24 C
ಪುತ್ತೂರು, ಬೆಳ್ತಂಗಡಿ
June 21, 2026
ತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಸಂತ ಅಂತೋನಿ ಚರ್ಚ್‌ನಲ್ಲಿ ತೆನೆ ಹಬ್ಬ (ಮೊಂತಿ ಹಬ್ಬ)

ಉಜಿರೆ: ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಕ್ರೈಸ್ತ ಬಾಂಧವರು ಮೇರಿ ಮಾತೆಯ ಜನ್ಮ ದಿನವನ್ನು ಸೆ. 8ರಂದು ಮೊಂತಿ(ತೆನೆ ಹಬ್ಬ) ಹಬ್ಬವಾಗಿ ಆಚರಿಸಿದರು.

ಮೊಂತಿ ಹಬ್ಬದ ಹಿನ್ನೆಲೆಯಲ್ಲಿ ಕ್ರೈಸ್ತರು ತಮ್ಮ ವ್ಯಾಪ್ತಿಯ ಚರ್ಚ್‌ಗಳಲ್ಲಿ ಬಲಿಪೂಜೆ ಯಲ್ಲಿ ಪಾಲ್ಗೊಂಡು ತಮ್ಮ ಮನೆಗಳಲ್ಲಿ ಹೊಸ ಅಕ್ಕಿ ಕುಟುಂಬ ಸಮೇತರಾಗಿ ಊಟವನ್ನು ಸವಿದರು.
ಎಂಟು ದಿನಗಳ ನೊವೆನಾ ಆಚರಣೆ ಯಲ್ಲಿ ಪ್ರಾರ್ಥನೆ, ಭಕ್ತಿ ಗೀತೆಗಳು, ಧ್ಯಾನ ಹಾಗೂ ವಿಶೇಷ ಉದ್ದೇಶಗಳಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಮೊಂತಿ ಹಬ್ಬದಂದು ಕನ್ಯಾ ಮರಿಯಮ್ಮನಿಗೆ ಪ್ರಾರ್ಥನೆ ,ಪ್ರಧಾನ ದಿವ್ಯ ಬಲಿಪೂಜೆಯನ್ನು ದಯಾಳ್ ಭಾಗ್ ಆಶ್ರಮದ ಧರ್ಮ ಗುರು ವಂ. ಫಾ. ಲ್ಯಾನ್ಸಿ ರೆಬೆಲ್ಲೊ ಅರ್ಪಿಸಿ ಸಂದೇಶ ನೀಡಿದರು. ಅಹಮದಾಬಾದ್ ಧರ್ಮ ಪ್ರಾಂತ್ಯದದಲ್ಲಿ ಸೇವೆ ಸಲ್ಲಿಸುವ ಉಜಿರೆ ಸುರ್ಯ ಮನೆಯ ವಂ. ಫಾ. ರೋಕ್ಕಿ ಪಿಂಟೊ, ಕಾರವಾರ ಧರ್ಮ ಪ್ರಾಂತ್ಯದಲ್ಲಿ ಸೇವೆ ಸಲ್ಲಿಸುವ ಉಜಿರೆ ಹಲಕ್ಕೆ ಮನೆಯ ವಂ. ಫಾ. ವಲೇರಿಯನ್ ಸಿಕ್ವೆರಾ, ಚರ್ಚ್ ಪ್ರಧಾನ ಧರ್ಮ ಗುರು ವಂ. ಫಾ. ಅಬೆಲ್ ಲೋಬೊ, ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ. ಫಾ. ವಿಜಯ್ ಲೋಬೊ ಸಹಕರಿಸಿದರು.

ಅನುಗ್ರಹ ಸಭಾಂಗಣಕ್ಕೆ ನೂತನ ವಾಗಿ ನಿರ್ಮಿಸಿದ ಅಡುಗೆ ಕೋಣೆಯಾ ವಿಸ್ತರಣೆ ಯ ಆಶೀರ್ವಾಚನ, ವಾಹನ ಗಳ ಆಶೀರ್ವಾಚನ, ಎಸ್ ಎಸ್ ಎಲ್ ಸಿ ಯಲ್ಲಿ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಟೀನಾ ಮೆಮೋರಿಯಲ್ ಪ್ರಶಸ್ತಿ ಪುರಸ್ಕಾರ ಪಡೆದ ರಾಜ್ಯಕ್ಕೆ ದ್ವಿತೀಯ ಸ್ಥಾನ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಶಾರನ್ ಡಿಸೋಜ ಇವರನ್ನು ಸನ್ಮಾನಿಸಲಾಯಿತು. ಬಳಿಕ ಹಬ್ಬದ ಪ್ರಯುಕ್ತ ಕುಟುಂಬಗಳಿಗೆ ತೆನೆ ವಿತರಣೆ, ಪುಷ್ಪಾರ್ಪಣೆ ಸಲ್ಲಿಸಿದ ಪುಟಾಣಿಗಳಿಗೆ ಕಬ್ಬು ವಿತರಿಸಲಾಹಿತು. ಆರ್ಥಿಕ ಧನಸಹಾಯ ಮಾಡಿದ ದಾನಿಗಳಿಗೆ ಮೇಣದ ಬತ್ತಿ ವಿತರಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಚರ್ಚ್ ಪಾಲನ ಮಂಡಳಿ ಉಪಾಧ್ಯಕ್ಷ ಅಂಟೋನಿ ಫೆರ್ನಾಂಡಿಸ್, ಕಾರ್ಯದರ್ಶಿ, ಆರ್ಥಿಕ ಸಮಿತಿ ಸದಸ್ಯರು, ಗುರಿಕಾರರು, ಚರ್ಚ್ ಪಾಲನ ಮಂಡಳಿ ಸದಸ್ಯರು, ಮುಖಂಡರು ಸಹಕರಿಸಿದರು.

Related posts

ಸುಲ್ಕೇರಿ ಶ್ರೀರಾಮ ಶಿಶು ಮಂದಿರ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ

Suddi Udaya

ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಅಂತರಿಕ ಕಚ್ಚಾಟ ಬಹಿರಂಗ: ಬೂತುಗಳಲ್ಲಿ ಹಣ ಸಮರ್ಪಕವಾಗಿ ನಿರ್ವಹಣೆಯಾಗಿಲ್ಲ ಎಂದು ಹೇಳಿದ ಕಾರ್ಯಕರ್ತನನ್ನು ತಡೆದ ಬಂಗೇರ: ಬಂಗೇರ ಮಾತನ್ನು ವಿರೋಧಿಸಿ, ಸಭೆಯಿಂದ ಹೊರ ನಡೆದ ಪತ್ರಕರ್ತರು

Suddi Udaya

ಕುಪ್ಪೆಟ್ಟಿ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಗೆ ಸೌಂಡ್ ಸಿಸ್ಟಮ್ ಕೊಡುಗೆ

Suddi Udaya

ಡಿ.ಕೆ.ಆರ್‌.ಡಿ.ಎಸ್ ಮಹಿಳಾ ಸ್ವಸಹಾಯ ಸಂಘಗಳ ರಜತ ಮಹೋತ್ಸವ ಹಾಗೂ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ

Suddi Udaya

ಭಜನಾ ಪರಿಷತ್ತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೊಯ್ಯೂರು ಪಿ ಚಂದ್ರಶೇಖರ ಸಾಲ್ಯಾನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!