25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೂಡುಬಿದಿರೆ: ಕೋಟೆಬಾಗಿಲು ವೀರಮಾರುತಿ ದೇವಸ್ಥಾನದಲ್ಲಿ ಹೂವಿನ ಪೂಜೆ

ಮೂಡುಬಿದಿರೆ: ಕೋಟೆಬಾಗಿಲು ಶ್ರೀ ವೀರಮಾರುತಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ವಿಶೇಷ ಹೂವಿನ ಪೂಜೆ ಎಡಪದವು ವೆಂಕಟೇಶ ತಂತ್ರಿಗಳ ನೇತೃತ್ವದಲ್ಲಿ ಸೆ.6ರಂದು ನಡೆಯಿತು.

ಬೆಳಗ್ಗೆ ಪುಣ್ಯಾಹ ವಾಚನ, ಗಣಪತಿ ಹೋಮ, ಪವಮಾನ ಹೋಮ ನಡೆಯಿತು. ಬಳಿಕ ದೇವರಿಗೆ ಪಂಚಾಮೃತ ಅಭಿಷೇಕ, ಅಲಂಕಾರ ಪೂಜೆ ಜರುಗಿತು. ದೇವಸ್ಥಾನದ ಪ್ರಧಾನ ಅರ್ಚಕ ಶಿವಪ್ರಸಾದ್ ಭಟ್ ನೇತೃತ್ವದಲ್ಲಿ ಮಧ್ಯಾಹ್ನ ವೀರಮಾರುತಿ ದೇವರಿಗೆ ವಿಶೇಷ ಹೂವಿನ ಪೂಜೆ, ಮಹಾಪೂಜೆ ನಡೆಯಿತು.

ಸಂಜೆ ಮಹಾರಂಗಪೂಜೆ ಬಳಿಕ ದೀಪಾರಾಧನೆ ಜರುಗಿತು. ಕಾರ್ಕಳ ಹಾಗೂ ಮೂಡುಬಿದಿರೆ ವಲಯ ಮಹಿಳಾ ಸಂಘದ ಸದಸ್ಯೆಯರು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ದೇವಸ್ಥಾನದ ಆಡಳಿತ ಮೊಕೇಸರ ಶ್ಯಾಮ ಹೆಗ್ಡೆ, ಕಾರ್ಯದರ್ಶಿ ಅನಿಲ್ ಹೆಗ್ಡೆ ಹಾಗೂ ಮೊತ್ತೇಸರರು, ಜಿಲ್ಲಾ ಹೆಗ್ಗಡೆ ಸಂಘದ ಅಧ್ಯಕ್ಷ ಹಟ್ಟಾಜೆಗುತ್ತು ಪ್ರಭಾಕರ ಹೆಗ್ಡೆ, ಕಾರ್ಯದರ್ಶಿ ಶುಭರಾಜ್ ಹೆಗ್ಡೆ ಹಾಗೂ ಸದಸ್ಯರು, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ಹೆಗ್ಡೆ, ಕಾರ್ಯದರ್ಶಿ ಲತಾ ಯು.ಹೆಗ್ಡೆ, ಮೂಡುಬಿದಿರೆ ವಲಯ ಮಹಿಳಾ ಘಟಕ ಅಧ್ಯಕ್ಷೆ ಉಷಾ ಕೆ.ಹೆಗ್ಡೆ, ಹೆಗ್ಗಡೆ ಸಂಘ ಮೂಡುಬಿದಿರೆ ವಲಯದ ಅಧ್ಯಕ್ಷ ಸದಾಶಿವ ಹೆಗ್ಡೆ, ಕಾರ್ಯದರ್ಶಿ ಜಯರಾಮ ಹೆಗ್ಡೆ, ವಿವಿಧ ವಲಯಗಳ ಅಧ್ಯಕ್ಷರು, ದೇವಸ್ಥಾನದ ಮಾಜಿ ಆಡಳಿತ ಮೊಕೇಸರ ಉದಯ ಕುಮಾರ್ ಹೆಗ್ಡೆ, ಸಂಘದ ಮಾಜಿ ಅಧ್ಯಕ್ಷ ನವೀನ್ ಹೆಗ್ಡೆ ಮತ್ತಿತರರಿದ್ದರು.

Related posts

ಡಿ.30 ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರಕ್ಕೆ ಯುಗಲಮುನಿವರ್ಯರಾದ ಪರಮಪೂಜ್ಯ108 ಶ್ರೀ ಅಮೋಘಕೀರ್ತಿ ಮುನಿ ಮಹಾರಾಜರು ಹಾಗೂ ಪರಮಪೂಜ್ಯ 108 ಶ್ರೀ ಅಮರಕೀರ್ತಿ ಮುನಿ ಮಹಾರಾಜ ಪುರಪ್ರವೇಶ

Suddi Udaya

ನಿರಂಜನ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆ: ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ

Suddi Udaya

ಉಜರೆ: ರತ್ನಮ್ಮ ನಾಯಕ್ ನಿಧನ

Suddi Udaya

ಮರೋಡಿ: ಕೂಕ್ರಬೆಟ್ಟು ಶಾಲೆಗೆ “ಸರಕಾರಿ ಶಾಲೆ ಉಳಿಸಿ ಬೆಳೆಸಿ” ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್ ಭೇಟಿ

Suddi Udaya

ಫೆ.15 (ನಾಳೆ) ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಲ್ಲಿ ರೂ.26 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ “ಅಕ್ಷಯ ಪಾಕಶಾಲೆ” ಲೋಕಾರ್ಪಣೆ

Suddi Udaya
error: Content is protected !!