23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ತಿಲ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ತಣ್ಣೀರುಪಂತ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕು ತಣ್ಣೀರುಪಂತ ವಲಯ ದ.ಕ.ಜಿ.ಪ ಸರಕಾರಿ ಪ್ರೌಢಶಾಲೆ ಪುತ್ತಿಲದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಉದ್ಘಾಟನೆಯನ್ನು ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಜಯರಾಜ್ ಹೆಗ್ಡೆ ಪುತ್ತಿಲರವರು ನೆರವೇರಿಸಿ, ಮಕ್ಕಳಿಗೆ ಶುಭಹಾರೈಸಿದರು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಬಿ.ಸೋಮಶೇಖರ್ ಶೆಟ್ಟಿಯವರು ದುಶ್ಚಟದಿಂದ ಮಕ್ಕಳು ದೂರ ಇರಬೇಕು. ತಂದೆ ತಾಯಿಗೆ ಉತ್ತಮ ಮಕ್ಕಳಾಗಿ ಶಾಲೆಯಲ್ಲಿ ಉತ್ತಮ ವಿದ್ಯಾರ್ಥಿಗಳಾಗಿ ಬೆಳೆಯಬೇಕು ಮದ್ಯಪಾನ, ಸಿಗರೇಟ್, ಗಾಂಜಾ, ಆಫೀಮ್ ಇವುಗಳಿಂದ ದೂರವಿದ್ದು, ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಮೂಡಿ ಬರಬೇಕು ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಅಧ್ಯಕ್ಷ ರಾಜಶೇಖರ ರೈ, ಶಾಲೆಯ ಮುಖ್ಯೋಪಾಧ್ಯಾಯರಾದ ಮಹೇಂದ್ರ ಪೂಜಾರಿ, ಪುತ್ತಿಲ ಒಕ್ಕೂಟದ ಕಾರ್ಯದರ್ಶಿಯಾದ ಸುಖಲತಾ, ಸೇವಾಪ್ರತಿನಿಧಿಯಾದ ಸುನೀತಾ ಹಾಗೂ ಶಾಲೆಯ ಶಿಕ್ಷಕ ವೃಂದಾದವರು ಮತ್ತು ಮಕ್ಕಳು ಉಪಸ್ಥಿತರಿದ್ದರು.

ವಲಯದ ಮೇಲ್ವಿಚಾರಕರಾದ ವಿಶ್ವನಾಥ ಪೂಜಾರಿ ಕಾರ್ಯಕ್ರಮ ನಿರೂಪಿಸಿ , ಸೇವಾಪ್ರತಿನಿಧಿ ಶಾಂತ ಸ್ವಾಗತಿಸಿ, ಶಿಕ್ಷಕ ಪ್ರದೀಪ್ ಧನ್ಯವಾದವಿತ್ತರು.

Related posts

ಸುಂದರ ಮಲೆಕುಡಿಯರ ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಸ್ವಾಗತಾರ್ಹ: ಮಲೆಕುಡಿಯ ಸಂಘ ದಕ್ಷಿಣ ಕನ್ನಡ ಜಿಲ್ಲೆ

Suddi Udaya

ಉಜಿರೆ: ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕದ ವತಿಯಿಂದ 500ಕ್ಕೂ ಅಧಿಕ ವಿದ್ಯಾರ್ಥಿಗಳಿಂದ “ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ಬಳಂಜ: ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹರೀಶ್ ವೈ ಆಯ್ಕೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪಟ್ರಮೆ ಪಟ್ಟೂರು ಶ್ರೀರಾಮ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Suddi Udaya

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ

Suddi Udaya

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

Suddi Udaya
error: Content is protected !!