37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ವಿಶಿಷ್ಟ ರೀತಿಯಲ್ಲಿ “ಶಿಕ್ಷಕರ ದಿನ” ಆಚರಣೆ

ಗುರುವಾಯನಕೆರೆ: ಪ್ರತಿಷ್ಠಿತ ವಿದ್ವತ್ ಪಿಯು ಕಾಲೇಜ್ ನಲ್ಲಿ ಇಂದು ” ಗುರುವಂದನಾ ” ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಶಿಕ್ಷಕ ವೃಂದಕ್ಕೆ ಗೌರವ ಸಮರ್ಪಣೆ ಮಾಡಿದರು.

ಎಲ್ಲಾ ಶಿಕ್ಷಕರಿಗೂ ಪುಷ್ಪಗುಚ್ಛ ನೀಡಿ ಬರಮಾಡಿಕೊಂಡ ವಿದ್ಯಾರ್ಥಿಗಳು ನಂತರ ಪ್ರತಿ ಶಿಕ್ಷಕರಿಗೂ ಆರತಿ ಬೆಳಗುವುದರ ಮೂಲಕ ಅವರಿಗೆ ಸಮಾಜದಲ್ಲಿ ಇರುವ ಗೌರವದ ಬಗ್ಗೆ ಮನವರಿಕೆ ಮಾಡಿಕೊಟ್ಟರು. ಬಹಳ ವಿಶೇಷವಾಗಿ ಮೂಡಿ ಬಂದ ಈ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳಾದ ಮಾ. ಕೀರ್ತನ್ ಹಾಗೂ ಕು. ಸೃಷ್ಟಿ ರವರು ತಮ್ಮ ಜೀವನದ ಮೇಲೆ ಪ್ರಭಾವ ಬೀರಿದ ಶಿಕ್ಷಕರ ಗುಣಗಳನ್ನು ಕೊಂಡಾಡಿ, ಮಹಾದಾಸೆ ಹೊತ್ತು ಶಿಕ್ಷಣಾರ್ಥಿಗಳಾಗಿ ಬಂದ ಮಕ್ಕಳಿಗೆ ಶಿಕ್ಷಕರು ತಾಯಿ ಸಮಾನವಾಗಿ ಕಾಣುತ್ತಾರೆ ಎಂದರು.

ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿಯವರು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ ಗುಣಗಾನ ಮಾಡಿ, ಆದರ್ಶ ಶಿಕ್ಷಕ ಹೇಗಿರಬೇಕೆಂಬುದನ್ನು ಒತ್ತಿ ಹೇಳಿದರು. ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಸಂಸ್ಥೆಯ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆಯವರು, ಶಿಕ್ಷಕರು ಮಾಡಬಹುದಾದ ಚಮತ್ಕಾರಗಳ ಬಗ್ಗೆ ಪ್ರಸ್ತಾಪಿಸಿ ಒಬ್ಬ ಶಿಕ್ಷಕ ಹೇಗೆ ತಮ್ಮ ಮಕ್ಕಳು ತಮ್ಮನ್ನು ತಾವೇ ಮುನ್ನಡೆಸಿಕೊಳ್ಳುವ ಬಗೆಯನ್ನು ಅರ್ಥೈಸಿ ಅಳವಡಿಸಿಕೊಳ್ಳಲು ಪ್ರೇರೇಪಿಸಬಹುದು ಎಂಬುದನ್ನು ಮನೋಜ್ಞವಾಗಿ ಎಲ್ಲರ ಮುಂದಿಟ್ಟರು. ಮಕ್ಕಳೇ ಪ್ರಸ್ತುತಪಡಿಸಿದ ಶಿಕ್ಷಕರ ಸೇವೆಯನ್ನು ಕೊಂಡಾಡುವ ಸಮೂಹ ಗೀತೆ ಶಿಕ್ಷಕ ವೃತ್ತಿಯ ಸಾರ್ಥಕತೆಗೆ ಕೈಗನ್ನಡಿಯಂತಿತ್ತು. ಕರುನಾಡ ಕನ್ನಡ ಕಲಾಸಿರಿ ಬಳಗ ಬೆಂಗಳೂರು ಇವರ ವತಿಯಿಂದ ನೀಡುವ “2025 ನೇ ಸಾಲಿನ ಉತ್ತಮ ಸಾಧಕ ಶಿಕ್ಷಕ ಪ್ರಶಸ್ತಿ” ಗೆ ಭಾಜನರಾಗಿರುವ ವಿದ್ವತ್ ಕಾಲೇಜಿನ ಕನ್ನಡ ಉಪನ್ಯಾಸಕ ನೀಲಕಂಠ ಅವರನ್ನು, ಅವರ ಈ ಸಾಧನೆಗಾಗಿ ಗೌರವಿಸಲಾಯಿತು.

“ವಿದ್ವತ್ ಶಿಕ್ಷಣ ಪ್ರತಿಷ್ಠಾನ” ದ ಕಾರ್ಯದರ್ಶಿ ಪ್ರಜ್ವಲ್ ರೈ, ಆಡಳಿತ ಅಧಿಕಾರಿ ಅಶೋಕ್ ಕುಮಾರ್ ಶೆಟ್ಟಿ, ಪ್ರಾಂಶುಪಾಲರಾದ ಹರೀಶ್ ಕೆ . ಆರ್ ಹಾಗೂ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದು ಶುಭ ಹಾರೈಸಿದರು. ಸಮ್ಯಕ್ ತೇಜಸ್ವಿ ಮತ್ತು ಚಂದನ ಅಗ್ನಿಹೋತ್ರಿ ಕಾರ್ಯಕ್ರಮ ನಿರೂಪಿಸಿದರು.

Related posts

ವಲಯ ಮಟ್ಟದ ಗೀತ ಗಾಯನ ಸ್ಪರ್ಧೆ :ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಕೊಕ್ಕಡ : ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಉತ್ತರಾಖಂಡ ಸುರಖಂಡ ಶಕ್ತಿ ಪೀಠಕ್ಕೆ ಶ್ರೀ ರಾಮಕ್ಷೇತ್ರ ಮಹಾ ಸಂಸ್ಥಾನದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಭೇಟಿ

Suddi Udaya

ಜಿಲ್ಲಾ ಮಟ್ಟದ ಕ್ಲೇ ಮಾಡೆಲಿಂಗ್ ಸ್ಪರ್ಧೆ : ಅಂಡಿಂಜೆ ಸ.ಉ. ಪ್ರಾ.ಶಾಲೆ ವಿದ್ಯಾರ್ಥಿ ಹಾಷಿಕ್ ಪ್ರಥಮ ಸ್ಥಾನ

Suddi Udaya

ಕನ್ಯಾಡಿ-2 ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ “ರಾಷ್ಟ್ರೀಯ ಬಾಹ್ಯಾಕಾಶ ದಿನ”

Suddi Udaya

ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರಿಂದ ಅರಸಿನಮಕ್ಕಿ ಪಂ.ಅ. ಅಧಿಕಾರಿಯವರಿಗೆ ಮನವಿ

Suddi Udaya
error: Content is protected !!