತ್ರೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಡಾ.ಮಂಜ ನಾಯ್ಕ ಹಾಗೂ ಡಾ.ಜಯ ಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕಕ್ಯಪದವು ಎಲ್‌ಸಿಆರ್ ವಿದ್ಯಾಸಂಸ್ಥೆ: ಕಾಲೇಜು ವಿಭಾಗದಲ್ಲಿ ವಾಣಿಜ್ಯ ಚಟುವಟಕೆ

Suddi Udaya
error: Content is protected !!