26.5 C
ಪುತ್ತೂರು, ಬೆಳ್ತಂಗಡಿ
September 20, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಸ್ಐಟಿ ವಿಚಾರಣೆಗೆ ಜಯಂತ್ ಟಿ., ಗಿರೀಶ್ ಮಟ್ಟಣ್ಣವರ್, ಯ್ಯೂಟ್ಯೂಬರ್ ಗಳಾದ ಮನಾಫ್, ಅಭಿಷೇಕ್ ಹಾಜರು

ಬೆಳ್ತಂಗಡಿ: ಯ್ಯೂಟ್ಯೂಬರ್ ಗಳಾದ ಕೇರಳದ ಮನಾಫ್, ಅಭಿಷೇಕ್ ಎಸ್ಐಟಿ ವಿಚಾರಣೆಗೆ ಸೆ.9 ರಂದು ಹಾಜರಾಗಿದ್ದಾರೆ.

ಧರ್ಮಸ್ಥಳ ಪ್ರಕರಣ ಸಂಬಂಧಿಸಿದಂತೆ ಆರನೇ ದಿನದ ವಿಚಾರಣೆಗೆ ಎಸ್ಐಟಿ ಕಚೇರಿಗೆ ಎಲ್ಲರನ್ನೂ ವಿಚಾರಣೆಗೆ ಕರೆಸಿದ್ದರಿಂದ ನಿನ್ನೆ ಹಿಂಬದಿ ದಾರಿ ಹಿಡಿದಿದ್ದ‌ ಜಯಂತ್ ಇಂದು ಮುಂಭಾಗದ ಹಾದಿಯಿಂದಲೇ ಬಂದಿದ್ದಾರೆ. ಆದರೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಇವರೊಂದಿಗೆ ಸಿಂಧೂದೇವಿ ಎಸ್ಐಟಿ ಕಚೇರಿ ವರೆಗೆ ಬಂದು ಬಳಿಕ ಹಿಂದಿರುಗಿದ್ದಾರೆ.ಗಿರೀಶ್ ಮಟ್ಟಣ್ಣವರ್ ಕೂಡ‌ ವಿಚಾರಣೆಗೆ ಹಾಜರಾಗಿದ್ದಾರೆ.

ಇನ್ನೂ ಕೇರಳದ ಯ್ಯೂಟ್ಯೂಬ್ ರ್ ಮನಾಫ್ ಹಾಗೂ ಯ್ಯೂಟ್ಯೂಬರ್ ಅಭಿಷೇಕ್ ಕೂಡ ವಿಚಾರಣೆ ಹಾಜರಾಗಿದ್ದಾರೆ. ಮನಾಫ್ ತಮ್ಮ ರಕ್ಷಣೆಗಾಗಿ ಕೇರಳದಿಂದ ಜನ ಕರೆದುಕೊಂಡು ಬಂದಿರುವುದಾಗಿ ಕೆಲ ಮಾಧ್ಯಮಗಳು ಪ್ರಸಾರ ಮಾಡಿವೆ ಎಂಬ ವಿಚಾರಕ್ಕೆ ಮಾಧ್ಯಮದ ಮುಂದೆ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ತಾನು ಯಾರನ್ನೂ ಕರೆತಂದಿಲ್ಲ, ನನಗೆ ಯಾವ ಭಯವಿಲ್ಲ, ನಾನು ಸತ್ಯದ ಪರವಾಗಿ ಹೋರಾಡುತ್ತಿದ್ದೇನೆ. ಎಸ್ಐಟಿ ಎಲ್ಲ ವಿಚಾರಣೆಗೂ ನಾನು ಸ್ಪಂದಿಸುವುದಾಗಿ ತಿಳಿಸಿದ್ದಾರೆ.

Related posts

ವಾಣಿ ಕಾಲೇಜಿನಲ್ಲಿ ಆಟಿ ಒಂಜಿ ನೆಂಪು -ಉಪನ್ಯಾಸ ಕಾರ್ಯಕ್ರಮ

Suddi Udaya

ಚಾರ್ಮಾಡಿ: ರಸ್ತೆ ಬದಿ ಅರಣ್ಯಕ್ಕೆ ಮಗುಚಿ ಬಿದ್ದ ಐಸ್ ಕ್ರೀಂ ಸಾಗಾಟದ ವಾಹನ

Suddi Udaya

ಯುಗಾದಿ ನವ ಪಲ್ಲವಕೆ ನಾಂದಿ – ಸ್ನೇಹ ಕೂಟ ಕಾರ್ಯಕ್ರಮ

Suddi Udaya

ಮುಂಡೂರು ಮಂಗಳಗಿರಿ ದೇವಸ್ಥಾನದ ವತಿಯಿಂದ ಶಾಲಾ ಮಕ್ಕಳಿಗೆ ಕೊಡೆ ವಿತರಣೆ

Suddi Udaya

ಶ್ರೀ ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿ ಕಲ್ಲು ಮಜಲು ಗ್ರಾಮಸ್ಥರಿಂದ ಕಡಿರ ನಾಗನಕಟ್ಟೆ ನಿರ್ಮಿಸಿದ ಶಿಲ್ಪಿಗೆ ದೇಣಿಗೆ ಹಸ್ತಾಂತರ

Suddi Udaya

ಬಕ್ರೀದ್ ಪ್ರಯುಕ್ತ ವೇಣೂರು ಪೊಲೀಸ್ ಸ್ಟೇಷನ್ ನಲ್ಲಿ ಶಾಂತಿ ಸಮಿತಿ ಸಭೆ

Suddi Udaya
error: Content is protected !!