23.5 C
ಪುತ್ತೂರು, ಬೆಳ್ತಂಗಡಿ
June 8, 2026
ರಾಜಕೀಯ

ನಡ -ಕನ್ಯಾಡಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ

ನಡ :ಲಾಯಿಲ ಮಹಾಶಕ್ತಿ ಕೇಂದ್ರದ ನಡ -ಕನ್ಯಾಡಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದ ಅಂಗಣದಲ್ಲಿ ನೆರವೇರಿತು. ಅಭ್ಯಾಸ ವರ್ಗದ ಉದ್ಘಾಟನೆಯನ್ನು ಹಿರಿಯರಾದ ರಾಘವ ಆಚಾರ್ಯ ಇವರು ನೆರವೇರಿಸಿದರು ಜೊತೆಗೆ ಲಾಯಿಲ ಮಹಾ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಗಳಾದ ಅರವಿಂದ್ ಲಾಯಿಲ, ವರ್ಗದ ಲಾಯಿಲ ಮಹಾಶಕ್ತಿ ಕೇಂದ್ರದ ಪ್ರಭಾರಿ ಜಯಂತ್ ಗೌಡ ಗುರಿಪಳ್ಳ ಹಾಗೂ ಉದ್ಘಾಟನಾ ಭಾಷಣವನ್ನು ಪ್ರಮುಖರಾದ ಅಜಿತ್ ಅರಿಗ ಇವರು ನಡೆಸಿ ಕೊಟ್ಟರು.
ಪ್ರಥಮ ಅವಧಿಯನ್ನು ರವಿ ಇಳಂತಿಲ, ಎರಡನೆಯ ಅವಧಿಯನ್ನು ಜಿಲ್ಲೆಯ ಕಾರ್ಯದರ್ಶಿ ಸೀತಾರಾಮ ಬೆಲಾಳ್, ಮೂರನೇ ಅವಧಿಯನ್ನು ಸುಧೀರ್ ಸುವರ್ಣ ಇವರು ನೆರವೇರಿಸಿದರು.


ಸಮಾರೋಪ ಸಮಾರಂಭದ ಮುಖ್ಯ ಭಾಷಣಕಾರರಾಗಿ ವಿಧಾನಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ಇವರು ಸಮಾರೋಪದ ಮಾತುಗಳನ್ನಾಡಿದರು. ವೇದಿಕೆಯಲ್ಲಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರಂಕಿ, ಜಿಲ್ಲೆಯ ರೈತ ಮೋರ್ಚಾ ಅಧ್ಯಕ್ಷರಾದ ಗಣೇಶ್ ನಾವೂರು, ನಡ ಪಂಚಾಯತ್ ಅಧ್ಯಕ್ಷರಾದ ಮಂಜುಳಾ,ನಡ ಶಕ್ತಿ ಕೇಂದ್ರ ಅಧ್ಯಕ್ಷರಾದ ವಿಜಯ ಗೌಡ ಹಾಗೂ ಕನ್ಯಾಡಿ ಶಕ್ತಿ ಕೇಂದ್ರ ಅಧ್ಯಕ್ಷ ಅಶೋಕ್ ಶೆಟ್ಟಿ ಇವರು ಉಪಸ್ಥಿತರಿದ್ದರು.
ಅಭ್ಯಾಸ ವರ್ಗದಲ್ಲಿ ನಡ ಪಂಚಾಯತ್ ಸದಸ್ಯರುಗಳು, ಹಾಲಿನ ಸೊಸೈಟಿಯ ನಿರ್ದೇಶಕರುಗಳು, ಬೂತ್ ಅಧ್ಯಕ್ಷ ಕಾರ್ಯದರ್ಶಿಗಳು, ಹಾಗೂ ಪಕ್ಷದ ಅಭಿಮಾನಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು..

Related posts

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಯಾರದ್ದೋ ಓಲೈಕೆಗಾಗಿ ಸರ್ಕಾರದ ತೀರ್ಮಾನಗಳು: ಮತಾಂತರ ನಿಷೇಧ ಕಾಯಿದೆ ವಾಪಸ್ಸಿಗೆ ಬಿ.ಜೆ.ಪಿ ವಿರೋಧ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂರಿಂದ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ವಿಶೇಷ ಪೂಜೆ

Suddi Udaya

ಭಾರಿ ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವು: ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ: ನಾವೂರಿನಲ್ಲಿ ಸಂಭ್ರಮಾಚರಣೆ

Suddi Udaya

ಮರೋಡಿ: ಗ್ರಾ.ಪಂ ಮಾಜಿ ಸದಸ್ಯ ರವಿರಾಜ್ ಬಳ್ಳಾಲ್ ಕಾಂಗ್ರೇಸ್ ಸೇರ್ಪಡೆ

Suddi Udaya
error: Content is protected !!