September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ ನಲ್ಲಿ ಗುರುಜಯಂತಿ ಆಚರಣೆ

ತೋಟತ್ತಾಡಿ: ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ ತೋಟತ್ತಾಡಿಯಲ್ಲಿ ಸೆ.07 ರಂದು ಶ್ರೀ ನಾರಾಯಣ ಗುರುಗಳ 171ನೇ ವರ್ಷದ ಗುರುಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.

ಬೆಳಿಗ್ಗೆ ಗುರುಪೂಜೆ ಬಳಿಕ ಸಭಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಬಾಲಕೃಷ್ಣ ಸೌತಡ್ಕ ಉದ್ಘಾಟನೆ ಮಾಡಿದರು.

ಸಂಘದ ಸದಸ್ಯರ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಯಲ್ಲಿ ತೆರ್ಗಡೆಯಾದ ಮಕ್ಕಳಿಗೆ ವಿದ್ಯಾರ್ಥಿವೇತನ ಮತ್ತು ಆಟೋಟ ಸ್ಪರ್ಧೆ ಯ ಬಹುಮಾನವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸುರೇಶ್. ಎಮ್.ಎನ್., ಯೂನಿಯನ್ ಕೌಸಿಲರಾದ ಉನಿಕೃಷ್ಣನ್, ಉಪಾಧ್ಯಕ್ಷ ಶಿವರಾಜನ್, ಗೌರವ ಅಧ್ಯಕ್ಷ ಚಿದಾನಂದ, ಮಹಿಳಾ ಸಂಘ ಅಧ್ಯಕ್ಷೆ ಸಿಂಧು ಅಜಿತ್, ಯೂತ್ ಮೂಮೆಂಟ್ ಅಧ್ಯಕ್ಷ ಸುಧೀರ್ ಹಾಗೂ ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಮನೋಜ್ ನಿರೂಪಿಸಿದರು. ಕಾರ್ಯಕ್ರಮದಲ್ಲಿ 250ಕ್ಕೂ ಹೆಚ್ಚು ಜನ ಭಾಗಿಯಾಗಿ 20 ಬಗೆಯ ಪದಾರ್ಥಗಳು ಹಾಗೂ ಪಾಯಸದೊಂದಿಗೆ ಚದಯ ಸದ್ಯ ಸವಿದರು.

Related posts

ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

Suddi Udaya

ಲಾಯಿಲ: ಗಾಂಧಿನಗರದಲ್ಲಿ ರಸ್ತೆಕಾಮಗಾರಿ ಲೋಕಾರ್ಪಣೆ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಕಬಡ್ಡಿ ಆಟಗಾರ ರಾಷ್ಟ್ರ ಮಟ್ಟದ ಪಂದ್ಯಾಟಕ್ಕೆ ಆಯ್ಕೆ

Suddi Udaya

5, 8, 9 ಮತ್ತು 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ಆದೇಶ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

Suddi Udaya

ಮಚ್ಚಿನ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಶ್ರೀ ಈಶ್ವರ ದೇವರ ಗರ್ಭಗುಡಿಯ ಷಡಾಧಾರ ಪ್ರತಿಷ್ಠೆ

Suddi Udaya
error: Content is protected !!