25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ ಸಂಭ್ರಮದ ತೆನೆ ಹಬ್ಬ

ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ ಸಂಭ್ರಮದ ಸೆ.8 ರಂದು ಮೊಂತಿ (ತೆನೆ) ಹಬ್ಬವನ್ನು ಆಚಾರಿಸಲಾಯಿತು.


ಮೊಂತಿ ಹಬ್ಬದ ಹಿನ್ನೆಲೆಯಲ್ಲಿ ಕ್ರೈಸ್ತರು ತಮ್ಮ ವ್ಯಾಪ್ತಿಯ ಚರ್ಚ್ ಗಳಲ್ಲಿ ದಿವ್ಯ ಬಲಿ ಪೂಜೆಯನ್ನು ಪಾಲ್ಗೊಂಡು ತಮ್ಮ ಮನೆಗಳಲ್ಲಿ ಹೊಸ ಅಕ್ಕಿ ಕುಟುಂಬ ಸಮೇತರಾಗಿ ಊಟವನ್ನು ಸವಿದರು. 9 ದಿನಗಳ ನೊವೆನಾ ಆಚರಣೆಯಲ್ಲಿ ಪ್ರಾರ್ಥನೆ ಧ್ಯಾನ ಭಕ್ತಿಗೀತೆಗಳು ಹಾಗೂ ವಿಶೇಷ ಉದ್ದೇಶಕ್ಕಾಗಿ ಪ್ರಾರ್ಥನೆಯ ಸಲ್ಲಿಸಲಾಯಿತು. ಮೊಂತಿ ಹಬ್ಬದ ಕನ್ಯಾ ಮರಿಯಮ್ಮನಿಗೆ ಪ್ರಾರ್ಥನೆ, ಪ್ರಧಾನ ದಿವ್ಯ ಬಲಿ ಪೂಜೆಯನ್ನು ಫಾ.ಬರ್ನಾಡ್ ರೋಡ್ರಿಗಸ್ ತೆನೆ ಆಶೀರ್ವದಿಸಿ ಸಂದೇಶ ನೀಡಿದರು. ಶಿವಮೊಗ್ಗ ಧರ್ಮ ಪ್ರಾಂತ್ಯದಲ್ಲಿ ಸೇವೆ ಸಲ್ಲಿಸುವ ಫಾ. ಫೆಡ್ರಿಕ್ ಕೋರೆಯ ಸಹಕರಿಸಿದರು.

ವಾಹನಗಳ ಆಶೀರ್ವಚನ ಹಬ್ಬದ ಪ್ರಯುಕ್ತ ಕುಟುಂಬಗಳಿಗೆ ತೆನೆ ವಿತರಣೆ ಹಾಗೂ ಪುಷ್ಪಾರ್ಪಣೆ ಸಲ್ಲಿಸಿದ್ದ ಪುಟಾಣಿ ಮಕ್ಕಳಿಗೆ ಹಾಗೂ ಎಲ್ಲರಿಗೂ ಕಬ್ಬು ಹಾಗೂ ಸಿಹಿ ತಿಂಡಿ. ಸ್ತ್ರೀ ಸಂಘ ದವರು ವಿತರಿಸಲಾಯಿತು.
ಆರ್ಥಿಕ ಧನ ಸಹಾಯ ಮಾಡಿದ ದಾನಿಗಳಿಗೆ ಮೇಣದಬತ್ತಿ ವಿತರಿಸಿ ಗೌರವಿಸಲಾಯಿತು. ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷರು ಹಾಗೂ ಕಾರ್ಯದರ್ಶಿ ಆರ್ಥಿಕ ಸಮಿತಿ ಸದಸ್ಯರು ಗುರಿಕಾರರು , ಚರ್ಚ್ ಪಾಲನಾ ಮಂಡಳಿ ಸದಸ್ಯರು, ಮುಖಂಡರು ಸಹಕರಿಸಿದರು.

Related posts

ಬಳಂಜ ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಆ.1: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5000 ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಭೂಮಿ ಬಾನೊದ ಸೊರೊ ತುಳು ಜನಪದ ವಿಡಿಯೋ ಹಾಡು ಹಾಗೂ “ವಿಸ್ಮೃತಿ – ಐತಿಹಾಸಿಕ ಸ್ಮಾರಕಗಳ ಮನನ ಕನ್ನಡ ಅಲ್ಬಂ ಹಾಡು ಲೋಕಾರ್ಪಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ-ಕಣಿಯೂರು ವಲಯ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಚಾರ್ಮಾಡಿ ಗ್ರಾ.ಪಂ. ಎದುರು ನಿರ್ಮಿತ ಗುಡಿಸಲು ತೆರವುಗೊಳಿಸುವಂತೆ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಹಾಗೂ ಕಾರ್ಯನಿರ್ವಹಣಾ ಅಧಿಕಾರಿಗೆ ಮನವಿ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಉತ್ಸವ ಸಮಿತಿ ರಚನೆ

Suddi Udaya
error: Content is protected !!