23.7 C
ಪುತ್ತೂರು, ಬೆಳ್ತಂಗಡಿ
April 24, 2026
ರಾಜಕೀಯ

ನಡ -ಕನ್ಯಾಡಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ

ನಡ :ಲಾಯಿಲ ಮಹಾಶಕ್ತಿ ಕೇಂದ್ರದ ನಡ -ಕನ್ಯಾಡಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದ ಅಂಗಣದಲ್ಲಿ ನೆರವೇರಿತು. ಅಭ್ಯಾಸ ವರ್ಗದ ಉದ್ಘಾಟನೆಯನ್ನು ಹಿರಿಯರಾದ ರಾಘವ ಆಚಾರ್ಯ ಇವರು ನೆರವೇರಿಸಿದರು ಜೊತೆಗೆ ಲಾಯಿಲ ಮಹಾ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಗಳಾದ ಅರವಿಂದ್ ಲಾಯಿಲ, ವರ್ಗದ ಲಾಯಿಲ ಮಹಾಶಕ್ತಿ ಕೇಂದ್ರದ ಪ್ರಭಾರಿ ಜಯಂತ್ ಗೌಡ ಗುರಿಪಳ್ಳ ಹಾಗೂ ಉದ್ಘಾಟನಾ ಭಾಷಣವನ್ನು ಪ್ರಮುಖರಾದ ಅಜಿತ್ ಅರಿಗ ಇವರು ನಡೆಸಿ ಕೊಟ್ಟರು.
ಪ್ರಥಮ ಅವಧಿಯನ್ನು ರವಿ ಇಳಂತಿಲ, ಎರಡನೆಯ ಅವಧಿಯನ್ನು ಜಿಲ್ಲೆಯ ಕಾರ್ಯದರ್ಶಿ ಸೀತಾರಾಮ ಬೆಲಾಳ್, ಮೂರನೇ ಅವಧಿಯನ್ನು ಸುಧೀರ್ ಸುವರ್ಣ ಇವರು ನೆರವೇರಿಸಿದರು.


ಸಮಾರೋಪ ಸಮಾರಂಭದ ಮುಖ್ಯ ಭಾಷಣಕಾರರಾಗಿ ವಿಧಾನಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ಇವರು ಸಮಾರೋಪದ ಮಾತುಗಳನ್ನಾಡಿದರು. ವೇದಿಕೆಯಲ್ಲಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರಂಕಿ, ಜಿಲ್ಲೆಯ ರೈತ ಮೋರ್ಚಾ ಅಧ್ಯಕ್ಷರಾದ ಗಣೇಶ್ ನಾವೂರು, ನಡ ಪಂಚಾಯತ್ ಅಧ್ಯಕ್ಷರಾದ ಮಂಜುಳಾ,ನಡ ಶಕ್ತಿ ಕೇಂದ್ರ ಅಧ್ಯಕ್ಷರಾದ ವಿಜಯ ಗೌಡ ಹಾಗೂ ಕನ್ಯಾಡಿ ಶಕ್ತಿ ಕೇಂದ್ರ ಅಧ್ಯಕ್ಷ ಅಶೋಕ್ ಶೆಟ್ಟಿ ಇವರು ಉಪಸ್ಥಿತರಿದ್ದರು.
ಅಭ್ಯಾಸ ವರ್ಗದಲ್ಲಿ ನಡ ಪಂಚಾಯತ್ ಸದಸ್ಯರುಗಳು, ಹಾಲಿನ ಸೊಸೈಟಿಯ ನಿರ್ದೇಶಕರುಗಳು, ಬೂತ್ ಅಧ್ಯಕ್ಷ ಕಾರ್ಯದರ್ಶಿಗಳು, ಹಾಗೂ ಪಕ್ಷದ ಅಭಿಮಾನಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು..

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಬಡಗಕಾರoದೂರು, ಸುಲ್ಕೇರಿಮೊಗ್ರು, ಪಿಲ್ಯ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ

Suddi Udaya

ಡಾ. ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅಮಿತ್ ಷಾ ವಿವಾದಾತ್ಮಕ ಹೇಳಿಕೆ ಹಾಗೂ ಸಚಿವೆ ವಿರುದ್ಧ ಸಿ.ಟಿ ರವಿ ಹೇಳಿಕೆ ವಿರೋಧಿಸಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

Suddi Udaya

ಭಾರತೀಯ ಜನತಾ ಪಾರ್ಟಿ ಉಜಿರೆ ಮಹಾಶಕ್ತಿ ಕೇಂದ್ರ ದ ಸಭೆ

Suddi Udaya

ಅರಸಿನಮಕ್ಕಿ: ಕಿಶೋರ್ ಪಲಸ್ತಡ್ಕಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮೆಸ್ಕಾಂ ನಿಗಮದ ಅಧ್ಯಕ್ಷರಾಗಿ ಕೆ ಹರೀಶ್ ಕುಮಾರ್

Suddi Udaya

ನೂತನ ಉಪರಾಷ್ಟ್ರಪತಿಯಾಗಿ ಎ ನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್

Suddi Udaya
error: Content is protected !!