27 C
ಪುತ್ತೂರು, ಬೆಳ್ತಂಗಡಿ
June 21, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಸ್ಐಟಿ ವಿಚಾರಣೆಗೆ ಜಯಂತ್ ಟಿ., ಗಿರೀಶ್ ಮಟ್ಟಣ್ಣವರ್, ಯ್ಯೂಟ್ಯೂಬರ್ ಗಳಾದ ಮನಾಫ್, ಅಭಿಷೇಕ್ ಹಾಜರು

ಬೆಳ್ತಂಗಡಿ: ಯ್ಯೂಟ್ಯೂಬರ್ ಗಳಾದ ಕೇರಳದ ಮನಾಫ್, ಅಭಿಷೇಕ್ ಎಸ್ಐಟಿ ವಿಚಾರಣೆಗೆ ಸೆ.9 ರಂದು ಹಾಜರಾಗಿದ್ದಾರೆ.

ಧರ್ಮಸ್ಥಳ ಪ್ರಕರಣ ಸಂಬಂಧಿಸಿದಂತೆ ಆರನೇ ದಿನದ ವಿಚಾರಣೆಗೆ ಎಸ್ಐಟಿ ಕಚೇರಿಗೆ ಎಲ್ಲರನ್ನೂ ವಿಚಾರಣೆಗೆ ಕರೆಸಿದ್ದರಿಂದ ನಿನ್ನೆ ಹಿಂಬದಿ ದಾರಿ ಹಿಡಿದಿದ್ದ‌ ಜಯಂತ್ ಇಂದು ಮುಂಭಾಗದ ಹಾದಿಯಿಂದಲೇ ಬಂದಿದ್ದಾರೆ. ಆದರೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಇವರೊಂದಿಗೆ ಸಿಂಧೂದೇವಿ ಎಸ್ಐಟಿ ಕಚೇರಿ ವರೆಗೆ ಬಂದು ಬಳಿಕ ಹಿಂದಿರುಗಿದ್ದಾರೆ.ಗಿರೀಶ್ ಮಟ್ಟಣ್ಣವರ್ ಕೂಡ‌ ವಿಚಾರಣೆಗೆ ಹಾಜರಾಗಿದ್ದಾರೆ.

ಇನ್ನೂ ಕೇರಳದ ಯ್ಯೂಟ್ಯೂಬ್ ರ್ ಮನಾಫ್ ಹಾಗೂ ಯ್ಯೂಟ್ಯೂಬರ್ ಅಭಿಷೇಕ್ ಕೂಡ ವಿಚಾರಣೆ ಹಾಜರಾಗಿದ್ದಾರೆ. ಮನಾಫ್ ತಮ್ಮ ರಕ್ಷಣೆಗಾಗಿ ಕೇರಳದಿಂದ ಜನ ಕರೆದುಕೊಂಡು ಬಂದಿರುವುದಾಗಿ ಕೆಲ ಮಾಧ್ಯಮಗಳು ಪ್ರಸಾರ ಮಾಡಿವೆ ಎಂಬ ವಿಚಾರಕ್ಕೆ ಮಾಧ್ಯಮದ ಮುಂದೆ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ತಾನು ಯಾರನ್ನೂ ಕರೆತಂದಿಲ್ಲ, ನನಗೆ ಯಾವ ಭಯವಿಲ್ಲ, ನಾನು ಸತ್ಯದ ಪರವಾಗಿ ಹೋರಾಡುತ್ತಿದ್ದೇನೆ. ಎಸ್ಐಟಿ ಎಲ್ಲ ವಿಚಾರಣೆಗೂ ನಾನು ಸ್ಪಂದಿಸುವುದಾಗಿ ತಿಳಿಸಿದ್ದಾರೆ.

Related posts

ಹೊಸಂಗಡಿ: ಗಣೇಶ್ ಪೂಜಾರಿ ಕಾರಾಜೆ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಶುಭಾರಂಭ

Suddi Udaya

ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ: ಕಾಪಿನಡ್ಕ ಸ ಕಿ ಪ್ರಾ ಶಾಲೆಗೆ ಕಂಪ್ಯೂಟರ್ ಉಪಕರಣಗಳ ಹಸ್ತಾಂತರ

Suddi Udaya

ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕೊಯ್ಯೂರು : ಮಲೆಕುಡಿಯರ ಸಂಘ ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನೂತನ ಭಜನಾ ಮಂದಿರ ನಿರ್ಮಾಣದ ಸಮಿತಿ ರಚನೆ

Suddi Udaya

ಚಾರ್ಮಾಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಉದ್ಯೋಗ ಖಾತರಿ ವಿಶೇಷ ಗ್ರಾಮ ಸಭೆ, ಜಾಥಾ

Suddi Udaya

ಕಿಶೋರ್ ಕುಮಾರ್ ಬೊಟ್ಯಾಡಿ ನಿರ್ಮಾಣದಲ್ಲಿ ಮೂಡಿ ಬಂದಿರುವ “ELLA” ಚಲನಚಿತ್ರ ಬಿಡುಗಡೆ

Suddi Udaya
error: Content is protected !!