September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೇಕ್ರೆಡ್ ಹಾರ್ಟ್ ಚರ್ಚ್‌ನಲ್ಲಿ ತೆನೆ ಹಬ್ಬ (ಮೊಂತಿ ಹಬ್ಬ)

ಮಡಂತ್ಯಾರು: ಇಲ್ಲಿಯ ಸೇಕ್ರೆಡ್ ಹಾರ್ಟ್ ಚರ್ಚ್ ನಲ್ಲಿ ಕ್ರೈಸ್ತ ಬಾಂಧವರು ಮೇರಿ ಮಾತೆಯ ಜನ್ಮ ದಿನವನ್ನು ಸೆ. 8ರಂದು ಮೊಂತಿ(ತೆನೆ ಹಬ್ಬ) ಹಬ್ಬವಾಗಿ ಆಚರಿಸಿದರು.
ಚರ್ಚ್‌ಗಳಲ್ಲಿ ಬಲಿಪೂಜೆ ಯಲ್ಲಿ ಪಾಲ್ಗೊಂಡು ತಮ್ಮ ಮನೆಗಳಲ್ಲಿ ಹೊಸ ಅಕ್ಕಿ ಕುಟುಂಬ ಸಮೇತರಾಗಿ ಊಟವನ್ನು ಸವಿದಿದ್ದಾರೆ.


ಮೊಂತಿ ಹಬ್ಬದಂದು ಕನ್ಯಾ ಮರಿಯಮ್ಮನಿಗೆ ಪ್ರಾರ್ಥನೆ, ಪ್ರಧಾನ ದಿವ್ಯ ಬಲಿಪೂಜೆ ನಡೆಯಿತು. ಬಲಿ ಪೂಜೆ ಧರ್ಮಗುರು ವಂ. ಫಾ. ಮೇಲ್ವಿನ್ ನೋರೋನ್ಹ ಅರ್ಪಿಸಿದರು. ಮಡಂತ್ಯಾರು ಚರ್ಚ್ ನ ಸಹಾಯಕ ಧರ್ಮಗುರು ವಂ. ಫಾ. ಲೇರಿನ ಪಿಂಟೊ ಸಂದೇಶ ನೀಡಿದರು. ಮಡಂತ್ಯಾರು ಚರ್ಚ್ ನ ಪ್ರಧಾನ ಧರ್ಮಗುರು ವಂ. ಫಾ. ಸ್ಟ್ಯಾಂನಿ ಗೋವಿಸ್, ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋ ಪಾಧ್ಯಯ ವಂ. ಫಾ. ದೀಪಕ್ ಡೆಸಾ, ವಂ. ಅನಿಲ್ ಪಾಯ್ಸ್ ಹಾಗೂ ಇನ್ನಿತರ ಧರ್ಮ ಗುರುಗಳು ಉಪಸ್ಥಿತರಿದ್ದರು.

ಬಳಿಕ ಹಬ್ಬದ ಪ್ರಯುಕ್ತ ಕುಟುಂಬಗಳಿಗೆ ತೆನೆ ವಿತರಣೆ, ಪುಷ್ಪಾರ್ಪಣೆ ಸಲ್ಲಿಸಿದ ಪುಟಾಣಿಗಳಿಗೆ ಕಬ್ಬು ವಿತರಿಸಲಾಯಿತು. .ಈ ಸಂದರ್ಭದಲ್ಲಿ ಚರ್ಚ್ ಪಾಲನ ಮಂಡಳಿ ಉಪಾಧ್ಯಕ್ಷ, ಕಾರ್ಯದರ್ಶಿ, ಆರ್ಥಿಕ ಸಮಿತಿ ಸದಸ್ಯರು, ಗುರಿಕಾರರು, ಚರ್ಚ್ ಪಾಲನ ಮಂಡಳಿ ಸದಸ್ಯರು, ಮುಖಂಡರು ಸಹಕರಿಸಿದರು.

Related posts

ಗೇರುಕಟ್ಟೆಯಲ್ಲಿ ಅಪೂರ್ವವಾಗಿ ನಡೆದ ಮಾತೃ ವಂದನಾ ಕಾರ್ಯಕ್ರಮ

Suddi Udaya

ಬೆಳಗಾವಿ ಅಧಿವೇಶನ: ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ಏಕೆ?: ಶಾಸಕ ಹರೀಶ್ ಪೂಂಜ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ: ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ,ಶೈಕ್ಷಣಿಕ ಕ್ಷೇತ್ರದ ಯುವ ಸಾಧಕ ಸುಮಂತ್ ಕುಮಾರ್‌ ಜೈನ್ ಅವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ರಘುರಾಮ ಶೆಟ್ಟಿ, ಸಾಧನಾ ಕಾರ್ಯದರ್ಶಿಯಾಗಿ ಅಮಿತಾನಂದ ಹೆಗ್ಡೆ ಆಯ್ಕೆ

Suddi Udaya

ಡಿ. 29 ರಂದು ನಡೆಯಲಿರುವ ಬಳ್ಳಮಂಜ ಶೇಷ ನಾಗ ಜೋಡು ಕರೆ ಕಂಬಳದ ಪೂರ್ವ ಸಿದ್ಧತಾ ಸಭೆ

Suddi Udaya

ಮೇ 18: ವಿದ್ಯುತ್ ನಿಲುಗಡೆ

Suddi Udaya
error: Content is protected !!