23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೇಕ್ರೆಡ್ ಹಾರ್ಟ್ ಚರ್ಚ್‌ನಲ್ಲಿ ತೆನೆ ಹಬ್ಬ (ಮೊಂತಿ ಹಬ್ಬ)

ಮಡಂತ್ಯಾರು: ಇಲ್ಲಿಯ ಸೇಕ್ರೆಡ್ ಹಾರ್ಟ್ ಚರ್ಚ್ ನಲ್ಲಿ ಕ್ರೈಸ್ತ ಬಾಂಧವರು ಮೇರಿ ಮಾತೆಯ ಜನ್ಮ ದಿನವನ್ನು ಸೆ. 8ರಂದು ಮೊಂತಿ(ತೆನೆ ಹಬ್ಬ) ಹಬ್ಬವಾಗಿ ಆಚರಿಸಿದರು.
ಚರ್ಚ್‌ಗಳಲ್ಲಿ ಬಲಿಪೂಜೆ ಯಲ್ಲಿ ಪಾಲ್ಗೊಂಡು ತಮ್ಮ ಮನೆಗಳಲ್ಲಿ ಹೊಸ ಅಕ್ಕಿ ಕುಟುಂಬ ಸಮೇತರಾಗಿ ಊಟವನ್ನು ಸವಿದಿದ್ದಾರೆ.


ಮೊಂತಿ ಹಬ್ಬದಂದು ಕನ್ಯಾ ಮರಿಯಮ್ಮನಿಗೆ ಪ್ರಾರ್ಥನೆ, ಪ್ರಧಾನ ದಿವ್ಯ ಬಲಿಪೂಜೆ ನಡೆಯಿತು. ಬಲಿ ಪೂಜೆ ಧರ್ಮಗುರು ವಂ. ಫಾ. ಮೇಲ್ವಿನ್ ನೋರೋನ್ಹ ಅರ್ಪಿಸಿದರು. ಮಡಂತ್ಯಾರು ಚರ್ಚ್ ನ ಸಹಾಯಕ ಧರ್ಮಗುರು ವಂ. ಫಾ. ಲೇರಿನ ಪಿಂಟೊ ಸಂದೇಶ ನೀಡಿದರು. ಮಡಂತ್ಯಾರು ಚರ್ಚ್ ನ ಪ್ರಧಾನ ಧರ್ಮಗುರು ವಂ. ಫಾ. ಸ್ಟ್ಯಾಂನಿ ಗೋವಿಸ್, ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋ ಪಾಧ್ಯಯ ವಂ. ಫಾ. ದೀಪಕ್ ಡೆಸಾ, ವಂ. ಅನಿಲ್ ಪಾಯ್ಸ್ ಹಾಗೂ ಇನ್ನಿತರ ಧರ್ಮ ಗುರುಗಳು ಉಪಸ್ಥಿತರಿದ್ದರು.

ಬಳಿಕ ಹಬ್ಬದ ಪ್ರಯುಕ್ತ ಕುಟುಂಬಗಳಿಗೆ ತೆನೆ ವಿತರಣೆ, ಪುಷ್ಪಾರ್ಪಣೆ ಸಲ್ಲಿಸಿದ ಪುಟಾಣಿಗಳಿಗೆ ಕಬ್ಬು ವಿತರಿಸಲಾಯಿತು. .ಈ ಸಂದರ್ಭದಲ್ಲಿ ಚರ್ಚ್ ಪಾಲನ ಮಂಡಳಿ ಉಪಾಧ್ಯಕ್ಷ, ಕಾರ್ಯದರ್ಶಿ, ಆರ್ಥಿಕ ಸಮಿತಿ ಸದಸ್ಯರು, ಗುರಿಕಾರರು, ಚರ್ಚ್ ಪಾಲನ ಮಂಡಳಿ ಸದಸ್ಯರು, ಮುಖಂಡರು ಸಹಕರಿಸಿದರು.

Related posts

ಗುರುವಾಯನಕೆರೆಯ ಸುಬೇದಾರ್ ಏಕನಾಥ ಶೆಟ್ಟಿಯವರಿಗೆ ಕೆದಂಬಾಡಿ ರಾಮಯ್ಯ ಗೌಡ ರಾಜ್ಯ ಶೌರ್ಯ ಪ್ರಶಸ್ತಿ ಪ್ರದಾನ

Suddi Udaya

ಬಂದಾರುನಲ್ಲಿ ಗುಡ್ಡ ಕುಸಿತ : ಮನೆಗೆ ಹಾನಿ

Suddi Udaya

ಅರಸಿನಮಕ್ಕಿ: ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಸಾವು

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕ ನೆರವು

Suddi Udaya

ವನ್ಯಜೀವಿ ವಲಯ ಅಳದಂಗಡಿ, ಪ್ರಾದೇಶಿಕ ವಲಯ ವೇಣೂರು ಹಾಗೂ ಗ್ರಾಮಸ್ಥರ ಸಹಕಾರದಿಂದ ಸ್ವಚ್ಚತಾ ಕಾರ್ಯ

Suddi Udaya

ಬೆಳ್ತಂಗಡಿ ಹಾಗೂ ಗುರುವಾಯನಕೆರೆ ತಾಲೂಕು ಮಟ್ಟದ ಭಜನಾ ಪರಿಷತ್ ಸಭೆ

Suddi Udaya
error: Content is protected !!