23.4 C
ಪುತ್ತೂರು, ಬೆಳ್ತಂಗಡಿ
August 5, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಸ್ಐಟಿ ವಿಚಾರಣೆಗೆ ಜಯಂತ್ ಟಿ., ಗಿರೀಶ್ ಮಟ್ಟಣ್ಣವರ್, ಯ್ಯೂಟ್ಯೂಬರ್ ಗಳಾದ ಮನಾಫ್, ಅಭಿಷೇಕ್ ಹಾಜರು

ಬೆಳ್ತಂಗಡಿ: ಯ್ಯೂಟ್ಯೂಬರ್ ಗಳಾದ ಕೇರಳದ ಮನಾಫ್, ಅಭಿಷೇಕ್ ಎಸ್ಐಟಿ ವಿಚಾರಣೆಗೆ ಸೆ.9 ರಂದು ಹಾಜರಾಗಿದ್ದಾರೆ.

ಧರ್ಮಸ್ಥಳ ಪ್ರಕರಣ ಸಂಬಂಧಿಸಿದಂತೆ ಆರನೇ ದಿನದ ವಿಚಾರಣೆಗೆ ಎಸ್ಐಟಿ ಕಚೇರಿಗೆ ಎಲ್ಲರನ್ನೂ ವಿಚಾರಣೆಗೆ ಕರೆಸಿದ್ದರಿಂದ ನಿನ್ನೆ ಹಿಂಬದಿ ದಾರಿ ಹಿಡಿದಿದ್ದ‌ ಜಯಂತ್ ಇಂದು ಮುಂಭಾಗದ ಹಾದಿಯಿಂದಲೇ ಬಂದಿದ್ದಾರೆ. ಆದರೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಇವರೊಂದಿಗೆ ಸಿಂಧೂದೇವಿ ಎಸ್ಐಟಿ ಕಚೇರಿ ವರೆಗೆ ಬಂದು ಬಳಿಕ ಹಿಂದಿರುಗಿದ್ದಾರೆ.ಗಿರೀಶ್ ಮಟ್ಟಣ್ಣವರ್ ಕೂಡ‌ ವಿಚಾರಣೆಗೆ ಹಾಜರಾಗಿದ್ದಾರೆ.

ಇನ್ನೂ ಕೇರಳದ ಯ್ಯೂಟ್ಯೂಬ್ ರ್ ಮನಾಫ್ ಹಾಗೂ ಯ್ಯೂಟ್ಯೂಬರ್ ಅಭಿಷೇಕ್ ಕೂಡ ವಿಚಾರಣೆ ಹಾಜರಾಗಿದ್ದಾರೆ. ಮನಾಫ್ ತಮ್ಮ ರಕ್ಷಣೆಗಾಗಿ ಕೇರಳದಿಂದ ಜನ ಕರೆದುಕೊಂಡು ಬಂದಿರುವುದಾಗಿ ಕೆಲ ಮಾಧ್ಯಮಗಳು ಪ್ರಸಾರ ಮಾಡಿವೆ ಎಂಬ ವಿಚಾರಕ್ಕೆ ಮಾಧ್ಯಮದ ಮುಂದೆ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ತಾನು ಯಾರನ್ನೂ ಕರೆತಂದಿಲ್ಲ, ನನಗೆ ಯಾವ ಭಯವಿಲ್ಲ, ನಾನು ಸತ್ಯದ ಪರವಾಗಿ ಹೋರಾಡುತ್ತಿದ್ದೇನೆ. ಎಸ್ಐಟಿ ಎಲ್ಲ ವಿಚಾರಣೆಗೂ ನಾನು ಸ್ಪಂದಿಸುವುದಾಗಿ ತಿಳಿಸಿದ್ದಾರೆ.

Related posts

ಬೆಳಾಲು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕಳೆಂಜ: ಶಿಬರಾಜೆಯ ಬ್ರಹ್ಮಲಿಂಗ ದೇವರಿಗೆ ವೃಶ್ಚಿಕ ಸಂಕ್ರಮಣದ ಪ್ರಯುಕ್ತ ವಿಶೇಷ ಅಭಿಷೇಕ ಪೂಜೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಸೌಜನ್ಯ ಸಾವು ಪ್ರಕರಣ: ಸರಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಲಿ: ಡಾ. ಹೆಗ್ಗಡೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಆಕಾಂಕ್ಷ ಎಲ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya
error: Content is protected !!