23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ತಿಲ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ತಣ್ಣೀರುಪಂತ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕು ತಣ್ಣೀರುಪಂತ ವಲಯ ದ.ಕ.ಜಿ.ಪ ಸರಕಾರಿ ಪ್ರೌಢಶಾಲೆ ಪುತ್ತಿಲದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಉದ್ಘಾಟನೆಯನ್ನು ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಜಯರಾಜ್ ಹೆಗ್ಡೆ ಪುತ್ತಿಲರವರು ನೆರವೇರಿಸಿ, ಮಕ್ಕಳಿಗೆ ಶುಭಹಾರೈಸಿದರು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಬಿ.ಸೋಮಶೇಖರ್ ಶೆಟ್ಟಿಯವರು ದುಶ್ಚಟದಿಂದ ಮಕ್ಕಳು ದೂರ ಇರಬೇಕು. ತಂದೆ ತಾಯಿಗೆ ಉತ್ತಮ ಮಕ್ಕಳಾಗಿ ಶಾಲೆಯಲ್ಲಿ ಉತ್ತಮ ವಿದ್ಯಾರ್ಥಿಗಳಾಗಿ ಬೆಳೆಯಬೇಕು ಮದ್ಯಪಾನ, ಸಿಗರೇಟ್, ಗಾಂಜಾ, ಆಫೀಮ್ ಇವುಗಳಿಂದ ದೂರವಿದ್ದು, ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಮೂಡಿ ಬರಬೇಕು ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಅಧ್ಯಕ್ಷ ರಾಜಶೇಖರ ರೈ, ಶಾಲೆಯ ಮುಖ್ಯೋಪಾಧ್ಯಾಯರಾದ ಮಹೇಂದ್ರ ಪೂಜಾರಿ, ಪುತ್ತಿಲ ಒಕ್ಕೂಟದ ಕಾರ್ಯದರ್ಶಿಯಾದ ಸುಖಲತಾ, ಸೇವಾಪ್ರತಿನಿಧಿಯಾದ ಸುನೀತಾ ಹಾಗೂ ಶಾಲೆಯ ಶಿಕ್ಷಕ ವೃಂದಾದವರು ಮತ್ತು ಮಕ್ಕಳು ಉಪಸ್ಥಿತರಿದ್ದರು.

ವಲಯದ ಮೇಲ್ವಿಚಾರಕರಾದ ವಿಶ್ವನಾಥ ಪೂಜಾರಿ ಕಾರ್ಯಕ್ರಮ ನಿರೂಪಿಸಿ , ಸೇವಾಪ್ರತಿನಿಧಿ ಶಾಂತ ಸ್ವಾಗತಿಸಿ, ಶಿಕ್ಷಕ ಪ್ರದೀಪ್ ಧನ್ಯವಾದವಿತ್ತರು.

Related posts

ಕೊಟ್ಟಿಗೆಹಾರ: ದೇವರ ಮನೆ ಪ್ರವಾಸಕ್ಕೆ ಹೋದ ಬೆಳ್ತಂಗಡಿಯ ಯುವಕ ನಾಪತ್ತೆ ಪ್ರಕರಣ: ಕೊಯ್ಯೂರು ಪರಿಸರದಲ್ಲಿ ಪತ್ತೆಯಾದ ಯುವಕ ದೀಕ್ಷಿತ್ ಪೂಜಾರಿ

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ಶತಮಾನೋತ್ಸವ ಸಂಭ್ರಮ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆ: ಮಾ.30 ರಂದು ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ ಪದಗ್ರಹಣ

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರ ತಂದೆ, ಶತಾಯುಷಿ ಮಿಜಾರು ಗುತ್ತು ಆನಂದ ಆಳ್ವ ನಿಧನ

Suddi Udaya

ಉಜಿರೆ ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಮುರಳಿ ಬಲಿಪ, ಕಾರ್ಯದರ್ಶಿಯಾಗಿ ಅಮಿತಾನಂದ ಹೆಗ್ಡೆ ಆಯ್ಕೆ

Suddi Udaya
error: Content is protected !!