28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ

ಉಜಿರೆ: ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ (ಎಂಡೋಸಲ್ಫಾನ್ ಸಂತ್ರಸ್ತರಿಗೆ) ಪ್ರಾಥಮಿಕ ಆರೋಗ್ಯ ಕೇಂದ್ರ ಕ್ಯಾಂಪಸ್, ಉಜಿರೆ, ಶ್ರೀ ಗಣೇಶ ಸೇವಾ ಟ್ರಸ್ಟ್ (ರಿ.) ನ ಸೇವಾ ಯೋಜನೆ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ದ ಸಹಯೋಗದೊಂದಿಗೆ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆಯು ಸೆ.9 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಗುರುವಾಯನಕೆರೆ ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ್ ನೆರವೇರಿಸಿದರು.

ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದ ಅಧ್ಯಕ್ಷ ಪ್ರಸಾದ್‌ ಶೆಟ್ಟಿ ಏಣಿಂಜೆ ಭಾಗವಹಿಸಿದ್ದರು. ಶ್ರೀ ಗಣೇಶ ಸೇವಾ ಟ್ರಸ್ಟ್ ನ ಅಧ್ಯಕ್ಷ ಮಹಾಬಲ ಮಾರ್ಲ ಅಧ್ಯಕ್ಷತೆಯನ್ನು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ಆಡಳಿತದಾರ ಡಾ. ವಸಂತ್ ಕುಮಾರ್ ಶೆಟ್ಟಿ, ಎಂಡೋಸಲ್ಫಾನ್ ಕಾರ್ಯಕ್ರಮದ ದ.ಕ. ಜಿಲ್ಲಾ ನೋಡೆಲ್ ಅಧಿಕಾರಿ ಡಾ. ಜಸಿಂತಾ ಡಿ’ಸೋಜ, ಶ್ರೀ ಗಣೇಶ ಸೇವಾ ಟ್ರಸ್ಟ್ ನ ಸಲಹಾ ಸಮಿತಿ ಸದಸ್ಯ ಶ್ಯಾಮ್ ಪ್ರಕಾಶ್, ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ಸಲಹಾ ಸಮಿತಿ ಸದಸ್ಯರಾದ ರೋಶನ್ ಪ್ರೇಮರಾಜ್ ಸಿಕ್ವೆರಾ, ಪ್ರಮೋದ್ ಆ‌ರ್ ನಾಯಕ್ ಉಪಸ್ಥಿತರಿದ್ದರು.

Related posts

ಕಳಿಯ ಗ್ರಾ.ಪಂ. ವ್ಯಾಪಿಯಲ್ಲಿ ಬಿರುಸಿನ ಮತದಾನ: ಗಮನಸೆಳೆದ ಪಿಂಕ್(ಸಖಿ) ಮತಗಟ್ಟೆ : ಮತಗಟ್ಟೆ ಕೇಂದ್ರದಲ್ಲಿ ಮತದಾರರ ವಿವಿಧ ಬೇಡಿಕೆ

Suddi Udaya

ಪರಿಶಿಷ್ಟ ಜಾತಿ-ಪಂಗಡಗಳ ವಿಶೇಷ ಗ್ರಾಮಸಭೆ ಬೆನ್ನಲ್ಲೇ ಸ್ಥಳಕ್ಕೆ ಬಂದ ಅಧಿಕಾರಿಗಳು – ನಡುಗುಡ್ಡೆ ಕಾಲುಸಂಕ ಪ್ರದೇಶ ಹಾಗೂ ರಸ್ತೆ ವಂಚಿತ ಬಜಕ್ರೆಸಾಲು ಪ್ರದೇಶದಲ್ಲಿ ಸಮಸ್ಯೆಗಳ ಪರಿಶೀಲನೆ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 30ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ:

Suddi Udaya

ಡಿ.21-22: ಬದನಾಜೆ ಶಾಲೆಯ ಅಮೃತ ಮಹೋತ್ಸವ ಸಂಭ್ರಮ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

Suddi Udaya

ಡಿ 22: ನವೀಕೃತಗೊಂಡು ಉದ್ಘಾಟನೆಗೆ ಸಿದ್ಧಗೊಂಡಿರುವ ಉಜಿರೆಯ ಸಂತ ಅಂತೋನಿ ಚರ್ಚ್; ಸುಮಾರು ರೂ 1.20 ಕೋಟಿ ವೆಚ್ಚದಲ್ಲಿ ನವೀಕರಣ,ಸಾಂಸ್ಕೃತಿಕ ಕಾರ್ಯಕ್ರಮ, ತುಳು ಹಾಸ್ಯಮಯ ನಾಟಕ ಪ್ರದರ್ಶನ

Suddi Udaya

ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಬರೆದ ‘ತ್ಯಾಗಮಯಿ ಮೊಳಹಳ್ಳಿ’ ಕೃತಿ ಬಿಡುಗಡೆ

Suddi Udaya
error: Content is protected !!