25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೆರಿಯ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

ನೆರಿಯ ಗ್ರಾಮದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಸೆ.7 ರಂದು ನಡೆದ ನೆರಿಯ ಶಕ್ತಿ ಕೇಂದ್ರ ಮಟ್ಟದ ಅಭ್ಯಾಸ ವರ್ಗ ಸಭೆ ಸೇವಾ ಸಹಕಾರಿ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ಲೋಕಯ್ಯ ಗೌಡ ಇಟ್ಯಾಡಿ, ಸೋಂಪ ಗೌಡ ಬಾಂದಡ್ಕ, ಶಾಂತಪ್ಪ ಮಲೆಕುಡಿಯ ದೀಪ ಬೆಳಗಿಸಿ ಉದ್ಘಾಟಿಸಿದರು. ಅಭ್ಯಾಸ ವರ್ಗದ ಸಂಚಾಲಕರಾದ ಕೊರಗಪ್ಪ ಗೌಡ ಚಾರ್ಮಾಡಿ ಉದ್ಘಾಟನಾ ಭಾಷಣ ಮಾಡಿದರು.

ವೇದಿಕೆಯಲ್ಲಿ ಬಾಬು ಗೌಡ ಪರ್ಪಲ ಉಪಸ್ಥಿತರಿದ್ದರು. ಈ ಮಹಾಬಲ ಗೌಡ, ರಾಜೇಶ್ ಪೆರ್ಮುಡ, ವೃಷಾಂಕ್ ಖಾಡಿಲ್ಕರ್, ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ನಿರಂಜನ್ ಶೆಟ್ಟಿ ಇವರುಗಳು ಬೈಠಕ್ ನೀಡಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಮಾರೋಪ ಭಾಷಣ ಮಾಡಿ, ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ನೆರೆದ ಕಾರ್ಯಕರ್ತರಿಗೆ ಅರಿವು ಮೂಡಿಸಿದರು.

ಈ ಸಂದರ್ಭದಲ್ಲಿ ಉಜಿರೆ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಯಶವಂತ ಪುದುವೆಟ್ಟು, ಪಂಚಾಯತ್ ಅಧ್ಯಕ್ಷ ಶ್ರಿಮತಿ ವಸಂತಿ, ಶಕ್ತಿ ಕೇಂದ್ರದ ಪ್ರಮುಖರಾದ ವಿಶ್ವನಾಥ ದ ಗೌಡ, ಸಿಎ ಅಧ್ಯಕ್ಷ ಪ್ರಕಾಶ್ ನಾರಾಯಣ, ನೆರಿಯ ಪಂಚಾಯತ್ ಸದಸ್ಯರುಗಳು, ಬೂತ್ ಅಧ್ಯಕ್ಷರುಗಳು, ಪದಾಧಿಕಾರಿಗಳು, ಹಾಗೂ ಅನನ್ಯ ಜವಾಬ್ದಾರಿಯ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ತುಳು ಭಾಷಣ ಸ್ಪರ್ಧೆ: ಬೆಳಾಲು ಪ್ರೌಢಶಾಲೆಯ ಕು. ಕೀರ್ತನಾ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕಳೆಂಜ: ರಾಮಣ್ಣ ಗೌಡ ಬರೆಂಗಾಯ ನಿಧನ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಚಿನ್ನ ಪಾಲಿಶ್ ಮಾಡುವ ನೆಪದಲ್ಲಿ ವಂಚನೆ ಪ್ರಕರಣ: ಬಿಹಾರದ ಆರೋಪಿಯನ್ನು ಹೆಡೆಮುರಿ ಕಟ್ಟಿದ ವೇಣೂರು ಪೊಲೀಸರು

Suddi Udaya

ಜ.27,30: ಕೊಕ್ಕಡ ಮಾಯಿಲಕೋಟೆ ಸೀಮೆ ಕ್ಷೇತ್ರದಲ್ಲಿ ನಾಗಪ್ರತಿಷ್ಠೆ ಮತ್ತು ವಾರ್ಷಿಕ ನೇಮೋತ್ಸವ

Suddi Udaya

ಬಳಂಜ ಸ.ಹಿ.ಪ್ರಾ. ಶಾಲೆಯ ಅಭಿವೃದ್ಧಿಗೆ ರೂ. 2.00 ಕೋಟಿ ಅನುದಾನ ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜರಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೆ ಮನವಿ

Suddi Udaya
error: Content is protected !!