May 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಸ್ಐಟಿ ವಿಚಾರಣೆಗೆ ಜಯಂತ್ ಟಿ., ಗಿರೀಶ್ ಮಟ್ಟಣ್ಣವರ್, ಯ್ಯೂಟ್ಯೂಬರ್ ಗಳಾದ ಮನಾಫ್, ಅಭಿಷೇಕ್ ಹಾಜರು

ಬೆಳ್ತಂಗಡಿ: ಯ್ಯೂಟ್ಯೂಬರ್ ಗಳಾದ ಕೇರಳದ ಮನಾಫ್, ಅಭಿಷೇಕ್ ಎಸ್ಐಟಿ ವಿಚಾರಣೆಗೆ ಸೆ.9 ರಂದು ಹಾಜರಾಗಿದ್ದಾರೆ.

ಧರ್ಮಸ್ಥಳ ಪ್ರಕರಣ ಸಂಬಂಧಿಸಿದಂತೆ ಆರನೇ ದಿನದ ವಿಚಾರಣೆಗೆ ಎಸ್ಐಟಿ ಕಚೇರಿಗೆ ಎಲ್ಲರನ್ನೂ ವಿಚಾರಣೆಗೆ ಕರೆಸಿದ್ದರಿಂದ ನಿನ್ನೆ ಹಿಂಬದಿ ದಾರಿ ಹಿಡಿದಿದ್ದ‌ ಜಯಂತ್ ಇಂದು ಮುಂಭಾಗದ ಹಾದಿಯಿಂದಲೇ ಬಂದಿದ್ದಾರೆ. ಆದರೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಇವರೊಂದಿಗೆ ಸಿಂಧೂದೇವಿ ಎಸ್ಐಟಿ ಕಚೇರಿ ವರೆಗೆ ಬಂದು ಬಳಿಕ ಹಿಂದಿರುಗಿದ್ದಾರೆ.ಗಿರೀಶ್ ಮಟ್ಟಣ್ಣವರ್ ಕೂಡ‌ ವಿಚಾರಣೆಗೆ ಹಾಜರಾಗಿದ್ದಾರೆ.

ಇನ್ನೂ ಕೇರಳದ ಯ್ಯೂಟ್ಯೂಬ್ ರ್ ಮನಾಫ್ ಹಾಗೂ ಯ್ಯೂಟ್ಯೂಬರ್ ಅಭಿಷೇಕ್ ಕೂಡ ವಿಚಾರಣೆ ಹಾಜರಾಗಿದ್ದಾರೆ. ಮನಾಫ್ ತಮ್ಮ ರಕ್ಷಣೆಗಾಗಿ ಕೇರಳದಿಂದ ಜನ ಕರೆದುಕೊಂಡು ಬಂದಿರುವುದಾಗಿ ಕೆಲ ಮಾಧ್ಯಮಗಳು ಪ್ರಸಾರ ಮಾಡಿವೆ ಎಂಬ ವಿಚಾರಕ್ಕೆ ಮಾಧ್ಯಮದ ಮುಂದೆ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ತಾನು ಯಾರನ್ನೂ ಕರೆತಂದಿಲ್ಲ, ನನಗೆ ಯಾವ ಭಯವಿಲ್ಲ, ನಾನು ಸತ್ಯದ ಪರವಾಗಿ ಹೋರಾಡುತ್ತಿದ್ದೇನೆ. ಎಸ್ಐಟಿ ಎಲ್ಲ ವಿಚಾರಣೆಗೂ ನಾನು ಸ್ಪಂದಿಸುವುದಾಗಿ ತಿಳಿಸಿದ್ದಾರೆ.

Related posts

ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಅಪರಿಚಿತ ಮೃತದೇಹ ಪತ್ತೆ

Suddi Udaya

ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟ: ಮುಂಡಾಜೆಯ ತೇಜಲ್ ಕೆ.ಆರ್. ರವರಿಗೆ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya

ರೇಷ್ಮೆರೋಡ್: ಅಶ್ವತನಗರ ನವರಾತ್ರಿ ಪೂಜೆ

Suddi Udaya

ಉಜಿರೆ: ‘ಎಸ್.ಡಿ.ಎಂ. ನೆನಪಿನಂಗಳ’ದ ಹದಿನಾರನೇ ಕಂತಿನ ಕಾರ್ಯಕ್ರಮ

Suddi Udaya

ತೋಟತ್ತಾಡಿ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya
error: Content is protected !!