22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ನಾರಾವಿ: “ಶಿಕ್ಷಕ ವೃತ್ತಿ ತುಂಬಾ ಪವಿತ್ರವಾದದ್ದು. ವಿದ್ಯಾರ್ಥಿಗಳು ಮಾಡುವ ತಪ್ಪುಗಳನ್ನು ಎತ್ತಿ ತೋರಿಸದೆ ನಯವಾಗಿ ತಿದ್ದಿ ಅವರನ್ನು ಸರಿದಾರಿಗೆ ತರುವವನೇ ನಿಜವಾದ ಶಿಕ್ಷಕ. ಗುರು ಶಿಷ್ಯರ ಸಂಬಂಧ ಅಮರವಾದುದು “ಎಂದು ಸಂತ ಅಂತೋನಿ ಕಾಲೇಜಿನ ಪ್ರಾoಶುಪಾಲ ಸಂತೋಷ್ ಸಲ್ದಾನ ಹೇಳಿದರು.

ಅವರು ಸಂತ ಅಂತೋನಿ ಪದವಿ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಂಟಿಯಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಸಲ್ಲಿಸಲಾಯಿತು. ವೇದಿಕೆಯಲ್ಲಿ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು. ದ್ವಿತೀಯ ಪಿ ಯು ಸಿ ವಿದ್ಯಾರ್ಥಿನಿ ಕು. ಗ್ಲೆನಿಷಾ ಸ್ವಾಗತಿಸಿದರು. ಕು ಕಾವ್ಯ, ಡಾ. ಸರ್ವ ಪಳ್ಳಿ ರಾಧಾಕೃಷ್ಣನ್ ಅವರ ಜೀವನ ಸಾಧನೆಯನ್ನು ವಿವರಿಸಿದರು. ಕು ಶೈಲಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಪದವಿ ಕಾಲೇಜು ವಿದ್ಯಾರ್ಥಿಗಳು ಎಲ್ಲಾ ಉಪನ್ಯಾಸಕರಿಗೆ ಸ್ಪರ್ಧೆಗಳನ್ನು ಏರ್ಪಡಿಸಿ ರಂಜಿಸಿದರು.

Related posts

ಮಚ್ಚಿನ ಮೊರಾರ್ಜಿ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ

Suddi Udaya

ಕುಂಭಶ್ರೀ ಕಾಲೇಜು ವಿದ್ಯಾರ್ಥಿಗಳ 2K25: ಎಕ್ಸ್‌ಪ್ಲೋರಿಯಾ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಡಾ. ಶ್ಯಾಮ್ ಪ್ರಸಾದ ಮುಖರ್ಜಿ ಯವರ ಪುಣ್ಯಸ್ಮರಣೆ

Suddi Udaya

ಕೊಯ್ಯೂರು : ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರ ಎಳೆದು ಪರಾರಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಬೆಂಗಳೂರು ಭುವನೇಶ್ವರಿ ಕ್ಯಾಟರರ್ಸ್ ಜೆಬಿಆರ್ ಎಂಟರ್ ಪ್ರೈಶಸ್ ರವರಿಂದ ದೇವರಿಗೆ ವಿಶೇಷ ಹೂವಿನ ಅಲಂಕಾರ

Suddi Udaya

ಕಡಿರುದ್ಯಾವರ: 30 ಅಡಿ ಆಳದ ಬಾವಿಗೆ ಬಿದ್ದ ಗಬ್ಬದ ಹಸು

Suddi Udaya
error: Content is protected !!