25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾಲ್ – ಬ್ಯಾಡ್ಮಿಂಟನ್ ಪಂದ್ಯಾಟ: ಕಾಯರ್ತಡ್ಕ ಸ.ಪ್ರೌ. ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾಯರ್ತಡ್ಕ: ಸರಕಾರಿ ಪ್ರೌಢಶಾಲೆ ಕಾಯರ್ತಡ್ಕದಲ್ಲಿ ನಡೆದ ಬೆಳ್ತಂಗಡಿ ತಾಲ್ಲೂಕು ಮಟ್ಟದ 17ರ ವಯೋಮಾನದೊಳಗಿನ ಮಕ್ಕಳ ಬಾಲ್ – ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಬಾಲಕರ ಹಾಗೂ ಬಾಲಕಿಯರ ಎರಡೂ ವಿಭಾಗದಲ್ಲಿ ಸರ್ಕಾರಿ ಪ್ರೌಢಶಾಲೆ ಕಾಯರ್ತಡ್ಕ ಪ್ರಥಮ ಸ್ಥಾನ ಪಡೆದು ಜಿಲ್ಲಾ ಹಂತಕ್ಕೆ ಆಯ್ಕೆಯಾಯಿತು.

ತಾಲ್ಲೂಕು ಮಟ್ಟದ ಬಾಲ್ – ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ತಾಲ್ಲೂಕು ಕ್ರೀಡಾ ಪರಿವೀಕ್ಷಣಾಧಿಕಾರಿ ಶ್ರೀಮತಿ ಸುಜಯ ಇವರು ದೀಪ ಬೆಳಗಿಸಿ ಉದ್ಘಾಟನೆಗೈದು ಕ್ರೀಡಾಳುಗಳಿಗೆ ಶುಭ ಹಾರೈಸಿದರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ.ಸಿ.ಉಪಾಧ್ಯಕ್ಷರಾದ ಶ್ರೀ ಪದ್ಮನಾಭ ಗೌಡ ಇವರು ಕ್ರೀಡಾಸ್ಫೂರ್ತಿಯಿಂದ ಆಟವಾಡುವಂತೆ ವಿದ್ಯಾರ್ಥಿಗಳಿಗೆ ಸ್ಫೂರ್ತಿಯ ಮಾತುಗಳನ್ನು ಹೇಳಿದರು.

ಉದ್ಘಾಟನಾ ಕಾರ್ಯಕ್ರಮದ ನಂತರ ನಡೆದ ಸ್ಪರ್ಧೆಯಲ್ಲಿ ತಾಲ್ಲೂಕಿನ ವಿವಿಧ ಶಾಲೆಗಳ ತಂಡಗಳು ಪರಸ್ಪರ ಸೆನಸಾಡಿ ಬಾಲಕರ ಹಾಗೂ ಬಾಲಕಿಯರ ಎರಡೂ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ಮಚ್ಚಿನ ಹಾಗೂ ಸರಕಾರಿ ಪ್ರೌಢಶಾಲೆ ಕಾಯರ್ತಡ್ಕ ಅಂತಿಮ ಸುತ್ತನ್ನು ಪ್ರವೇಶಿಸಿತ್ತು. ಅಂತಿಮ ಪಂದ್ಯದಲ್ಲಿ ಎರಡೂ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ಕಾಯರ್ತಡ್ಕ ಜಯಗಳಿಸಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿತ್ತು.

ವಿಜೇತ ತಂಡಗಳಿಗೆ ಹಾಗೂ ರನ್ನರ್ಸ್ ಆಪ್ ತಂಡಗಳಿಗೆ ಟ್ರೋಫಿ, ಪದಕ ಹಾಗೂ ಪ್ರಮಾಣಪತ್ರಗಳನ್ನು ನೀಡಲಾಯಿತು. ಪಂದ್ಯಾಕೂಟದ ಯಶಸ್ವಿಗೆ ಶಿಕ್ಷಕರು, ಶಾಲಾ ಆಡಳಿತ ಸಮಿತಿ ಸದಸ್ಯರು, ದಾನಿಗಳು ಸಹಕಾರ ನೀಡಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ತರಬೇತು ನೀಡಿದ ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಪ್ರಕಾಶ್ ಎ ಜೆ ಇವರನ್ನು ಪ್ರಶಂಶಿಲಾಯಿತು.

Related posts

ಬೆಳ್ತಂಗಡಿ :ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಮುಂಜಿ ಕಾರ್ಯಕ್ರಮ

Suddi Udaya

ಮೈರೋಳ್ತಡ್ಕ ಪುತ್ತಿಲ ನಿವಾಸಿ ಕಮಲ ನಿಧನ

Suddi Udaya

ಪೆರಾಲ್ದರಕಟ್ಟೆ ಮಸ್ಜಿದ್‌ನಲ್ಲಿ ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಕಕ್ಕಿಂಜೆ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಬೃಹತ್ ಉಚಿತ ವೈದ್ಯಕೀಯ ಚಿಕಿತ್ಸಾ ಶಿಬಿರ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರಕ್ಕೆ ಭಟ್ಟಾರಕರ ಸ್ವಾಮೀಜಿ ಭೇಟಿ

Suddi Udaya

ಬೆಳಾಲಿನಲ್ಲಿ ಎಸ್ ಡಿ ಎಂ ಎನ್ ಎಸ್ ಎಸ್ ಶಿಬಿರದ ಸಮಾರೋಪ

Suddi Udaya
error: Content is protected !!